Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇಂಡೋ-ಇಸ್ರೇಲ್ ಕೃಷಿ ಯೋಜನೆ ಅಡಿಯಲ್ಲಿ...

ಇಂಡೋ-ಇಸ್ರೇಲ್ ಕೃಷಿ ಯೋಜನೆ ಅಡಿಯಲ್ಲಿ ರಾಜ್ಯದ ಮೂರು ಉತ್ಕೃಷ್ಟ ಕೇಂದ್ರಗಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 Jun 2021 10:47 PM IST
share
ಇಂಡೋ-ಇಸ್ರೇಲ್ ಕೃಷಿ ಯೋಜನೆ ಅಡಿಯಲ್ಲಿ ರಾಜ್ಯದ ಮೂರು ಉತ್ಕೃಷ್ಟ ಕೇಂದ್ರಗಳ ಉದ್ಘಾಟನೆ

ಬೆಂಗಳೂರು, ಜೂ.16: ತೋಟಗಾರಿಕಾ ಕ್ಷೇತ್ರದಲ್ಲಿ ಇಸ್ರೇಲ್ ತಂತ್ರಜ್ಞಾನಗಳ ಅಳವಡಿಕೆಗಾಗಿ ಇಂಡೋ-ಇಸ್ರೇಲ್ ಕೃಷಿ ಯೋಜನೆ ಅಡಿಯಲ್ಲಿ ಕರ್ನಾಟಕದಲ್ಲಿ ಸ್ಥಾಪಿಸಿರುವ ಮೂರು ಉತ್ಕೃಷ್ಟ ಕೇಂದ್ರಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಜಂಟಿಯಾಗಿ ವರ್ಚುಯಲ್ ವೇದಿಕೆ ಮೂಲಕ ಬುಧವಾರ ಉದ್ಘಾಟಿಸಿದರು.

ಭಾರತ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಮಂತ್ರಾಲಯ ವಿಭಾಗವಾದ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಮಿಷನ್ ಮತ್ತು ಮಷಾವ್-ಇಸ್ರೇಲ್‍ನ ಅಂತರ್‍ರಾಷ್ಟ್ರೀಯ ಅಭಿವೃದ್ಧಿ ಸಹಕಾರ ಏಜೆನ್ಸಿಯು ಇಸ್ರೇಲ್‍ನ ಪ್ರಮುಖ ಜಿ2ಜಿ ಸಹಕಾರಿ ಸಂಸ್ಥೆಯಾಗಿದ್ದು, ಭಾರತದಾದ್ಯಂತ 12 ರಾಜ್ಯಗಳಲ್ಲಿ 29 ಸಕ್ರಿಯ ಉತ್ಕೃಷ್ಟ ಕೇಂದ್ರಗಳಲ್ಲಿ ಆಧುನಿಕ ಇಸ್ರೇಲ್ ಕೃಷಿ ತಂತ್ರಜ್ಞಾನಗಳನ್ನು ಸ್ಥಳೀಯ ಹವಾಗುಣಗಳಿಗನುಗುಣವಾಗಿ ಅನುಷ್ಠಾನಗೊಳಿಸುತ್ತಿದೆ.

ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ 29 ಉತ್ಕೃಷ್ಟ ಕೇಂದ್ರಗಳಲ್ಲಿ ಮೂರು ಕೇಂದ್ರಗಳನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಲಾಗಿದೆ. ಅವುಗಳೆಂದರೆ, ಕೋಲಾರದ ಮಾವು ಉತ್ಕೃಷ್ಟ ಕೇಂದ್ರ, ಬಾಗಲಕೋಟೆಯ ದಾಳಿಂಬೆ ಉತ್ಕೃಷ್ಟ ಕೇಂದ್ರ ಮತ್ತು ಧಾರವಾಡದ ತರಕಾರಿ ಬೆಳೆಗಳ ಉತ್ಕೃಷ್ಟ ಕೇಂದ್ರಗಳು. ಈ ಉತ್ಕೃಷ್ಟ ಕೇಂದ್ರಗಳು ಸ್ಥಳೀಯ ಹವಾಗುಣಕ್ಕೆ ಹೊಂದುವಂತ ಇಸ್ರೇಲ್‍ನ ನವೀನ ಕೃಷಿ ತಂತ್ರಜ್ಞಾನಗಳ ಕುರಿತಾಗಿ ರೈತರಿಗೆ ಜ್ಞಾನವನ್ನು ವೃದ್ಧಿಸುವ, ಉತ್ತಮ ಕೃಷಿ ಪದ್ಧತಿಗಳನ್ನು ಪ್ರಾತ್ಯಕ್ಷಿಸುವ ಮತ್ತು ರೈತರಿಗೆ ತರಬೇತಿ ನೀಡುವ ಒಂದು ಅತ್ಯಾಧುನಿಕ ಕೃಷಿ ವೇದಿಕೆ ಆಗಿದೆ.

