Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಪ್ರಿಲ್ 19ರ ಲಸಿಕೆ ನೀತಿ ಕುರಿತು...

ಎಪ್ರಿಲ್ 19ರ ಲಸಿಕೆ ನೀತಿ ಕುರಿತು ರಾಜ್ಯಗಳ ಜತೆ ಕೇಂದ್ರ ಸರಕಾರ ಚರ್ಚಿಸಿಯೇ ಇರಲಿಲ್ಲ: ವರದಿ

ವಾರ್ತಾಭಾರತಿವಾರ್ತಾಭಾರತಿ17 Jun 2021 2:59 PM IST
share
ಎಪ್ರಿಲ್ 19ರ ಲಸಿಕೆ ನೀತಿ ಕುರಿತು ರಾಜ್ಯಗಳ ಜತೆ ಕೇಂದ್ರ ಸರಕಾರ ಚರ್ಚಿಸಿಯೇ ಇರಲಿಲ್ಲ: ವರದಿ

ಹೊಸದಿಲ್ಲಿ: ಕೋವಿಡ್ ಲಸಿಕೆ ವಿತರಣಾ ವ್ಯವಸ್ಥೆಯನ್ನು ವಿಕೇಂದ್ರೀಕರಣಗೊಳಿಸಬೇಕೆಂದು ರಾಜ್ಯ ಸರಕಾರಗಳೇ ಆಗ್ರಹಿಸಿದ್ದರೂ  ನಂತರ ಈ ಪ್ರಕ್ರಿಯೆಯಿಂದಾಗಿ ಎದುರಾದ ಸವಾಲುಗಳನ್ನು ಎದುರಿಸಲು ಅವುಗಳಿಗೆ ಸಾಧ್ಯವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಜೂನ್ 7ರಂದು ರಾಜ್ಯಗಳನ್ನೇ ದೂಷಿಸಿದ್ದರು. 

ಬಿಜೆಪಿ ನಾಯಕರುಗಳೂ ಇದೇ ರೀತಿಯ ಅಭಿಪ್ರಾಯ ಮೂಡಿಸಲು ಯತ್ನಿಸಿದ್ದರಲ್ಲದೆ ರಾಜ್ಯಗಳ ಆಗ್ರಹದ ಹಿನ್ನೆಲೆಯಲ್ಲಿಯೇ ಎಪ್ರಿಲ್ 19ರ ಲಸಿಕೆ ನೀತಿ ಜಾರಿಯಾಗಿತ್ತು ಎಂದು ಹೇಳಿಕೊಂಡಿದ್ದರು. ಕೇಂದ್ರ ಸರಕಾರ ಕೂಡ ಮೇ 11ರಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅಫಿಡವಿಟ್‍ನಲ್ಲಿ ರಾಜ್ಯ ಸರಕಾರಗಳು, ಲಸಿಕೆ ತಯಾರಕರು ಮತ್ತು ತಜ್ಞರ ಜತೆ ಹಲವಾರು ಸುತ್ತುಗಳ ಮಾತುಕತೆ ನಂತರ ಲಸಿಕೆ ನೀತಿ ಕುರಿತು ನಿರ್ಧರಿಸಲಾಗಿತ್ತು ಎಂದು ತಿಳಿಸಿತ್ತು.

ಆದರೆ ಹೆಚ್ಚಿನ ರಾಜ್ಯಗಳ ಜತೆ ಕೇಂದ್ರ ಸರಕಾರ  ಈ ಕುರಿತು ಚರ್ಚೆ ನಡೆಸಿಯೇ ಇಲ್ಲ ಎಂದು thenewsminute.com ವರದಿ ಮಾಡಿದೆ. ಪ್ರಧಾನಿ ಮೋದಿ ಹಾಗೂ ಹಲವು ರಾಜ್ಯಗಳ ಸೀಎಂಗಳು ಹಾಗೂ ಆರೋಗ್ಯ ಕಾರ್ಯದರ್ಶಿಗಳು ಹಲವು ಬಾರಿ ಸಭೆ ನಡೆಸಿದ್ದರೂ ಎಪ್ರಿಲ್ 19ರಂದು ಘೋಷಣೆಯಾದ ಲಸಿಕೆ ನೀತಿ ಕುರಿತು ಚರ್ಚೆಯೇ ನಡೆದಿರಲಿಲ್ಲವೆಂದು ತಿಳಿದು ಬಂದಿದೆ. ಹೆಚ್ಚಿನ ಸಭೆಗಳಲ್ಲಿ ಚರ್ಚೆಗಳು ಏಕಪಕ್ಷೀಯವಾಗಿದ್ದವು ಹಾಗೂ ಪ್ರಧಾನಿ ಹೆಚ್ಚಾಗಿ ಆಕ್ಸಿಜನ್ ಪೂರೈಕೆ, ಕಂಟೇನ್ಮೆಂಟ್ ವಲಯಗಳ ಕುರಿತಂತೆ  ಚರ್ಚೆ ನಡೆಸಿದ್ದರು.

 ಜನವರಿಯಲ್ಲಿ ನಡೆದ ಒಂದು ಸಭೆಯಲ್ಲಿ ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಪುದುಚ್ಚೇರಿ ಸೀಎಂಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು ಎನ್ನಲಾಗಿದೆ.

ರಾಜ್ಯಗಳು ಲಸಿಕೆ ಪೂರೈಕೆ, ಖರೀದಿ ಕುರಿತಂತೆ ವಿಕೇಂದ್ರೀಕರಣಕ್ಕೆ ಆಗ್ರಹಿಸಿರಲಿಲ್ಲ, ಬದಲು  ಲಸಿಕೆ ನೀತಿ ಜಾರಿ, ನಿರ್ವಹಣೆಯಲ್ಲಿ ವಿಕೇಂದ್ರೀಕರಣ ಬಯಸಿದ್ದವು ಎಂದು ತಮಿಳುನಾಡು ವಿತ್ತ ಸಚಿವ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X