Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಚ್.ವಿಶ್ವನಾಥ್ ಬಗ್ಗೆ ಮಾತನಾಡಿದರೆ ನನ್ನ...

ಎಚ್.ವಿಶ್ವನಾಥ್ ಬಗ್ಗೆ ಮಾತನಾಡಿದರೆ ನನ್ನ ಬಾಯಿ ಹೊಲಸಾಗುತ್ತದೆ ಎಂದ ರೇಣುಕಾಚಾರ್ಯ

ವಾರ್ತಾಭಾರತಿವಾರ್ತಾಭಾರತಿ18 Jun 2021 6:47 PM IST
share
ಎಚ್.ವಿಶ್ವನಾಥ್ ಬಗ್ಗೆ ಮಾತನಾಡಿದರೆ ನನ್ನ ಬಾಯಿ ಹೊಲಸಾಗುತ್ತದೆ ಎಂದ ರೇಣುಕಾಚಾರ್ಯ

ಬೆಂಗಳೂರು, ಜೂ. 18: `ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆ ಟೆಂಡರ್ ಪಾರದರ್ಶಕವಾಗಿ ನಡೆದಿದ್ದು, ಯೋಜನೆಯ ಬಗ್ಗೆ ಸಮಗ್ರ ಮಾಹಿತಿ ವೆಬ್‍ಸೈಟ್‍ನಲ್ಲಿ ಹಾಕಲಾಗಿದೆ. 20 ಸಾವಿರ ಕೋಟಿ ರೂ.ಟೆಂಡರ್ ಅವ್ಯವಹಾರ ನಡೆದಿದೆ ಎಂಬ ಎಚ್.ವಿಶ್ವನಾಥ್ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ' ಎಂದು ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಎಚ್.ವಿಶ್ವನಾಥ್ ಅವರ ಆಡಿಯೋ, ವಿಡಿಯೋ ಎಲ್ಲರಿಗೂ ಗೊತ್ತಿದೆ. ಆ ಆಡಿಯೋ, ವಿಡಿಯೋ ಪ್ಲೇ ಮಾಡಿದರೆ, ಅವರ ಸಂಸ್ಕೃತಿ ತಿಳಿಯುತ್ತದೆ. ನಾನು ಮುಖ್ಯಮಂತ್ರಿ ವಿರುದ್ಧ ಮಾತನಾಡಬೇಡಿ ಎಂದು ಹೇಳಿದ್ದೇನೆ. ಆದರೂ ವಿಶ್ವನಾಥ್ ಹತಾಶರಾಗಿ ಮಾತನಾಡುತ್ತಿರುವುದು ತಪ್ಪು. ಆ ವ್ಯಕ್ತಿಯ ನಾಲಿಗೆ ಸಂಸ್ಕೃತಿ ಬಗ್ಗೆ ಎಲ್ಲರಿಗೂ ಗೊತ್ತಿದೆ' ಎಂದು ವಾಗ್ದಾಳಿ ನಡೆಸಿದರು.

`ಎಸ್ಸೆಂ ಕೃಷ್ಣ, ಸಿದ್ದರಾಮಯ್ಯ, ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಇದೀಗ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲರ ವಿರುದ್ಧವೂ ವಿಶ್ವನಾಥ್ ಮಾತನಾಡುತ್ತಾರೆ. ನಾನು ಎಂದೂ ಅವರ ಯಾರ ವಿರುದ್ಧ ಹಗುರವಾಗಿ ಮಾತನಾಡುವುದಿಲ್ಲ ಎಂದ ರೇಣುಕಾಚಾರ್ಯ, ಅವರ ಬಗ್ಗೆ ಏನಾದರೂ ಮಾತನಾಡಿದರೆ ನನ್ನ ಬಾಯಿ ಹೊಲಸಾಗುತ್ತದೆ ಎಂದು ಆಕ್ರೋಶ ಹೊರ ಹಾಕಿದರು.

ನೋಟಿಸ್ ನೀಡಬೇಕಾಗುತ್ತದೆ

ಮೇಲ್ಮನೆ ಸದಸ್ಯ ಎಚ್.ವಿಶ್ವನಾಥ್ ಅವರು ನನ್ನ ವಿರುದ್ಧ ಮಾತನಾಡುವುದು ಸರಿಯಲ್ಲ. ಅವರು ಇದೇ ರೀತಿ ಮಾತನಾಡುವುದನ್ನು ಮುಂದುವರಿಸಿದರೆ ಕೋರ್ಟ್ ನೋಟಿಸ್ ನೀಡಬೇಕಾಗುತ್ತದೆ. ಕೋರ್ಟ್, ಜನತಾ ನ್ಯಾಯಾಲಯದಿಂದ ಗೆದ್ದು ಬಂದಿರುವ ನನ್ನ ವಿರುದ್ಧ ಆರೋಪ ಮಾಡಿದರೆ ಸಹಿಸುವುದಿಲ್ಲ'

-ಎಚ್.ಹಾಲಪ್ಪ, ಸಾಗರ ಕ್ಷೇತ್ರದ ಶಾಸಕ

ಆರೋಪದಲ್ಲಿ ಹುರುಳಿಲ್ಲ

ಎಚ್.ವಿಶ್ವನಾಥ್ ಬಗ್ಗೆ ನಾನೇನು ಮಾತನಾಡುವುದಿಲ್ಲ. ಅವರ ವಿರುದ್ಧ ಹೈಕಮಾಂಡ್‍ಗೆ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡುತ್ತೇನೆ. ವಿಜಯೇಂದ್ರ ವಿರುದ್ಧದ ಕಿಕ್‍ಬ್ಯಾಕ್ ಆರೋಪ ಆಧಾರ ರಹಿತ. ಅನಾವಶ್ಯಕವಾಗಿ ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ. ಅಂತಹ ಯಾವುದೇ ಹಸ್ತಕ್ಷೇಪವನ್ನು ಅವರು ಮಾಡಿಲ್ಲ. ಆರೋಪಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆ ವ್ಯವಸ್ಥಾಪಕ ನಿರ್ದೇಶಕರು ಸ್ಪಷ್ಟನೆ ನೀಡಲಿದ್ದಾರೆ'

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X