Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಐಡಿ ತನಿಖೆಗೆ ಸಂಪೂರ್ಣ ಸಹಕಾರ, ನ್ಯಾಯ...

ಸಿಐಡಿ ತನಿಖೆಗೆ ಸಂಪೂರ್ಣ ಸಹಕಾರ, ನ್ಯಾಯ ಸಿಗದಿದ್ದರೆ ಹೋರಾಟ: ಕೊಡಗು ಕ್ರೈಸ್ತ ಸೇವಾ ಸಂಘ

ರಾಯ್ ಡಿಸೋಜ ಸಾವು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ16 Jun 2021 5:53 PM IST
share

ಮಡಿಕೇರಿ, ಜೂ.16: ವಿರಾಜಪೇಟೆಯ ಚಿಕ್ಕಪೇಟೆ ನಿವಾಸಿ ರಾಯ್ ಡಿಸೋಜ ಅವರ ಸಾವಿನ ಪ್ರಕರಣವನ್ನು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ, ಜಿಲ್ಲಾ ರೋಮನ್ ಕ್ಯಾಥೋಲಿಕ್ ಸಂಘ ಮತ್ತು ವಿವಿಧ ಕೈಸ್ತ ಸಂಘಟನೆಗಳು ಖಂಡಿಸಿವೆ, ಅಲ್ಲದೆ ವಿಷಾದ ವ್ಯಕ್ತಪಡಿಸಿವೆ.

ಪತ್ರಿಕಾ ಪ್ರಕಟಣೆ ನೀಡಿರುವ ಕ್ರೈಸ್ತ ಸೇವಾ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು ಅವರು ಕೊಡಗು ಜಿಲ್ಲಾಡಳಿತ ಹಾಗೂ ಪೊಲೀಸ್ ವ್ಯವಸ್ಥೆ ಉತ್ತಮವಾಗಿದೆ. ಆದರೆ ಇತ್ತೀಚಿಗೆ ಮಾನಸಿಕ ಅಸ್ವಸ್ಥನ ಮೇಲೆ ಕೆಲವು ಪೊಲೀಸರು ದೌರ್ಜನ್ಯ ನಡೆಸಿರುವುದು ಖಂಡನಾರ್ಹವೆಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಿಐಡಿ ತನಿಖೆಗೆ ನಮ್ಮ ಸಂಪೂರ್ಣ ಸಹಕಾರವಿದೆ, ಆದರೆ ಅಮಾಯಕ ರಾಯ್ ಸಾವಿಗೆ ಒಂದು ವೇಳೆ ನ್ಯಾಯ ಸಿಗದಿದ್ದಲ್ಲಿ ಲಾಕ್‍ಡೌನ್ ನಂತರ ಹೋರಾಟ ರೂಪಿಸುವುದು ಅನಿವಾರ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಘಟನೆಯ ಸಿಸಿಟಿವಿ ದೃಶ್ಯಗಳು ಎಲ್ಲಾ ಕಡೆ ಹರಿದಾಡುತ್ತಿದ್ದು, ರಾಯ್ ಡಿಸೋಜ ಮಾನಸಿಕ ಅಸ್ವಸ್ಥ ಎನ್ನುವುದನ್ನು ಸಾಬೀತು ಮಾಡಿದೆ. ಜೂ.10ರಂದು ಸೂರ್ಯಗ್ರಹಣವಿದ್ದ ಕಾರಣ ಅದರ ಹಿಂದಿನ ದಿನದ ರಾತ್ರಿ ರಾಯ್ ಮಾನಸಿಕವಾಗಿ ಮತ್ತಷ್ಟು ಅಸ್ವಸ್ಥಗೊಂಡು ಯಾರಿಗೂ ತಿಳಿಯದ ಹಾಗೆ ಮನೆಯಿಂದ ಹೊರ ಹೋಗಿದ್ದಾರೆ. ನಂತರ ದಾರುಣ ಅಂತ್ಯ ಕಂಡಿದ್ದು, ಇದನ್ನು ಕುಟುಂಬ ವರ್ಗಕ್ಕೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ಹೇಳಿದ್ದಾರೆ. 