ಹೊಸದಾಗಿ ಉದ್ಘಾಟಿಸಲಾದ ಈ ಉತ್ಕೃಷ್ಟ ಕೇಂದ್ರಗಳು ರೈತರಿಗೆ ಸುಧಾರಿತ ತಂತ್ರಜ್ಞಾನವನ್ನು ಆಯ್ಕೆ ಮಾಡಿಕೊಂಡು ಹಾಗೂ ಅಳವಡಿಸಿಕೊಂಡು ಉತ್ತಮ ಬೆಳೆ ಬೆಳೆಯಲು ಹಾಗೂ ಅವರ ಆದಾಯವನ್ನು ದುಪ್ಪಟ್ಟುಗೊಳಿಸಲು ನೆರವಾಗುತ್ತವೆ.

ಬಾಗಲಕೋಟೆಯ ದಾಳಿಂಬೆ ಉತ್ಕೃಷ್ಟ ಕೇಂದ್ರದಲ್ಲಿ ಸುಧಾರಿತ ತಂತ್ರಜ್ಞಾನಗಳಾದ ನಿಖರ ಬೇಸಾಯ ಪದ್ದತಿಯನ್ವಯ ಉಪಗ್ರಹ ಚಿತ್ರಣದ ಆಧಾರದ ಮೇಲೆ ನೀರಿನ ನಿರ್ವಹಣೆ, ಸ್ವಯಂಚಾಲಿತ ರಸಾವರಿ ಪದ್ದತಿ(ಹನಿ ನೀರಾವರಿ ಮುಖಾಂತರ ವಿಶೇಷ ರಸಗೊಬ್ಬರಗಳ ಪೂರೈಕೆ) ಹಾಗೂ ಸುಧಾರಿತ ದಾಳಿಂಬೆ ತಳಿಯಾದ ಸೂಪರ್ ಭಗವಾ ತಳಿಯ ಮೇಲಾವರಣಾ (ಕೆನೋಪಿ) ನಿರ್ವಹಣಾ ತಂತ್ರಗಳ ಪ್ರಯೋಜನಕಾರಿ ಪ್ರಾತ್ಯಕ್ಷಿಕೆಗಳನ್ನು ಕೈಗೊಳ್ಳಲಾಗುತ್ತಿದೆ.

ಕೋಲಾರದ ಮಾವು ಉತ್ಕೃಷ್ಟ ಕೇಂದ್ರದಲ್ಲಿ ಅತ್ಯಾಧುನಿಕ ಮತ್ತು ವಾಣಿಜ್ಯ ಹೈಟೆಕ್ ನರ್ಸರಿ (ಸಸ್ಯಪಾಲನೆ) ನಿರ್ವಹಣೆ ಮಾಡುವ ಮೂಲಕ ಹಾಗೂ ಇಸ್ರೇಲಿ ರೂಟ್ ಸ್ಟಾಕ್ ಗಳನ್ನು ಬಳಸಿ ಉತ್ತಮ ಇಳುವರಿ ನೀಡುವ ತಳಿಗಳ ಅಭಿವೃದ್ಧಿಯನ್ನೊಳಗೊಂಡಂತೆ ಮಾವಿನ ಬೆಳೆಯಲ್ಲಿ ಸುಧಾರಿತ ಬೇಸಾಯ ಪದ್ದತಿಗಳನ್ನು ಅನುಸರಿಸಲಾಗುತ್ತಿದೆ.

