Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಗರದಲ್ಲಿ ಕಚ್ಚಾಬಾಂಬ್ ಸ್ಫೋಟಕ್ಕೆ ಹೊಸ...

ಸಾಗರದಲ್ಲಿ ಕಚ್ಚಾಬಾಂಬ್ ಸ್ಫೋಟಕ್ಕೆ ಹೊಸ ತಿರುವು: ಆಸ್ತಿ ವಿಚಾರವಾಗಿ ಕುಟುಂಬದ ಕೊಲೆಗೆ ಸಂಚು; ಸಂತ್ರಸ್ತರ ಆರೋಪ

ವಾರ್ತಾಭಾರತಿವಾರ್ತಾಭಾರತಿ17 Jun 2021 10:17 PM IST
share
ಸಾಗರದಲ್ಲಿ ಕಚ್ಚಾಬಾಂಬ್ ಸ್ಫೋಟಕ್ಕೆ ಹೊಸ ತಿರುವು: ಆಸ್ತಿ ವಿಚಾರವಾಗಿ ಕುಟುಂಬದ ಕೊಲೆಗೆ ಸಂಚು; ಸಂತ್ರಸ್ತರ ಆರೋಪ

ಶಿವಮೊಗ್ಗ, ಜೂ.17: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಸಮೀಪದ ಕಣ್ಣೂರಿನ ಕೆರಿಯಪ್ಪ ಅವರ ಮನೆಯ ಬಚ್ಚಲು ಮನೆಯಲ್ಲಿ ಸಂಭವಿಸಿದ್ದ ಕಚ್ಚಾ ಬಾಂಬ್ ಸ್ಫೋಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಆಸ್ತಿಯ ವಿಚಾರವಾಗಿ ಕುಟುಂಬವನ್ನೇ ಕೊಲೆ ಗೈಯ್ಯುವ ಹುನ್ನಾರ ಅಡಗಿದೆ ಎಂದು ಕೆರಿಯಪ್ಪ ಅವರ ಕುಟುಂಬ ಆರೋಪಿಸಿದೆ.

ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಕೆರಿಯಪ್ಪ ಅವರ ಕಿರಿಯ ಮಗ ರವಿ, ತಂದೆಯ ಆಸ್ತಿ ಇಬ್ಭಾಗ ಮಾಡುವ ವಿಚಾರದಲ್ಲಿ ನನ್ನ ಹಿರಿಯಣ್ಣ, ತಂದೆ-ತಾಯಿ ಸಹೋದರಿಯರು ಮತ್ತು ನನ್ನ ಮೇಲೆ ದೌರ್ಜನ್ಯ ನಡೆಸಿ, ಚಿತ್ರ ಹಿಂಸೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ಬಾರಿ ಸ್ಥಳೀಯವಾಗಿ ಸಾಕಷ್ಟು ಪಂಚಾಯಿತಿ ನಡೆದಿದ್ದರೂ ಬಗೆಹರಿದಿರಲಿಲ್ಲ. ಸುಮಾರು 12 ಎಕರೆ ನೀರಾವರಿ ಭೂಮಿ ಇದ್ದರೂ ಸಾಗುವಳಿ ಮಾಡದೆ ಹಾಳು ಬಿಡಲಾಗಿದೆ. ಹಿರಿಯ ಸಹೋದರ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಜಮೀನು ಸಾಗುವಳಿ ಮಾಡಲು ಬಿಡುತ್ತಿಲ್ಲ ಎಂದು ಕೊಲೆಗೆ ಹಿರಿಯಣ್ಣ ಸಂಚು ರೂಪಿಸಿರುವ ಸಾಧ್ಯತೆ ಇದೆ ಎಂದು ರವಿ ಆರೋಪಿಸಿದ್ದಾರೆ.

