Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೂರ್ವ ಸಿದ್ಧತೆಯಿಲ್ಲದೆ ನೂತನ ಶಿಕ್ಷಣ...

ಪೂರ್ವ ಸಿದ್ಧತೆಯಿಲ್ಲದೆ ನೂತನ ಶಿಕ್ಷಣ ನೀತಿ ಜಾರಿಗೆ ಎಬಿವಿಪಿ ಖಂಡನೆ

ವಾರ್ತಾಭಾರತಿವಾರ್ತಾಭಾರತಿ18 Jun 2021 8:36 PM IST
share
ಪೂರ್ವ ಸಿದ್ಧತೆಯಿಲ್ಲದೆ ನೂತನ ಶಿಕ್ಷಣ ನೀತಿ ಜಾರಿಗೆ ಎಬಿವಿಪಿ ಖಂಡನೆ

ಬೆಂಗಳೂರು, ಜೂ.18: ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ ನೂತನ ಶಿಕ್ಷಣ ನೀತಿ-2020ನ್ನು ಜಾರಿ ಮಾಡುವುದು ಸರಿಯಲ್ಲವೆಂದು ಎಬಿವಿಪಿ(ಅಖಿಲ ಭಾರತ ವಿದ್ಯಾರ್ಥಿ ಪರಿಷತ್) ರಾಜ್ಯ ಕಾರ್ಯದರ್ಶಿ ಪ್ರತೀಕ ಮಾಳಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಹು ಶಿಸ್ತಿನಿಂದ ಕೂಡಿರುವ ಹೊಸ ಶಿಕ್ಷಣ ನೀತಿ 2020ಯನ್ನು ಎಬಿವಿಪಿ ಹಿಂದಿನಿಂದಲೂ ಸ್ವಾಗತಿಸಿದೆ. ಈ ಕುರಿತು ರಾಜ್ಯಾದ್ಯಂತ ವಿಚಾರ ಸಂಕಿರಣಗಳನ್ನು ಹಮ್ಮಿಕೊಂಡಿದೆ. ಆದರೆ, ಯಾವುದೇ ಪೂರ್ವತಯಾರಿ ಇಲ್ಲದೆ ಏಕಾಏಕಿ ಅನುಷ್ಠಾನಕ್ಕೆ ತರುವುದಕ್ಕೆ ನಮ್ಮ ವಿರೋಧವಿದೆ ಎಂದು ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ವಿಶ್ವವಿದ್ಯಾಲಯಗಳ ಕುಲಪತಿಗಳ ಜೊತೆಗೆ ಹೊಸ ಶಿಕ್ಷಣ ನೀತಿಯ ಕುರಿತು ವರ್ಚುವಲ್ ಸಭೆ ಮಾಡಿದ್ದಾರೆ. ಜೂ.15ಕ್ಕೆ ಸಭೆ ಮಾಡಿ ಜುಲೈ ಹದಿನೈದಕ್ಕೆ ಪಠ್ಯಪುಸ್ತಕ ರಚನಾ ಸಮಿತಿ ರಚಿಸಲು ವರದಿ ನೀಡುವಂತೆ ತಿಳಿಸಿದ್ದಾರೆ. ಇಷ್ಟು ಕಡಿಮೆ ಅವಧಿಯಲ್ಲಿ, ಅದು ಕೋವಿಡ್ 19ರ ಸಂದರ್ಭದಲ್ಲಿ, ಎಲ್ಲರಿಗೂ ಮಂಕು ಕವಿದ ಹೊತ್ತಿನಲ್ಲಿ ಈ ರೀತಿ ನಿರ್ಧಾರ ತೆಗೆದುಕೊಳ್ಳುವುದು ಎಷ್ಟು ಸರಿಯೆಂದು ಅವರು ಪ್ರಶ್ನಿಸಿದ್ದಾರೆ.