ಕೇಂದ್ರದಲ್ಲಿ ಮಾವಿನ ಬೆಳೆಯಲ್ಲಿ ಅಧಿಕ ಸಾಂಧ್ರತೆ ಪದ್ಧತಿ ಅಳವಡಿಕೆ ಹಾಗೂ ಹಳೆಯ ಅಥವಾ ಅನುತ್ಪಾದಕ ಮರಗಳ ಪುನಃಶ್ಚೇತನವನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ, ಹನಿ ನೀರಾವರಿ ಮತ್ತು ರಸಾವರಿ ಪದ್ಧತಿಗಳ ಅಳವಡಿಕೆಯಿಂದ ನೀರಿನ ಕ್ಷಮತೆ ಮತ್ತು ಸದ್ಬಳಕೆ ಮಾಡಲಾಗುತ್ತಿದೆ.

ಧಾರವಾಡದ ತರಕಾರಿ ಬೆಳೆಗಳ ಉತ್ಕೃಷ್ಟ ಕೇಂದ್ರವು ಅತ್ಯಾಧುನಿಕ ಮತ್ತು ವಾಣಿಜ್ಯ ಹೈಟೆಕ್ ನರ್ಸರಿ ಹೊಂದಿದ್ದು, ಉತ್ತಮ ಗುಣಮಟ್ಟದ ತರಕಾರಿ ಸಸಿಗಳನ್ನು ಉತ್ಪಾದಿಸಲಾಗುತ್ತಿದೆ. ಇಸ್ರೇಲ್ ಮಾನದಂಡಗಳೊಂದಿಗೆ ಹಸಿರು ಮನೆಗಳಲ್ಲಿ ಉತ್ತಮ ಬೇಸಾಯ ಪದ್ಧತಿಗಳನ್ನು ಪ್ರಾತ್ಯಕ್ಷಿಲಾಗುತ್ತಿದೆ. ತರಕಾರಿ ಬೆಳೆಗಳ ಇಸ್ರೇಲ್ ತಳಿಗಳನ್ನು ಸಹ ಪರಿಚಯಿಸಲಾಗುತ್ತಿದ್ದು, ತರಕಾರಿ ಬೆಳೆಗಳಲ್ಲಿ ನೆಮಟೋಡ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕೃಷಿಯಲ್ಲಿ ಇಂಡೊ-ಇಸ್ರೇಲ್ ಅಭಿವೃದ್ಧಿ ಸಹಕಾರವನ್ನು ಮತ್ತಷ್ಟು ಮುಂದಿನ ಹಂತಕ್ಕೆ ಕೊಂಡೊಯ್ಯಲು ಇಂಡೋ-ಇಸ್ರೇಲ್ ಉತ್ಕೃಷ್ಟ ಗ್ರಾಮಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.  ಈ ಉಪಕ್ರಮವನ್ನು ಕರ್ನಾಟಕವು ಸೇರಿದಂತೆ ಭಾರತದಾದ್ಯಂತ ಎಂಟು ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯದ ಬಾಗಲಕೋಟೆ ಮತ್ತು ಕೋಲಾರ ಉತ್ಕೃಷ್ಟ ಕೇಂದ್ರಗಳ ಸುತ್ತಲಿನ  10 ಗ್ರಾಮಗಳಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತದೆ.

ಇಂಡೋ-ಇಸ್ರೇಲ್ ಉತ್ಕೃಷ್ಟ ಗ್ರಾಮ ಕಾರ್ಯಕ್ರಮವು ಆಧುನಿಕ ಕೃಷಿ ಮೂಲಭೂತ ಸೌಕರ್ಯವನ್ನು ಸ್ಥಾಪಿಸುವ ಮತ್ತು ಸಾಮಥ್ರ್ಯ ವೃದ್ಧಿಪಡಿಸುವ ಚಟುವಟಿಕೆಗಳೊಂದಿಗೆ ರೈತರನ್ನು ಬೆಂಬಲಿಸುವ ಹಾಗೂ ಪ್ರತಿಯೊಬ್ಬ ರೈತನ ಆದಾಯವನ್ನು ಹೆಚ್ಚಿಸುವ ಕಡೆಗೆ ಗಮನ ಹರಿಸಲಾಗುತ್ತಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, “ಕರ್ನಾಟಕದಲ್ಲಿ ತೋಟಗಾರಿಕಾ ಉತ್ಪನ್ನಗಳ ಉತ್ಪಾದನೆ ಹಾಗೂ ಉತ್ಪಾದಕತೆಯನ್ನು ಹೆಚ್ಚಿಸಲು ಹಾಗೂ ಕೊಯ್ಲೋತ್ತರ ನಿರ್ವಹಣೆಯಲ್ಲಿ ಹೊಸ ತಂತ್ರಜ್ಞಾನಗಳ ಅಳವಡಿಕೆಗೆ ಸಂಬಂಧಿಸಿದಂತೆ ವಿಪುಲವಾದ ಅವಕಾಶಗಳಿವೆ” ಎಂದು ಹೇಳಿದರು.

