Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚೇತನ್ ಅಹಿಂಸಾ ವಿರುದ್ಧ ಸಂಘಪರಿವಾರ...

ಚೇತನ್ ಅಹಿಂಸಾ ವಿರುದ್ಧ ಸಂಘಪರಿವಾರ ವ್ಯವಸ್ಥಿತ ಪಿತೂರಿ ನಡೆಸುತ್ತಿದೆ: ಶೇಖರ್ ಲಾಯಿಲ ಆರೋಪ

ವಾರ್ತಾಭಾರತಿವಾರ್ತಾಭಾರತಿ17 Jun 2021 10:10 PM IST
share

ಬೆಳ್ತಂಗಡಿ : ಬ್ರಾಹ್ಮಣ್ಯದ ಅಪಾಯಕಾರಿ ಬಗ್ಗೆ ಜಾಗೃತಿಗಾಗಿ ಅಂಬೇಡ್ಕರ್, ಪೆರಿಯಾರ್, ಬಸವಣ್ಣ ಅವರ ಹೇಳಿಕೆಗಳನ್ನು ಮತ್ತೊಮ್ಮೆ ನೆನಪಿದ ಚಲನಚಿತ್ರ ನಟ, ಯುವ ಹೋರಾಟಗಾರ ಚೇತನ್ ಅಹಿಂಸಾ ಅವರ ವಿರುದ್ಧ ಸಂಘಪರಿವಾರ ವ್ಯವಸ್ಥಿತ ಪಿತೂರಿ ನಡೆಸುತ್ತಿದೆ ಎಂದು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಆರೋಪಿಸಿದ್ದಾರೆ.

12 ಶತಮಾನದಲ್ಲಿಯೇ ಬಸವಣ್ಣ ಬ್ರಾಹ್ಮಣ್ಯದ ಅಪಾಯದ ಬಗ್ಗೆ ವಚನ ಚಳವಳಿ ನಡೆಸಿದ್ದಾರೆ. ಮುಂದುವರಿದ ಭಾಗವಾಗಿ ಪೆರಿಯಾರ್ ಅವರು ಬ್ರಾಹ್ಮಣ್ಯದ ವಿರುದ್ಧ ತೀವ್ರ ಸ್ವರೂಪದ ಹೋರಾಟ ನಡೆಸಿದರು. ನಂತರ ಅಂಬೇಡ್ಕರ್ ಅವರು ಬ್ರಾಹ್ಮಣ್ಯದ ವಿರುದ್ಧ ಚಳವಳಿ ನಡೆಸಿದ ಬಗ್ಗೆ ಸಾವಿರಾರು ದಾಖಲೆಗಳು ಲಭ್ಯವಿದೆ. ಅದನ್ನೇ ಸಾಮಾಜಿಕ ಜಾಲತಾಣದಲ್ಲಿ ಬರೆದ ನಟ ಚೇತನ್ ಅವರ ವಿರುದ್ಧ ಸುಳ್ಳು ಕೇಸ್ ದಾಖಲಿಸುವ ಮೂಲಕ ಸಂಘಟನೆಗಳು ನೀಚತನ ಪ್ರದರ್ಶಿಸುತ್ತಿದೆ. ಅಂಬೇಡ್ಕರ್ ಬರೆದ ಸಂವಿಧಾನವನ್ನು ಬದಲಾಯಿಸಲು ಹೊರಟ , ಸಂವಿಧಾನವನ್ನೇ ಸುಟ್ಟು ಹಾಕಿದ ಸಂಘಪರಿವಾರ ಅವರ ಹೇಳಿಕೆಯನ್ನು ಮತ್ತೊಮ್ಮೆ ನೆನಪಿಸಿದ ನಟ ಚೇತನ್ ವಿರುದ್ಧ ಕೇಸ್ ದಾಖಲಿಸಿದೆ. ಆ ಮೂಲಕ ದಲಿತ, ಆದಿವಾಸಿ, ರೈತ , ಕಾರ್ಮಿಕರ ಪರವಾದ ಚೇತನ್ ಅವರ ಹೋರಾಟವನ್ನು ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದ ಅವರು  ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಎಂಬಾತ  ತನ್ನ ಅಧಿಕಾರ ದುರ್ಬಳಕೆ ಮಾಡುವ ಮೂಲಕ ಚೇತನ್ ಮೇಲೆ ಸುಳ್ಳು ದೂರು ನೀಡಿರುವುದು ಅತ್ಯಂತ ಖಂಡನೀಯ. ಕಳೆದ ವರ್ಷ ಬಿಜೆಪಿ ನಾಯಕ ಜಗದೀಶ್ ಅಧಿಕಾರಿ ಎಂಬಾತ ಬಿಲ್ಲವ ಸಮುದಾಯವನ್ನು ಬಾಯಿಗೆ ಬಂದಂತೆ ನಿಂದಿಸಿದಾಗ ಮೌನವಾಗಿದ್ದು ಮೂಕರಂತೆ  ವರ್ತಿಸಿದ ಸಂಘಪರಿವಾರ ಇಂದು ಬ್ರಾಹ್ಮಣ್ಯದ ವಿರುದ್ಧ ಧ್ವನಿ ಎತ್ತಿದಾಗ ಹಿಂದುತ್ವದ ಮೂಲ ಅಜೆಂಡಾದಂತೆ ಮಾತನಾಡುತ್ತಿದ್ದಾರೆ. ಸಂಘಪರಿವಾರಕ್ಕೆ ಸತ್ಯವನ್ನು ಅರಗಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬ್ರಾಹ್ಮಣ್ಯ ಹಾಗೂ ಹಿಂದುತ್ವ ಸಾಮಾಜಿಕ ಶೋಷಣೆ, ಅಸ್ಪೃಶ್ಯತೆಯ ಮೂಲಬೇರು. ಅದರ ವಿರುದ್ಧ ದಲಿತ, ಆದಿವಾಸಿ, ಹಿಂದುಳಿದ ವರ್ಗಗಳು ಸಂಘಟಿತ ಹೋರಾಟ ನಡೆಸಬೇಕಾಗಿದೆ. ಸುಳ್ಳು ಕೇಸ್ ಮೂಲಕ ನೈಜ ಹೋರಾಟಗಾರರ ಹೋರಾಟವನ್ನು ಹತ್ತಿಕ್ಕಲಾಗದು. ಚೇತನ್ ಅವರ ಪರವಾಗಿ ನಾಡಿನ ಜನರು ನಿಲ್ಲಬೇಕು ಈ ನಾಡಿನಲ್ಲಿ ಅಂಬೇಡ್ಕರ್, ಪೆರಿಯಾರ್, ಬಸವಣ್ಣ ಸಿದ್ದಾಂತಕ್ಕೆ ಜಾಗವಿದೆಯೇ ಹೊರತು ಬ್ರಾಹ್ಮಣ್ಯಕ್ಕೆ ಅಲ್ಲ. ಕ್ಷಮೆ ಯಾಚಿಸಲು ಚೇತನ್ ಅಹಿಂಸಾ ಅವರು ಸಾವರ್ಕರ್ ಅಲ್ಲ. ಬದಲಾಗಿ ಅಂಬೇಡ್ಕರ್, ಪೆರಿಯಾರ್, ಬಸವಣ್ಣನವರ ಸಿದ್ಧಾಂತವನ್ನು ಉಸಿರಾಗಿಸಿಕೊಂಡವರು ಎಂದು ಶೇಖರ್ ಎಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X