2021-22 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿಯೇ ಹೊಸಶಿಕ್ಷಣ ನೀತಿ ಅಳವಡಿಸಿಕೊಳ್ಳಲು ಸರಕಾರ ಮುಂದಾಗಿದೆ. ಆದರೆ, ಹೊಸಶಿಕ್ಷಣ ನೀತಿಗೆ ಬೇಕಾದ ಯಾವ ಸಿದ್ಧತೆಯು ಇದ್ದಂತಿಲ್ಲ. ಬಹುಮುಖ್ಯವಾಗಿ ಹೊಸ ಶಿಕ್ಷಣ ನೀತಿಯ ವಿಶೇಷತೆಗಳ ಬಗ್ಗೆ ವಿದ್ಯಾರ್ಥಿ ಅಧ್ಯಾಪಕರಲ್ಲಿ ಜಾಗೃತಿ, ಉತ್ತಮ ಗುಣಮಟ್ಟದ ಪಠ್ಯಪುಸ್ತಕಗಳ ರಚನೆ, ವಿದ್ಯಾರ್ಥಿಗಳ ಪಠ್ಯಕ್ರಮದ ಬಗ್ಗೆ ವಿಶೇಷ ಕಾಳಜಿ, ಬೋಧಿಸುವ ಅಧ್ಯಾಪಕರ ತರಬೇತಿಗೆ ಒತ್ತು, ಪರೀಕ್ಷಾ ವಿಧಾನಗಳಲ್ಲಿ ಬಹುಮುಖ್ಯ ಮಾರ್ಪಾಡು ಇತ್ಯಾದಿಗಳನ್ನು ಮಾಡಬೇಕು. ಆದರೆ, ಇದ್ಯಾವುದನ್ನು ಮಾಡದೆ ಸರಕಾರ ಅನುಷ್ಠಾನಕ್ಕೆ ಮುಂದಾಗಿದೆ. ಹೀಗಾಗಿ ಹೊಸ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಅನುಷ್ಠಾನಕ್ಕೆ ತರಬಾರದೆಂದು ಅವರು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯಗಳು

-ಹೊಸ ಶಿಕ್ಷಣ ನೀತಿಯ ಆಶಯಕ್ಕನುಗುಣವಾಗಿ ಉತ್ತಮ ರೀತಿಯ ಪಠ್ಯಕ್ರಮ ರಚನೆಯಾಗಬೇಕು, ರಚನೆಯ ನಂತರ ಅಧ್ಯಾಪಕರ-ಪರಿಣಿತರ ಅಭಿಪ್ರಾಯ ಸಂಗ್ರಹಿಸಬೇಕು.

-ಉತ್ತಮ ಗುಣಮಟ್ಟದ ಪಠ್ಯಪುಸ್ತಕಗಳು ಯೋಗ್ಯ ವ್ಯಕ್ತಿಗಳಿಂದ ರಚಿತವಾಗಬೇಕು.

-ಹೊಸ ಶಿಕ್ಷಣ ನೀತಿಗೆ ಅನುಸಾರವಾಗಿ ಅಧ್ಯಾಪಕರಿಗೆ ತರಬೇತಿ ನೀಡಬೇಕು ಹಾಗೂ ಸೂಕ್ತ ಕಾರ್ಯಾಗಾರಗಳನ್ನು ಮಾಡಬೇಕು.

-ಸಮಾಜದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಕಲಿಕೆಯ ಸಮಾನ ಅವಕಾಶ ಸೌಲಭ್ಯ ಕಲ್ಪಿಸಬೇಕು.

-ಪರೀಕ್ಷಾ ವಿಧಾನಗಳಲ್ಲಿ ಸೂಕ್ತ ಮಾರ್ಪಾಡು ಮಾಡಬೇಕು.

-ಕನ್ನಡ ಭಾಷಾ ಅಧ್ಯಯನಕ್ಕೆ ಈ ಹಿಂದಿನಂತೆ 2 ವರ್ಷಗಳ ಅವಕಾಶ ಕಲ್ಪಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X