ಪೊಲೀಸ್ ಇಲಾಖೆಯ ಮೇಲೆ ನಮಗೆ ಅಪಾರ ಗೌರವವಿದೆ, ಆದರೆ ಕೆಲವರ ಅಮಾನವೀಯ ವರ್ತನೆಯಿಂದ ಇಡೀ ಪೊಲೀಸ್ ವ್ಯವಸ್ಥೆಗೆ ಕಳಂಕವಾಗಿದೆ. ಮಡಿಕೇರಿ ತಹಶೀಲ್ದಾರ್ ಮಹೇಶ್ ಅವರ ಉಪಸ್ಥಿತಿಯಲ್ಲಿ ರಾಯ್ ಡಿಸೋಜ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಾಗ ನಾನು, ರೋಮನ್ ಕ್ಯಾಥೋಲಿಕ್ ಸಂಘದ ಉಪಾಧ್ಯಕ್ಷ ಜಾನ್ಸನ್ ಪಿಂಟೋ ಹಾಗೂ ಗಿಲ್ಬರ್ಟ್ ಲೋಬೊ ಹಾಜರಿದ್ದು, ಗಮನಿಸಿದಾಗ ರಾಯ್ ಗೆ ಚಿತ್ರಹಿಂಸೆ ನೀಡಿರುವುದು ಸ್ಪಷ್ಟವಾಗಿದೆ ಎಂದು ಬೇಬಿಮ್ಯಾಥ್ಯು ಗಮನ ಸೆಳೆದಿದ್ದಾರೆ.

ಯಾವುದೇ ಒಬ್ಬ ಮನುಷ್ಯನಿಗೆ ಈ ರೀತಿಯ ಚಿತ್ರಹಿಂಸೆಯನ್ನು ರಕ್ಷಕರಾದ ಪೊಲೀಸರು ನೀಡಬಾರದು. ಉತ್ತಮ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ವರಿಷ್ಠಾಧಿಕಾಗಳಿರುವ ಕೊಡಗು ಜಿಲ್ಲೆಯಲ್ಲಿ ಈ ರೀತಿಯ ಅಮಾನುಷ ಕೃತ್ಯ ನಡೆದಿರುವುದರಿಂದ ಇಡೀ ಇಲಾಖೆ ತಲೆ ತಗ್ಗಿಸುವಂತಾಗಿದೆ.
ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಎ.ಎಸ್.ಪೊನ್ನಣ್ಣ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಅವರು ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ. ವಿವಿಧ ಸಂಘ, ಸಂಸ್ಥೆಗಳು ಮೃತ ರಾಯ್ ತಾಯಿ ಹಾಗೂ ಸಹೋದರನಿಗೆ ಸಾಂತ್ವನ ಹೇಳಿರುವುದಲ್ಲದೆ, ಪ್ರಕರಣದ ತನಿಖೆಗೆ ಒತ್ತಾಯಿಸಿದ್ದರು. ಮೈಸೂರು ಧರ್ಮ ಪ್ರಾಂತೀಯ ಧರ್ಮಾಧ್ಯಕ್ಷ ಡಾ.ಕೆ.ಎ.ವಿಲಿಯಂ ಸೇರಿದಂತೆ ವಿವಿಧ ಪ್ರಾಂತೀಯ ಧರ್ಮಗುರುಗಳು ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಪೊಲೀಸ್ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಉನ್ನತ ಮಟ್ಟದ ತನಿಖೆಗಾಗಿ ಒತ್ತಡ ಹೇರಿದ್ದರು. ಇದರ ಪರಿಣಾಮ ಇಂದು ಸಿಐಡಿ ತನಿಖೆ ಆರಂಭಗೊಂಡಿದೆ ಎಂದು ತಿಳಿಸಿದ್ದಾರೆ.  

ದಕ್ಷಿಣ ವಲಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಮಧುಕರ್ ಅವರು ವಿರಾಜಪೇಟೆಗೆ ಆಗಮಿಸಿ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದ್ದಾರೆ. ಇದೀಗ ನಾಲ್ವರು ಸಿಐಡಿ ಉನ್ನನಾಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದು ನಮ್ಮ ಹೋರಾಟಕ್ಕೆ ಸಿಕ್ಕಿದ ಮೊದಲ ಜಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಯ್ ಡಿಸೋಜ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿ ತಪ್ಪಿತಸ್ತರಿಗೆ ಶಿಕ್ಷಯಾಗಬೇಕೆಂದು ಬೆಂಬಲ ಸೂಚಿಸಿದ ಮಾಜಿ ಮುಖ್ಯಮಂತ್ರಿಗಳು, ಪಟ್ಟಣ ಪಂಚಾಯತ್, ಗ್ರಾ.ಪಂ ಸದಸ್ಯರುಗಳು, ಎಲ್ಲಾ ರಾಜಕೀಯ ಪಕ್ಷಗಳ ಪ್ರಮುಖರು, ಸಂಘ ಸಂಸ್ಥೆಗಳ ಮುಖಂಡರುಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಬೇಬಿ ಮ್ಯಾಥ್ಯು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X