ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಸಿಎಫ್ಐಯಿಂದ ಹೋರಾಟ

ಉಡುಪಿ, ಜೂ.18: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್ ನೇತೃತ್ವದ ಉಡುಪಿ ಜಿಲ್ಲಾ ನಿಯೋಗವು ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವಲ್ಲಿ ಸರಕಾರದ ನಿರ್ಲಕ್ಷ್ಯದ ಬಗ್ಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಾಮಾಜಿಕ ಕಾರ್ಯಕರ್ತ ಅಮೃತ್ ಶೆಣೈ ಮತ್ತು ಪತ್ರಕರ್ತ ಶಶಿಧರ್ ಹೆ್ಮಾಡಿ ಅವರನ್ನು ಭೇಟಿ ಮಾಡಿ ದರು.
ಜಿಲ್ಲೆಗೆ ಆಗಿರುವ ಅನ್ಯಾಯದ ವಿರುದ್ಧ , ಸರಕಾರಿ ಮೆಡಿಕಲ್ ಕಾಲೇಜಿಗಾಗಿ ನಮ್ಮ ಆಂದೋಲನಕ್ಕೆ ಅವರ ಬೆಂಬಲಿಗರೊಂದಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ, ಜಿಲ್ಲಾ ಮುಖಂಡ ನವಾಝ್ ಶೇಕ್, ಜಿಲ್ಲಾ ಸಮಿತಿ ಸದಸ್ಯ ಅರ್ಫಾಝ್, ಕುಂದಾಪುರ ಸಮಿತಿ ಸದಸ್ಯ ಸಹದ್ ಬಸ್ರೂರು ಉಪಸ್ಥಿತರಿದ್ದರು
Next Story





