Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಮುನಾ ವಿಹಾರದ ಸಂತ್ರಸ್ತ ಕುಟುಂಬವನ್ನು...

ಯಮುನಾ ವಿಹಾರದ ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಎಸ್‍ಡಿಪಿಐ ನಿಯೋಗ: ಕಾನೂನು, ರಾಜಕೀಯ ನೆರವಿನ ಭರವಸೆ

ವಾರ್ತಾಭಾರತಿವಾರ್ತಾಭಾರತಿ17 Jun 2021 6:10 PM IST
share
ಯಮುನಾ ವಿಹಾರದ ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಎಸ್‍ಡಿಪಿಐ ನಿಯೋಗ: ಕಾನೂನು, ರಾಜಕೀಯ ನೆರವಿನ ಭರವಸೆ

ಹೊಸದಿಲ್ಲಿ, ಜೂ.17: ದಿಲ್ಲಿಯ ಯಮುನಾ ವಿಹಾರ್ ನಲ್ಲಿ ಇದೇ ಜೂನ್ 11ರ ಮಧ್ಯರಾತ್ರಿ ಅತಿಕ್ರಮವಾಗಿ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳಿಂದ ಹಿಂಸಾಚಾರ, ಹಲ್ಲೆಗೆ ಒಳಗಾದ ಕುಟುಂಬವನ್ನು ಎಸ್‍ಡಿಪಿಐ ನಿಯೋಗವು ಭೇಟಿ ಮಾಡಿ ಎಲ್ಲ ರೀತಿಯ ಕಾನೂನು ಮತ್ತು ರಾಜಕೀಯ ನೆರವು ನೀಡುವ ಭರವಸೆ ನೀಡಿದೆ.

ಎರಡು ಮನೆಗಳಲ್ಲಿ ನಾಲ್ವರು ಸಹೋದರರ ಕುಟುಂಬಗಳು ವಾಸಿಸುತ್ತಿದ್ದವು. ಆದರೆ ಅದೃಷ್ಟವಶಾತ್ ಘಟನೆ ನಡೆದ ದಿನದಂದು, ಅವರ ತಾಯಿ ತೀವ್ರವಾಗಿ ಅನಾರೋಗ್ಯಕ್ಕೆ ಒಳಗಾಗಿದ್ದರಿಂದ ಸಹೋದರಿ ಮತ್ತು ಅವರ ಮಕ್ಕಳು ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಒಂದೇ ಮನೆಯಲ್ಲಿ ಇದ್ದರು. ರಾತ್ರಿ 10 ಗಂಟೆಯ ನಂತರ, ಹೊರಗೆ ಮಾತಿಗೆ ಮಾತು ಬೆಳೆಯುತ್ತಿರುವುದು ಮನೆಯವರಿಗೆ ಕೇಳಿಸಿದೆ, ಈ ವೇಳೆ ಇಬ್ಬರು ಸಹೋದರರು ಮನೆಯಿಂದ ಹೊರಗೆ ಬಂದಿದ್ದಾರೆ. ಅವರ ಕಾಲನಿಯ ಭದ್ರತಾ ಸಿಬ್ಬಂದಿಯು ಯುವಕನೊಂದಿಗೆ ಜಗಳವಾಡುತ್ತಿರುವುದು ಕಂಡುಬಂತು. ಸೆಕ್ಯುರಿಟಿ ಗಾರ್ಡ್, ಕಾಲನಿಯ ಬಾಗಿಲನ್ನು ಹಾಕಿರುವುದು ಯುವಕನ ಕೋಪಕ್ಕೆ ಕಾರಣವಾಗಿತ್ತು ಎಂದು ನಿಯೋಗ ತಿಳಿಸಿದೆ.

ಆಗ ಓರ್ವ ಸಹೋದರ ಮಧ್ಯಪ್ರವೇಶಿಸಿ ಕೆಟ್ಟದಾಗಿ ಬಯ್ಯದಂತೆ ಹಾಗೂ ಭದ್ರತಾ ಸಿಬ್ಬಂದಿಗೆ ಬೆದರಿಸದಂತೆ ಯುವಕನಿಗೆ ಸೂಚಿಸಿದ್ದಾರೆ. ಸಹೋದರರು ಗಡ್ಡ ಬಿಟ್ಟಿದ್ದರಿಂದ ಅವರು ಮುಸ್ಲಿಮರು ಎಂದು ಗುರುತಿಸಿದ ಯುವಕ, ತಕ್ಕ ಪಾಠ ಕಲಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದಾದ ಬಳಿಕ ಇಬ್ಬರು ಸಹೋದರರು ಮನೆಯೊಳಗೆ ಹೋಗಿದ್ದಾರೆ.