ಈ ಪ್ರಕರಣದಕಲ್ಲಿ ಆಸ್ತಿ ವಿಚಾರವಾಗಿ ನಮ್ಮ ಕುಟುಂಬವನ್ನೇ ಕೊಲೆ ಮಾಡುವ ಸಂಚು ಅಡಗಿದೆ ಎಂದು ಕೆರಿಯಪ್ಪ ಅವರ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದು, ಪೊಲೀಸ್ ಇಲಾಖೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಜೂ.12ರಂದು ಕಣ್ಣೂರು ಗ್ರಾಮದ ಕೆರಿಯಪ್ಪ ಅವರ ಮನೆಯ ಬಚ್ಚಲು ಮನೆಯಲ್ಲಿ ನಾಡ ಬಾಂಬ್‌ಗಳು ಸ್ಫೋಟಗೊಂಡಿದ್ದವು. ಅಲ್ಲದೆ, ಮನೆ ಸಮೀಪದ ತೆಂಗಿನ ಮರದ ಅಡಿಯಲ್ಲಿ 5 ಸಜೀವ ಕಚ್ಚಾ ಬಾಂಬ್‌ಗಳು ಪತ್ತೆಯಾಗಿದ್ದವು.

ಕರಿಯಪ್ಪ ಸಾಕಷ್ಟು ಕಷ್ಟಪಟ್ಟು ಆಸ್ತಿ ಮಾಡಿದ್ದು, ಮಕ್ಕಳ ಕಾಲದಲ್ಲಿ ಆ ಭೂಮಿಗಾಗಿ ಸಂಘರ್ಷ ನಡೆಯುತ್ತಿದೆ. ಈ ಕಾರಣಕ್ಕಾಗಿ ಭೂಮಿ ವ್ಯಾಜ್ಯ ಕೋರ್ಟ್ ಮೆಟ್ಟಿಲೇರಿದೆ. ಈ ಆಸ್ತಿ ವ್ಯಾಜ್ಯ ಹಾಗೂ ಕೌಟುಂಬಿಕ ಕಲಹದ ಕಾರಣಕ್ಕಾಗಿ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದು, ತಮ್ಮ ಕುಟುಂಬದ ಮೇಲೆ ಆಗುತ್ತಿರುವ ದೌರ್ಜನ್ಯದ ಕುರಿತು ಒಟ್ಟು 7 ಸಲ ಎಸ್ಪಿಯವರಿಗೆ ದೂರು ನೀಡಿದ್ದೇವೆ. 2 ಸಲ ಐಜಿಗೆ ದೂರು ನೀಡಿದ್ದೇವೆ. ಆದಾಗ್ಯೂ ನಾವು ನಿರಂತರ ಕಿರುಕುಳ ಅನುಭವಿಸುತ್ತಿದ್ದೇವೆ.
-ರವಿ, ಕೆರಿಯಪ್ಪ ಅವರ ಕಿರಿಯ ಮಗ

ವೈಯಕ್ತಿಕ ದ್ವೇಷ ಕಾರಣ ?
ಎರಡು ವರ್ಷಗಳ ಹಿಂದೆ ಕೆರಿಯಪ್ಪರ ಕೊಟ್ಟಿಗೆ ಅಟ್ಟದ ಮೇಲೆ ಜಿಂಕೆ ಚರ್ಮ, ಕೊಂಬು ಪತ್ತೆಯಾಗಿದ್ದವು. 2 ಸಿಮೆಂಟ್ ಚೀಲದಲ್ಲಿ ವನ್ಯಜೀವಿಯ ಅಂಗಾಂಗ ತಂದಿಟ್ಟು ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅವುಗಳನ್ನು ವಶಕ್ಕೆ ಪಡೆದಿದ್ದರು. ದ್ವೇಷದ ಹಿನ್ನೆಲೆಯಲ್ಲಿ ಈ ರೀತಿ ಮಾಡಲಾಗಿತ್ತು ಎಂದು ಮೇಲ್ಕೋಟಕ್ಕೆ ಸಾಬೀತಾಗಿತ್ತು.

ಕೋವಿಡ್ ಆಸ್ಪತ್ರೆಯಲ್ಲಿದ್ದವರ ಮೇಲೆ ಎಫ್‌ಐಆರ್
ನಾಡಬಾಂಬ್ ಸ್ಫೋಟ ಪ್ರಕರಣದಲ್ಲಿ ವೃದ್ಧ ಕೆರಿಯಪ್ಪ ಮತ್ತು ರವಿ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರವಿ ಅವರು ಕೊರೋನ ಸೋಂಕಿತರಾಗಿ 14 ದಿನದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೂ ತಂದೆ ಮಗನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X