Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಾ.ಸಿದ್ದಲಿಂಗಯ್ಯರಿಗೆ ಮರಣೋತ್ತರ...

ಡಾ.ಸಿದ್ದಲಿಂಗಯ್ಯರಿಗೆ ಮರಣೋತ್ತರ ರಾಷ್ಟ್ರಕವಿ ಬಿರುದು ನೀಡಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ17 Jun 2021 5:32 PM IST
share
ಡಾ.ಸಿದ್ದಲಿಂಗಯ್ಯರಿಗೆ ಮರಣೋತ್ತರ ರಾಷ್ಟ್ರಕವಿ ಬಿರುದು ನೀಡಲು ಆಗ್ರಹ

ಬೆಂಗಳೂರು, ಜೂ. 17: `ಖ್ಯಾತ ಕವಿ, ನಾಡೋಜ ಡಾ.ಸಿದ್ದಲಿಂಗಯ್ಯ ಅವರ ಹೆಸರು ಶಾಶ್ವತವಾಗಿ ಜನಮಾನಸದಲ್ಲಿ ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಅವರಿಗೆ ಮರಣೋತ್ತರ ರಾಷ್ಟ್ರಕವಿ ಬಿರುದು ನೀಡಬೇಕು. ಒಂದು ವಿಶ್ವ ವಿದ್ಯಾಲಯಕ್ಕೆ ಅವರ ಹೆಸರನ್ನು ಇಡಬೇಕು ಹಾಗೂ ಅವರ ಸಾಹಿತ್ಯ ಜನರಿಗೆ ತಲುಪುವ ವ್ಯವಸ್ಥೆ ಮಾಡಬೇಕು' ಎಂದು ಭೀಮಪುತ್ರಿ ಬ್ರಿಗೇಡ್ ಅಧ್ಯಕ್ಷೆ ರೇವತಿ ರಾಜ್ ಇಂದಿಲ್ಲಿ ಆಗ್ರಹಿಸಿದ್ದಾರೆ.

ಗುರುವಾರ ಭೀಮ ಪುತ್ರಿ ಬ್ರಿಗೇಡ್ ಕೇಂದ್ರ ಕಚೇರಿಯಲ್ಲಿ `ಮೂಲನಿವಾಸಿ ಮಹಾ ಒಕ್ಕೂಟ'ದ ವತಿಯಿಂದ ಏರ್ಪಡಿಸಿದ್ದ ಕವಿ, ಸಾಹಿತಿ ಡಾ.ಸಿದಲಿಂಗಯ್ಯ ಅವರಿಗೆ ನುಡಿ-ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಡಾ.ಸಿದ್ದಲಿಂಗಯ್ಯ ನಮ್ಮೆಲ್ಲರ ನೆನಪಿನಲ್ಲಿ ಇರಲಿದ್ದಾರೆ. ಅವರ ಹೋರಾಟದ ಗೀತೆಗಳು ಸದಾ ಅವರನ್ನು ಜೀವಂತವಾಗಿ ಇಟ್ಟಿರುತ್ತವೆ. ಅವರು ಹಾಕಿದ ಮಾರ್ಗದಲ್ಲಿ ದಲಿತ, ಶೋಷಿತರ ಚಳವಳಿ ಸಾಗಬೇಕು' ಎಂದು ಹೇಳಿದರು.

ಒಕ್ಕೂಟದ ಅಧ್ಯಕ್ಷ ಜಿಗಣಿ ಶಂಕರ್ ಮಾತನಾಡಿ, `ನಾನು ಸಿದ್ದಲಿಂಗಯ್ಯವರನ್ನು ಅತ್ಯಂತ ಸಮೀಪದಿಂದಲೇ ಬಲ್ಲೆ. ಅವರ ಮತ್ತು ನಾವೆಲ್ಲರೂ ಒಟ್ಟಿಗೆ ಚಳುವಳಿ ರೂಪಿಸುತ್ತಿದ್ದ ವೇಳೆ ಅವರು ನನ್ನೊಂದಿಗೆ ಸಂವಾದಿಸಿ ಎಂದು ಆಗಾಗ ಹೇಳುತ್ತಲೇ ಇದ್ದರು. ಹೋರಾಟದ ಮೂಲಕ ಅಧಿಕಾರಕ್ಕೇರಬೇಕು. ಅಲ್ಲಿ ಶೋಷಿತರ ಧ್ವನಿಯಾಗಬೇಕೆಂಬ ಆಶಯದಿಂದಲೇ ಅವರು ಕಾವ್ಯದ ಮೂಲಕ ಮೇಲ್ಮನೆ ಸದಸ್ಯರಾಗಿ ಬಡವರ ಪರ ಶ್ರಮಿಸಿದ್ದರು' ಎಂದು ಸ್ಮರಿಸಿದರು.

ರಂಗತಜ್ಞ ಡಾ.ಗೋವಿಂದಸ್ವಾಮಿ ಮಾತನಾಡಿ, ಬಡತನದ ಹಿನ್ನೆಲೆಯಿಂದ ಬಂದ ಸಿದ್ದಲಿಂಗಯ್ಯ ಅವರು ಶ್ರೀರಾಮಪುರದ ಸ್ಮಶಾನದಲ್ಲಿ ಕುಳಿತು ಧ್ವನಿ ಇಲ್ಲದ ಸಮುದಾಯಗಳ ಕುರಿತು ಕಾವ್ಯ ರಚಿಸುವ ಮೂಲಕ ಕನ್ನಡ ಸಾಹಿತ್ಯಕ್ಕೆ ಹೊಸ ದಿಕ್ಕನ್ನು ಕೊಟ್ಟರು. ಅವರ ಇಕ್ರಲಾ ವದೀರ್ಲಾ.. ಕಾವ್ಯದ ಮೂಲಕ ಶೋಷಿತರಿಗೆ ಪ್ರತಿರೋಧಕ್ಕೆ ಎಂದು ಕರೆ ಕೊಟ್ಟಿದ್ದರು. ರಾಜ್ಯ ಸರಕಾರ ಅವರ ಹೆಸರಿನಲ್ಲಿ ಸಂಶೋಧನೆ, ಉನ್ನತ ವ್ಯಾಸಂಗಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಕವಿ ಸಿದ್ದಲಿಂಗಯ್ಯನವರ ಹೋರಾಟ ಗೀತೆಗಳನ್ನು ಹಾಡಲಾಯಿತು. ಮುಖಂಡರಾದ ಹೆಬ್ಬಾಳ ವೆಂಕಟೇಶ್, ಮುನಿ ಆಂಜನಪ್ಪ, ದಿವಿಲ್ ಕುಮಾರ್, ಲೋಕೇಶ್ಚಂದ್ರ, ರಾಜೇಶ್ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X