Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಧಾರಾಕಾರ ಮಳೆ: ಮನೆ,...

ಕೊಡಗಿನಲ್ಲಿ ಧಾರಾಕಾರ ಮಳೆ: ಮನೆ, ವಿದ್ಯುತ್ ಕಂಬಗಳಿಗೆ ಹಾನಿ; ಧರೆಗುರುಳಿದ ಮರಗಳು

ವಾರ್ತಾಭಾರತಿವಾರ್ತಾಭಾರತಿ17 Jun 2021 8:39 PM IST
share
ಕೊಡಗಿನಲ್ಲಿ ಧಾರಾಕಾರ ಮಳೆ: ಮನೆ, ವಿದ್ಯುತ್ ಕಂಬಗಳಿಗೆ ಹಾನಿ; ಧರೆಗುರುಳಿದ ಮರಗಳು

ಮಡಿಕೇರಿ, ಜೂ.17: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ಒಂದು ವಾರದಿಂದ ಬಿಡುವಿಲ್ಲದೆ ವ್ಯಾಪಕ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತ ಉಂಟಾಗಿದೆ. ‘ಮುಂಗಾರು’ ಅಬ್ಬರ ಜೋರಾಗಿರುವುದರಿಂದ ಜಿಲ್ಲೆಯ ಹಲವು ಕಡೆಗಳಲ್ಲಿ ಮನೆ, ವಿದ್ಯುತ್ ಮಾರ್ಗಕ್ಕೆ ಮರ ಬಿದ್ದು ಹಾನಿಯಾಗಿದೆ. 

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಜೂನ್ ಎರಡನೇ ಮತ್ತು ಮೂರನೇ ವಾರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಇದೇ ರೀತಿ ಮಳೆ ಮುಂದುವರಿದರೆ ನದಿಗಳಲ್ಲಿ ಪ್ರವಾಹ ಏರ್ಪಡುವ ಸಾಧ್ಯತೆಗಳಿದೆ. ನದಿ, ತೊರೆ, ಕಾಲುವೆ, ಹಳ್ಳ, ಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಜಲಪಾತಗಳು ಬೋರ್ಗರೆಯುತ್ತಿದ್ದು, ಕಣ್ಮನ ಸೆಳೆಯುತ್ತಿದೆ.  

ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದ ಮೆಟ್ಟಿಲುಗಳು ಮುಳುಗಿವೆ. ಮಳೆ ಮುಂದುರೆದಿದ್ದು, ಭಾಗಮಂಡಲ ರಸ್ತೆ ಜಲಾವೃತಗೊಳ್ಳುವ ಸಾಧ್ಯತೆಗಳಿದೆ.

ಸೋಮವಾರಪೇಟೆ ಮತ್ತು ವಿರಾಜಪೇಟೆ ಭಾಗದಲ್ಲೂ ಉತ್ತಮ ಮಳೆಯಾಗುತ್ತಿದ್ದು, ಕೆಲವು ಕಡೆ ಹಾನಿ ಸಂಭವಿಸಿದೆ. ಜಿಲ್ಲೆಯ ಹಲವೆಡೆ ವಿದ್ಯುತ್ ಕಂಬ ಮತ್ತು ಮರ ಮುರಿದು ಬಿದ್ದಿದೆ. ವಿರಾಜಪೇಟೆ ವಿಭಾಗದ ಚೆನ್ನಂಗೊಲ್ಲಿ-ಮಾಯಾಮುಡಿ ರಸ್ತೆ ಮಾರ್ಗದಲ್ಲಿ ಗಾಳಿ, ಮಳೆಗೆ ಮರಗಳು ಬಿದ್ದ ಘಟನೆ ನಡೆಯಿತು. 

ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಜಿಲ್ಲಾಧಿಕಾರಿ ಅವರ ಸರ್ಕಾರಿ ವಸತಿ ಗೃಹದ ಬಳಿ ಮರ ಬಿದ್ದಿದೆ. ಮಾದಾಪುರ ಬಳಿ ಮಳೆ, ಗಾಳಿಯಿಂದ ವಿದ್ಯುತ್ ಕಂಬಕ್ಕೆ ಬಿದ್ದಿದ್ದ ಮರಗಳನ್ನು ಸೆಸ್ಕ್ ಸಿಬ್ಬಂದಿ ತೆರವುಗೊಳಿಸಿದರು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪದ ಕೀರೆಹೊಳೆ, ಬಿರುನಾಣಿ ಬಳಿಯ ನೀಟ್ ಕುಂದ್, ಟಿ.ಶೆಟ್ಟಿಗೇರಿಯ ನಾಲ್ಕೇರಿ ಸೇತುವೆ ಮತ್ತು ಬಾಳೆಲೆಯ ಸುಳುಗೋಡು ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ಅತಿವೃಷ್ಟಿಯಿಂದ ಬಾಧಿತವಾಗುವ ಸ್ಥಳಗಳನ್ನು ವೀಕ್ಷಿಸಿದರು. ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ನಿರ್ದೇಶನ ನೀಡಿದರು. 

ಉಪ ವಿಭಾಗಾಧಿಕಾರಿ, ವಿರಾಜಪೇಟೆ ತಹಶಿಲ್ದಾರರಾದ ಯೋಗಾನಂದ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಮತ್ತು ಕಂದಾಯ ಇಲಾಖಾ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.

ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದಲ್ಲಿ ಮಳೆ, ಗಾಳಿಯಿಂದ ವಾಸದ ಮನೆ ಹಾನಿಯಾಗಿರುವುದನ್ನು ಸಂಬಂಧಿಸಿದ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಲೆಕ್ಕಿಗರು ಪರಿಶೀಲಿಸಿದರು.

ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಲೇ ಇದ್ದು, ಸುಮುತ್ತಲ ನಿವಾಸಿಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಆಯಾ ಗ್ರಾ.ಪಂ ಗಳು ಸೂಚನೆ ನೀಡಿವೆ. ಎತ್ತರದ ಪ್ರದೇಶಗಳ ನಿವಾಸಿಗಳಿಗೂ ಮುನ್ನೆಚ್ಚರಿಕೆ ವಹಿಸಲು ತಿಳಿಸಲಾಗಿದೆ. ಎನ್‍ಡಿಆರ್‍ಎಫ್ ತಂಡ ಮಳೆಯ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದ್ದು, ಸಾರ್ವಜನಿಕರು ಕೂಡ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ.

ಮಳೆ ವಿವರ: ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 65.90 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 93.53 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 63.68 ಮಿ.ಮೀ. ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ 40.5 ಮಿ.ಮೀ. ಮಳೆಯಾಗಿದೆ.  

ಹಾರಂಗಿ ನೀರಿನ ಮಟ್ಟ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2831.57 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 10.8. ಇಂದಿನ ನೀರಿನ ಒಳಹರಿವು 1411 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು 80 ಕ್ಯುಸೆಕ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X