ತೋಟಗಾರಿಕೆ ಉತ್ಪನ್ನಗಳ ಗುಣಮಟ್ಟದ ಉತ್ಪಾದನೆ, ಉತ್ಪಾದಕತೆಯನ್ನು ಸುಧಾರಿತ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ಹೆಚ್ಚಿಸಿ, ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿ ಸುಸ್ಥಿರತೆಯನ್ನು ಸಾಧಿಸಲು ಇಂಡೋ-ಇಸ್ರೇಲ್ ಕೃಷಿ ಯೋಜನೆ ಅಡಿಯಲ್ಲಿ ಈ ಉತ್ಕೃಷ್ಟ ಕೇಂದ್ರಗಳನ್ನು ರಾಜ್ಯದಲ್ಲಿ ಸ್ಥಾಪಿಸಲು ಆರ್ಥಿಕ ಮತ್ತು ತಾಂತ್ರಿಕ ನೆರವನ್ನು ಒದಗಿಸಿರುವ ಭಾರತ ಸರಕಾರ ಹಾಗೂ ಇಸ್ರೇಲ್ ಸರಕಾರಕ್ಕೆ ಅವರು ಧನ್ಯವಾದಗಳು ಎಂದರು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಮಾತನಾಡಿ, ಈ ಕೇಂದ್ರಗಳಿಂದ ನೂತನ ಇಸ್ರೇಲಿ ತಂತ್ರಜ್ಞಾನಗಳು ರೈತರಿಗೆ ಅಳವಡಿಸಿಕೊಳ್ಳಲು ದೊರಕಲಿದ್ದು, ಅವುಗಳನ್ನು ಅಳವಡಿಸಿಕೊಂಡು ತೋಟಗಾರಿಕೆ ಬೆಳೆಗಳ ಉತ್ಪಾದನೆ ಹಾಗೂ ಉತ್ಪಾದಕತೆಯನ್ನು ಹೆಚ್ಚಿಸಿಕೊಳ್ಳಲು ನೆರವಾಗುತ್ತವೆ. ಇದರಿಂದಾಗಿ ರೈತರ ಆದಾಯವನ್ನು ದ್ವಿಗುಣಗೊಳಿಸಬಹುದಾಗಿದೆ ಎಂದರು.

ಈ ಉತ್ಕೃಷ್ಟ ಕೇಂದ್ರಗಳು ವಾರ್ಷಿಕ 50,000 ಕಸಿ/ಸಸಿಗಳ ಉತ್ಪಾದನೆ ಮತ್ತು 25 ಲಕ್ಷ ತರಕಾರಿ ಸಸಿಗಳ ಉತ್ಪಾದನೆಯ ಸಾಮರ್ಥ್ಯವನ್ನು ಹೊಂದಿದ್ದು, ಸುಮಾರು 20,000 ಕ್ಕೂ ಅಧಿಕ ರೈತರುಗಳು ಈ ಉತ್ಕೃಷ್ಟ ಕೇಂದ್ರಗಳಿಗೆ ಭೇಟಿ ನೀಡಿ ತೋಟಗಾರಿಕೆ ಬೆಳೆಗಳಲ್ಲಿ ಆಧುನಿಕ ಬೇಸಾಯ ಪದ್ದತಿಗಳ ಬಗ್ಗೆ ಮಾಹಿತಿಯನ್ನು ಪಡೆದಿರುತ್ತಾರೆ ಎಂದು ಹೇಳಿದರು.

ಸಮಾರಂಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದ ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಆರ್.ಶಂಕರ್, ಭಾರತದಲ್ಲಿನ ಇಸ್ರೇಲ್ ರಾಯಭಾರಿ ಡಾ.ರೋನ್ ಮಲ್ಕಾ, ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಸಂಜಯ್ ಅಗರ್‍ವಾಲ್, ಇಸ್ರೇಲ್ ವಿದೇಶಾಂಗ ವ್ಯವಹಾರಗಳ ಮಂತ್ರಾಲಯದ ಹಿರಿಯ ಅಧಿಕಾರಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X