ಆದರೆ ಸುಮಾರು ಮೂವತ್ತು ನಿಮಿಷಗಳ ಬಳಿಕ, 12ಕ್ಕೂ ಅಧಿಕ ಯುವಕರ ಗುಂಪೊಂದು ದೊಣ್ಣೆ, ಹಾಕಿ ಸ್ಟಿಕ್, ಕಬ್ಬಿಣದ ಸರಳುಗಳು ಮತ್ತು ಬಂದೂಕುಗಳು ಇತರ ಶಸ್ತ್ರಾಸ್ತ್ರಗಳೊಂದಿಗೆ ಬಂದು ಮನೆಯೊಳಗೆ ಅತಿಕ್ರಮ ಪ್ರವೇಶಿಸಿ, ವೃದ್ಧರು, ಮಹಿಳೆಯರು ಮತ್ತು ಹತ್ತು ಮತ್ತು ನಾಲ್ಕು ವರ್ಷ ಪ್ರಾಯದ ಮಕ್ಕಳು ಸೇರಿದಂತೆ ಅಲ್ಲಿದ್ದವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದೆ. ಪೊಲೀಸರು ಘಟನೆಗೆ ಸಂಬಂಧಿಸಿ ಭದ್ರತಾ ಸಿಬ್ಬಂದಿಯ ಪರವಾಗಿ ಎಫ್‍ಐಆರ್ ದಾಖಲಿಸಿದ್ದಾರೆ. ಬಳಿಕ ಸಂತ್ರಸ್ತರ ವಿರುದ್ಧವೂ ಪ್ರತಿ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ತಿಳಿಸಿದೆ.

ರಾಜಕೀಯ ಒತ್ತಡದ ಕಾರಣದಿಂದ ಘಟನೆ ನಡೆದು ವಾರ ಕಳೆದರೂ ಯಾವುದೇ ಆರೋಪಿಯನ್ನು ಬಂಧಿಸಿಲ್ಲ. ಸಂತ್ರಸ್ತ ಕುಟುಂಬದ ಸದಸ್ಯರು ಅಲ್ಲಿನ ಉನ್ನತ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಘಟನೆಯ ಬಗ್ಗೆ ವಿವರ ನೀಡಿದ್ದಾರೆ. ಯಮುನಾ ವಿಹಾರ್ ಪ್ರದೇಶವು ಫೆಬ್ರವರಿ 2020ರಲ್ಲಿ ಭೀಕರ ಹಿಂಸಾಚಾರ ನಡೆದ ಈಶಾನ್ಯ ದಿಲ್ಲಿಯ ಒಂದು ಭಾಗವಾಗಿದೆ. ದಿಲ್ಲಿ ಹೈಕೋರ್ಟ್‍ನ ನ್ಯಾಯಪೀಠವು ಹಿಂಸಾಚಾರದ ಆರೋಪಿಗಳನ್ನು ಬಂಧಿಸುವಂತೆ ಸ್ಪಷ್ಟ ಆದೇಶ ನೀಡಿದೆ.

ಆದರೆ ಗಲಭೆಯ ಅಪರಾಧಿಗಳು ಮುಕ್ತವಾಗಿ ಓಡಾಡುತ್ತಿದ್ದರೂ ಅವರನ್ನು ಇನ್ನೂ ಬಂಧಿಸಿಲ್ಲ. ಇದಲ್ಲದೆ, ಕೋಮು ಹಿಂಸಾಚಾರದ ಸಂತ್ರಸ್ತರು ಮತ್ತು ರಾಜಕೀಯ ವಿರೋಧಿಗಳನ್ನು ಬಂಧಿಸಿ ನಕಲಿ ಮತ್ತು ಸುಳ್ಳು ಆರೋಪಗಳಡಿ ಜೈಲಿನಲ್ಲಿ ಕಳೆಯುವಂತೆ ಮಾಡಲಾಗಿದೆ. ಹಿಂಸಾಚಾರ ನಡೆಸಿದವರು ಮತ್ತು ದುಷ್ಕರ್ಮಿಗಳು ಕಳೆದ ವರ್ಷ ಹಿಂಸಾಚಾರ ಸೃಷ್ಟಿಸಿದ ಅದೇ ಗುಂಪಿಗೆ ಸೇರಿದವರಾಗಿದ್ದಾರೆ. ಇವರೆಲ್ಲರೂ ಆಡಳಿತ ಪಕ್ಷಕ್ಕೆ ಸೇರಿದ ರಾಜಕಾರಣಿಗಳ ಪ್ರಚೋದನೆಯ ಮೇರೆಗೆ ಹಿಂಸಾಚಾರಕ್ಕೆ ಇಳಿದವರಾಗಿದ್ದಾರೆ ಎಂದು ಎಸ್‍ಡಿಪಿಐ ನಿಯೋಗ ಆರೋಪಿಸಿದೆ.

ಎಸ್‍ಡಿಪಿಐ ಉಪಾಧ್ಯಕ್ಷ ಶರ್ಫುದ್ದೀನ್ ಅಹ್ಮದ್, ಅಡ್ವಕೇಟ್ ನವೀದ್ ಅಝ್ಮಿ ಅಫ್ರಿದಿ, ಹಾಫಿಝ್ ಮುಹಮ್ಮದ್ ಹಾಶಿಮ್, ಮುಹಮ್ಮದ್ ಇಲ್ಯಾಸ್, ಡಾ.ಶಮೂನ್ ಮತ್ತು ಇತರರು ಈ ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X