Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿಪುರಾದಲ್ಲಿ ಬಿಜೆಪಿ ಶಾಸಕರು ಟಿಎಂಸಿ...

ತ್ರಿಪುರಾದಲ್ಲಿ ಬಿಜೆಪಿ ಶಾಸಕರು ಟಿಎಂಸಿ ಸೇರಲಿದ್ದಾರೆಂಬ ವದಂತಿ; ರಾಜ್ಯಕ್ಕೆ ಧಾವಿಸಿರುವ ಹಿರಿಯ ನಾಯಕರು

ವಾರ್ತಾಭಾರತಿವಾರ್ತಾಭಾರತಿ17 Jun 2021 1:52 PM IST
share
ತ್ರಿಪುರಾದಲ್ಲಿ ಬಿಜೆಪಿ ಶಾಸಕರು ಟಿಎಂಸಿ ಸೇರಲಿದ್ದಾರೆಂಬ ವದಂತಿ; ರಾಜ್ಯಕ್ಕೆ ಧಾವಿಸಿರುವ ಹಿರಿಯ ನಾಯಕರು

ಅಗರ್ತಲಾ: ತ್ರಿಪುರಾದ ಕೆಲ ಬಿಜೆಪಿ ಶಾಸಕರುಗಳು ಟಿಎಂಸಿ ಸೇರಲಿದ್ದಾರೆಂದು ಹರಡಿರುವ ಊಹಾಪೋಹಗಳ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕರು ಅಗರ್ತಲಾದಲ್ಲಿ ಸಭೆ ಸೇರಿದ್ದಾರೆ. ಈ ನಡುವೆ ಪ್ರತಿಕ್ರಿಯಿಸಿರುವ ತ್ರಿಪುರಾ ರಾಜ್ಯ ಬಿಜೆಪಿ ಅಧ್ಯಕ್ಷ ಡಾ ಮಾಣಿಕ್ ಸಹಾ, ಬಿಜೆಪಿ ಕುಟುಂಬದಲ್ಲಿ  ಎಲ್ಲವೂ ಸರಿಯಾಗಿದೆ, ಭಿನ್ನಾಭಿಪ್ರಾಯಗಳೇನಿದ್ದರೂ ಮಾತುಕತೆಗಳ ಮೂಲಕ ಇತ್ಯರ್ಥಪಡಿಸಲಾಗುವುದು ಎಂದು ಹೇಳಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ತ್ರಿಪುರಾದ ಬಿಜೆಪಿ ಸಂಘಟನಾ ಉಸ್ತುವಾರಿ ಫಣೀಂದ್ರ ನಾಥ್ ಶರ್ಮ ಸಹಿತ ಹಲವು ಹಿರಿಯ ನಾಯಕರು ರಾಜ್ಯ ನಾಯಕತ್ವದ ಜತೆ ಸಭೆ ನಡೆಸಿದ್ದಾರೆ.

ರಾಜ್ಯದ ʼಅಸಂತುಷ್ಟ' ಬಿಜೆಪಿ ಶಾಸಕರ ಒಂದು ಗುಂಪು ಮರಳಿ ತೃಣಮೂಲ ಕಾಂಗ್ರೆಸ್ ಸೇರಬಹುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ವದಂತಿಗಳ ಹಿನ್ನೆಲೆಯಲ್ಲಿ ಕೇಂದ್ರ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ರಾಜ್ಯದ ಮಾಜಿ ಆರೋಗ್ಯ ಸಚಿವ ಹಾಗೂ ಶಾಸಕ ಸುದೀಪ್ ರಾಯ್ ಬರ್ಮನ್ 2017ರಲ್ಲಿ ಟಿಎಂಸಿ ತೊರೆದು ಇತರ ಕೆಲವರೊಂದಿಗೆ ಬಿಜೆಪಿ ಸೇರಿದ್ದರು. ಬರ್ಮನ್ ಸಹಿತ ಕೆಲವರು ಮತ್ತೆ ಟಿಎಂಸಿ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಬರ್ಮನ್ ಸಹಿತ ಟಿಎಂಸಿಗೆ ವಲಸೆ ಬಂದ ಕೆಲವರು ಕಳೆದ ವರ್ಷ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿಯಾಗಿದ್ದರು. ಬಿಪ್ಲಬ್ ಕುಮಾರ್ ದೇಬ್ ಅವರನ್ನು ಸೀಎಂ ಹುದ್ದೆಯಿಂದ ಕೆಳಗಿಳಿಸುವ ಉದ್ದೇಶದಿಂದ ಅವರು ನಡ್ಡಾ ಅವರನ್ನು ಭೇಟಿಯಾಗಿದ್ದರೆಂದು ಹೇಳಲಾಗಿದ್ದರೂ ಭೇಟಿಯಾದವರು ಮಾತ್ರ ತಾವು ಪಕ್ಷ ಸಂಘಟನಾ ವಿಚಾರಗಳನ್ನು ಚರ್ಚಿಸಿದ್ದಾಗಿ ಹೇಳಿಕೊಂಡಿದ್ದರು.

ರಾಜ್ಯಕ್ಕೆ ಬುಧವಾರ ಭೇಟಿ ನೀಡಿರುವ ಹಿರಿಯ ನಾಯಕರುಗಳು ಎಲ್ಲಾ ಸಚಿವರು ಹಾಗೂ ಶಾಸಕರನ್ನು ವೈಯಕ್ತಿಕವಾಗಿ ಕಂಡು  ಚರ್ಚಿಸುತ್ತಿದ್ದಾರೆ ಎಂದು  ರಾಜ್ಯ ಬಿಜೆಪಿ ಅಧ್ಯಕ್ಷ ಡಾ ಮಾಣಿಕ್ ಸಹಾ ಹೇಳಿದ್ದಾರೆ. "ಎಲ್ಲಾ ಶಾಸಕರು ನಮ್ಮ ಜತೆಗಿದ್ದಾರೆ. ಕುಟುಂಬದಲ್ಲಿ ಕೆಲವೊಂದು ಭಿನ್ನಾಭಿಪ್ರಾಯಗಳಿರಬಹುದು ಅವುಗಳನ್ನು ಇತ್ಯರ್ಥಪಡಿಸಲಾಗುವುದು" ಎಂದು ಅವರು ಹೇಳಿದ್ದಾರೆ. ಕೆಲ ಶಾಸಕರು ತೃಣಮೂಲ ಕಾಂಗ್ರೆಸ್ ಸೇರಲಿದ್ದಾರೆಂಬುದು ಕೇವಲ ವದಂತಿಗಳು ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X