Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ ಗ್ರಾಮ ಸೀಲ್ಡೌನ್; ಕೊರೋನ ಸೋಂಕು...

ಕೊಣಾಜೆ ಗ್ರಾಮ ಸೀಲ್ಡೌನ್; ಕೊರೋನ ಸೋಂಕು ಕಡಿಮೆಗೊಳಿಸಲು ಕಟ್ಟುನಿಟ್ಟಿನ ಕ್ರಮ: ಚಂಚಲಾಕ್ಷಿ

ವಾರ್ತಾಭಾರತಿವಾರ್ತಾಭಾರತಿ15 Jun 2021 9:45 PM IST
share
ಕೊಣಾಜೆ ಗ್ರಾಮ  ಸೀಲ್ಡೌನ್; ಕೊರೋನ ಸೋಂಕು ಕಡಿಮೆಗೊಳಿಸಲು ಕಟ್ಟುನಿಟ್ಟಿನ ಕ್ರಮ: ಚಂಚಲಾಕ್ಷಿ

ಕೊಣಾಜೆ:  ಜೂ.14 ರಿಂದ ಜೂ.21 ರವರೆಗೆ  ಜಿಲ್ಲಾಡಳಿತದ ಆದೇಶದಂತೆ ಕೊಣಾಜೆ ಗ್ರಾಮವನ್ನು ಸಂಪೂರ್ಣ ಸೀಲ್ ಡೌನ್  ಮಾಡಲಾಗಿದೆ. ಗ್ರಾಮಸ್ಥರು ಸಹಕರಿಸಬೇಕು ಎಂದು ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂಚಲಾಕ್ಷಿ ಹೇಳಿದ್ದಾರೆ.

ಕೊಣಾಜೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮದ 50 ಕ್ಕಿಂತ ಹೆಚ್ಚು ಪ್ರಕರಣಗಳನ್ನು ಕಂಡುಬಂದ ಪ್ರದೇಶಗಳಲ್ಲಿ ಹೆಚ್ಚಿನ ಪ್ರಾಧಾನ್ಯತೆ ನೀಡಿ , ವೈದ್ಯಕೀಯ ತಪಾಸಣೆ ಆರಂಭಿಸಲಾಗಿದೆ. ಕೊಣಾಜೆ ಗ್ರಾಮ ಸಂಪರ್ಕಿಸುವ  ರಾಜ್ಯ ಹಾಗೂ ರಾಷ್ಟ್ರೀಯ  ಹೆದ್ದಾರಿ  ಹೊರತುಪಡಿಸಿ ಏಳು ರಸ್ತೆಗಳನ್ನು ಬಂದ್ ಮಾಡಲಾಗಿದೆ. ಬ್ಯಾಂಕ್, ಮದ್ಯದಂಗಡಿ ಸೇರಿದಂತೆ  ಎಲ್ಲಾ ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಿ ಕಟ್ಟುನಿಟ್ಟಿನ ಶಿಸ್ತು ಜಾರಿಗೊಳಿಸಲಾಗಿದೆ. ಗ್ರಾಮದ ಎರಡು ನ್ಯಾಯಬೆಲೆ ಅಂಗಡಿಗಳನ್ನು ಪೂರ್ಣವಾಗಿ ಬಂದ್ ಮಾಡಲಾಗಿದೆ.     ತುರ್ತು ಅವಶ್ಯಕತೆ ಇದ್ದವರಿಗೆ  ಮಾತ್ರ ಹೋಗಲು ಅವಕಾಶ ಮಾಡಿಕೊಡಲಾಗಿದೆ. ಪ್ರತಿ ಗ್ರಾಮದ ಗಡಿಭಾಗದಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಆಹಾರ ಸಾಮಗ್ರಿಗಳನ್ನು ವಿತರಿಸಲು ಕೋವಿಡ್ ಕಾರ್ಯ ರಚಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು , ಗ್ರಾ.ಪಂ ಸದಸ್ಯರಿರುವ ಟಾಸ್ಕ್ ಫೋರ್ಸ್‍ನವರು ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತಿದ್ದಾರೆ. ಸಾಮಗ್ರಿಗಳನ್ನು  ಮನೆಯವರೆಗೆ ತಲುಪಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಹಣವನ್ನು ಸ್ಥಳದಲ್ಲೇ ಪಾವತಿ ಮಾಡಬಹುದು.  ಗ್ರಾಮಕ್ಕೆ   ಹೋಂಗಾರ್ಡ್ , ಪೊಲೀಸರ ಅವಶ್ಯಕತೆ ಇದೆ ಅನ್ನುವ ಕುರಿತು ತಹಸೀಲ್ದಾರ್ ಅವರಿಗೆ ಮನವಿ ಮಾಡಲಾಗಿದೆ.  ಗ್ರಾಮಕ್ಕೆ  ನಾಟೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮಾತ್ರ ಇರುವುದರಿಂದ ಅಂಬ್ಲಮೊಗರು, ಬೋಳಿಯಾರು ಪ್ರಾಥಮಿಕ ಆರೋಗ್ಯ ಕೇಂದ್ರದ ತಂಡವನ್ನು ಹೆಚ್ಚುವರಿಯಾಗಿ ಪಡೆದುಕೊಳ್ಳಲಾಗಿದೆ.  2- 3 ದಿನ ಸಹಕರಿಸಿದಲ್ಲಿ ಕೊರೋನವನ್ನು  ಸಂಪೂರ್ಣವಾಗಿ ಕಡಿಮೆಗೊಳಿಸಬಹುದು.   ಕೊಣಾಜೆಯ ಅಭಯಾಶ್ರಮದಲ್ಲಿ ಹೆಚ್ಚಿನ ಪ್ರಕರಣವಿರುವುದರಿಂದ ಗ್ರಾಮವನ್ನು ಸೀಲ್‍ಡೌನ್ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಸೋಂಕಿತರೆಲ್ಲರನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಒಬ್ಬರು ಸಾವನ್ನಪ್ಪಿದ್ದಾರೆ. ಗ್ರಾಮದಲ್ಲಿ ಒಟ್ಟು  79 ಪ್ರಕರಣಗಳು ಸಕ್ರಿಯವಾಗಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಉಪಾಧ್ಯಕ್ಷ ರಾಮಕೃಷ್ಣ ಪಟ್ಟೋರಿ, ಮಾಜಿ ಅಧ್ಯಕ್ಷರುಗಳಾದ ನಝರ್ ಷಾ ಪಟ್ಟೋರಿ,  ಅಚ್ಯುತ್ತ ಗಟ್ಟಿ ಹಾಗೂ ಸದಸ್ಯರುಗಳಾದ ಇಕ್ಬಾಲ್ ಕೊಣಾಜೆ, ಪ್ರೇಮದಾಸ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X