Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಇಂಧನ ಬೆಲೆ ಏರಿಕೆ ಖಂಡಿಸಿ...

ಶಿವಮೊಗ್ಗ: ಇಂಧನ ಬೆಲೆ ಏರಿಕೆ ಖಂಡಿಸಿ ಭಿತ್ತಿ ಪತ್ರ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Jun 2021 3:43 PM IST
share
ಶಿವಮೊಗ್ಗ: ಇಂಧನ ಬೆಲೆ ಏರಿಕೆ ಖಂಡಿಸಿ ಭಿತ್ತಿ ಪತ್ರ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ, ಜೂ.16: ಇಂಧನ ಬೆಲೆ ಏರಿಕೆ ವಿರೋಧಿಸಿ ಪಾಲಿಕೆ ಸದಸ್ಯ ಹೆಚ್.ಸಿ.ಯೋಗೀಶ್ ನೇತೃತ್ವದಲ್ಲಿ ಕುವೆಂಪು ರಸ್ತೆಯ ನಂದಿ ಪೆಟ್ರೋಲ್ ಬಂಕ್‌ನಲ್ಲಿ ಕಾಂಗ್ರೆಸ್ ಮುಖಂಡರು ಭಿತ್ತಿ ಪತ್ರ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಗಗನಕ್ಕೇರಿದೆ. ಕೇಂದ್ರ ಸರ್ಕಾರ ಬಡ ಮತ್ತು ಮಧ್ಯ ವರ್ಗದ ಮೇಲೆ ಗದಾಪ್ರಹಾರ ನಡೆಸಿದೆ. ಶ್ರೀಮಂತರಿಗೆ ಮಣೆ ಹಾಕಿದ ಸರ್ಕಾರ ಬಡವರನ್ನು ತುಳಿಯುತ್ತಿದೆ. ಶ್ರೀಸಾಮಾನ್ಯರ ಬದುಕನ್ನು ಕಸಿದುಕೊಂಡು ತೆರಿಗೆಯನ್ನು ಏರಿಸಿ ಅಕ್ಷರಶಃ ಸುಲಿಗೆಗೆ ಇಳಿದಿದೆ. ಈ ಹಗಲು ದರೋಡೆಯ ವಿರುದ್ಧ ಕಾಂಗ್ರೆಸ್ ತನ್ನ ಹೋರಾಟವನ್ನು ಮುಂದುವರೆಸಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಕೇಂದ್ರ ಸರ್ಕಾರ ಶ್ರೀಮಂತರ ಮೇಲಿನ ಕಾರ್ಪೊರೇಟ್ ತೆರಿಗೆಯನ್ನು ಶೇ.30 ರಿಂದ ಶೇ.22ಕ್ಕೆ ಇಳಿಸಿದೆ. ಆದರೆ ಜನ ಸಾಮಾನ್ಯರು ನಿತ್ಯ ಬಳಸುವ ವಸ್ತುಗಳ ಮೇಲೆ ತೆರಿಗೆ ಏರಿಸಿದೆ. ಗರೀಬಿ ಹಠಾವೋ ಎಂಬ ಇವರ ಘೋಷಣೆ ಕೇವಲ ನೆಪ ಮಾತ್ರಕ್ಕೆ ಎಂಬಂತಾಗಿದ್ದು, ಇದು ಬಂಡವಾಳಶಾಹಿಗಳ ಪರವಾದ ಸರ್ಕಾರ ಎಂದು ಟೀಕಿಸಿದರು.

ಪಾಕಿಸ್ತಾನ, ಶ್ರೀಲಂಕಾ, ಭೂತಾನ್, ಬಾಂಗ್ಲಾದೇಶ, ನೇಪಾಳ ಮುಂತಾದ ದೇಶಗಳಲ್ಲಿ ತೈಲಬೆಲೆ 50 ರಿಂದ 70 ರೂ. ಒಳಗೆ ಇದ್ದರೆ ಭಾರತದಲ್ಲಿ ಮಾತ್ರ ಶತಕ ಬಾರಿಸಿದೆ. ಎಲ್‌ಪಿಜಿ ಗ್ಯಾಸ್ ಬೆಲೆಯು ಕೂಡ ಏರಿದೆ. ಕೇಂದ್ರ ಸರ್ಕಾರ ಕೂಡಲೆ ತೈಲ ಬೆಲೆ ಮತ್ತು ಗ್ಯಾಸ್ ಬೆಲೆಯನ್ನು ಇಳಿಸಬೇಕು. ಬೇಕಾಬಿಟ್ಟಿ ಏರಿಸಿರುವ ತೆರಿಗೆಗಳನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಾಲಿಕೆ ಸದಸ್ಯ ಹೆಚ್.ಸಿ.ಯೋಗೀಶ್, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಅಂತರ್‌ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿದ್ದರೂ ಕೂಡ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯನ್ನು ಆಗ ಏರಿಸಿರಲಿಲ್ಲ. ಆದರೆ ಈಗ ಅಂತರ್‌ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಬೆಲೆ ಇಳಿಕೆಯಾಗಿದ್ದರೂ ಕೂಡ ಏರಿಸಲಾಗಿದೆ. ಜನರು ಬಿಜೆಪಿ ಸರ್ಕಾರವನ್ನು ನಂಬಿಕೊಂಡು ಮತ ಹಾಕಿ ಗೆಲ್ಲಿಸಿದ್ದಾರೆ. ಅವರಿಗೆ ನೀವೇನು ಉತ್ತರ ಕೊಡುತ್ತೀರಿ ಎಂದು ಪ್ರಶ್ನಿಸಿದರು.

ಭಾವನಾತ್ಮಕ ವಿಷಯಗಳ ಮೇಲೆ ಬಡವರ ಮೇಲೆ ದಾಳಿ ನಡೆಸುತ್ತಿರುವ ಕೇಂದ್ರ ಸರ್ಕಾರ ತನ್ನ ಭಕ್ತರಿಗೆ ಪ್ರತ್ಯೇಕ ಪೆಟ್ರೋಲ್ ಬಂಕ್‌ಗಳನ್ನು ತೆರೆದು ಅವರ ಹತ್ತಿರ ಎಷ್ಟು ಬೇಕಾದರೂ ತೆರಿಗೆ ವಸೂಲು ಮಾಡಲಿ. ಆದರೆ ಬಡವರಿಗೆ ಮಾತ್ರ ತೈಲ ಬೆಲೆಯನ್ನು ಇಳಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ವಿಶ್ವನಾಥ್ ಕಾಶಿ,ರಂಗನಾಥ್, ರವಿಕುಮಾರ್, ಮಂಜುಳಾ ಶಿವಣ್ಣ, ನವೀನ್, ದೇವೇಂದ್ರಪ್ಪ, ಕುಮರೇಶ್, ರಂಗೇಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X