Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುರಕ್ಷಿತ ತಾಣ ಸ್ಥಾನಮಾನ ಕಳೆದುಕೊಂಡ...

ಸುರಕ್ಷಿತ ತಾಣ ಸ್ಥಾನಮಾನ ಕಳೆದುಕೊಂಡ ಟ್ವಿಟ್ಟರ್ : ಹೊಸ ಐಟಿ ನಿಯಮಗಳಂತೆ ಅಧಿಕಾರಿಯನ್ನು ನೇಮಿಸಲು ಸಂಸ್ಥೆ ವಿಫಲ

ವಾರ್ತಾಭಾರತಿವಾರ್ತಾಭಾರತಿ16 Jun 2021 1:03 PM IST
share
ಸುರಕ್ಷಿತ ತಾಣ ಸ್ಥಾನಮಾನ ಕಳೆದುಕೊಂಡ ಟ್ವಿಟ್ಟರ್ : ಹೊಸ ಐಟಿ ನಿಯಮಗಳಂತೆ ಅಧಿಕಾರಿಯನ್ನು ನೇಮಿಸಲು ಸಂಸ್ಥೆ ವಿಫಲ

ಹೊಸದಿಲ್ಲಿ :  ಭಾರತದ ಹೊಸ ಐಟಿ ನಿಯಮಗಳಿಗನುಸಾರವಾಗಿ ಟ್ವಿಟ್ಟರ್  ಸ್ಟೆಟ್ಯೂಟರಿ ಅಧಿಕಾರಿಗಳನ್ನು ನೇಮಕಗೊಳಿಸಲು ವಿಫಲವಾಗಿರುವುದರಿಂದ  ಯಾವುದೇ ಬಳಕೆದಾರ ಟ್ವಿಟ್ಟರ್‍ನಲ್ಲಿ ಪೋಸ್ಟ್ ಮಾಡಬಹುದಾದ ʼಕಾನೂನುಬಾಹಿರ' ಮತ್ತು ʼಪ್ರಚೋದನಕಾರಿʼ ಕಂಟೆಂಟ್‍ಗೆ ಕಂಪೆನಿಯ ಭಾರತದ ಆಡಳಿತ ನಿರ್ದೇಶಕರು ಸಹಿತ ಇತರ ಉನ್ನತ ಅಧಿಕಾರಿಗಳು ಪೊಲೀಸ್ ವಿಚಾರಣೆ ಸಹಿತ ಐಪಿಸಿ ಅನ್ವಯ  ಕ್ರಿಮಿನಲ್ ಪ್ರಕರಣ ಕೂಡ ಎದುರಿಸಬೇಕಾಗಿದೆ.

ಇದರೊಂದಿಗೆ  ಐಟಿ ಕಾಯಿದೆಯ ಸೆಕ್ಷನ್ 79 ಅನ್ವಯ ರಕ್ಷಾ ಕವಚವನ್ನು ಭಾರತದಲ್ಲಿ ಕಳೆದುಕೊಂಡ ಅಮೆರಿಕಾದ ಏಕೈಕ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಆಗಿದೆ.  ಗೂಗಲ್, ಯುಟ್ಯೂಬ್, ಫೇಸ್ ಬುಕ್, ವಾಟ್ಸ್ಯಾಪ್ ಮತ್ತು ಇನ್‍ಸ್ಟಾಗ್ರಾಂ ವೇದಿಕೆಗಳಿಗೆ ಈಗಲೂ ಸೆಕ್ಷನ್ 79 ಅನ್ವಯ ರಕ್ಷಾ ಕವಚವಿದೆ.

"ಮಾರ್ಗಸೂಚಿಗಳ ಪಾಲನೆಗೆ ಟ್ವಿಟ್ಟರ್‍ಗೆ ಹೆಚ್ಚುವರಿ ಸಮಯ ಒದಗಿಸಲಾಗಿತ್ತು, ಆದರೂ ಅದು ನಿಯಮ ಪಾಲನೆಗೆ ಮುಂದಾಗಿಲ್ಲ, ಆದುದರಿಂದ ಟ್ವಿಟ್ಟರ್ ಸುರಕ್ಷಿತ ತಾಣ ರಕ್ಷಣೆಯನ್ನು ಕಳೆದುಕೊಂಡಿದೆ ಹಾಗೂ ಥರ್ಡ್ ಪಾರ್ಟಿ ಕಂಟೆಂಟ್‍ಗೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ" ಎಂದು ಸರಕಾರಿ ಮೂಲಗಳು ತಿಳಿಸಿವೆ.

ಭಾರತ ಸರಕಾರದ ಸೂಚನೆಯಂತೆ ಅಧಿಕಾರಿಗಳನ್ನು ಟ್ವಿಟ್ಟರ್ ಮೇ 25ರೊಳಗೆ ನೇಮಕ ಮಾಡಬೇಕಿತ್ತು. ಟ್ವಿಟ್ಟರ್ ಆರಂಭದಲ್ಲಿ ಕೆಲವು ನೇಮಕಾತಿಗಳನ್ನು ಮಾಡಿದ್ದರೂ ನೇಮಕಗೊಂಡವರು ಕಂಪೆನಿಯ ನೇರ ಉದ್ಯೋಗಿಗಳಾಗಿರದೇ ಇದ್ದುದರಿಂದ ಸರಕಾರ ಈ ನೇಮಕಾತಿಗಳನ್ನು ತಿರಸ್ಕರಿಸಿತ್ತು.

ಕಂಪೆನಿಯು ʼಹಂಗಾಮಿʼ ಮುಖ್ಯ ಕಂಪ್ಲಯನ್ಸ್ ಅಧಿಕಾರಿಯನ್ನು ನೇಮಕ ಮಾಡಿದೆ  ಹಾಗೂ ಈ ಮಾಹಿತಿಯನ್ನು ಸದ್ಯದಲ್ಲಿಯೇ ಐಟಿ ಸಚಿವಾಲಯದ ಜತೆ ಶೇರ್ ಮಾಡಲಾಗುವುದು ಎಂದು ಸಂಸ್ಥೆಯ ವಕ್ತಾರರೊಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X