Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಕಾನೂನು ಪರಮೋಚ್ಚ, ನಿಮ್ಮ...

ದೇಶದ ಕಾನೂನು ಪರಮೋಚ್ಚ, ನಿಮ್ಮ ನೀತಿಯಲ್ಲ: ಟ್ವಿಟರ್ ಗೆ ಬಿಸಿ ಮುಟ್ಟಿಸಿದ ಸಂಸದೀಯ ಸಮಿತಿ

ವಾರ್ತಾಭಾರತಿವಾರ್ತಾಭಾರತಿ18 Jun 2021 10:31 PM IST
share
ದೇಶದ ಕಾನೂನು ಪರಮೋಚ್ಚ, ನಿಮ್ಮ ನೀತಿಯಲ್ಲ: ಟ್ವಿಟರ್ ಗೆ ಬಿಸಿ ಮುಟ್ಟಿಸಿದ ಸಂಸದೀಯ ಸಮಿತಿ

ಹೊಸದಿಲ್ಲಿ,ಜೂ.18: ಭಾರತೀಯ ಕಾನೂನುಗಳು ಪರಮೋಚ್ಚವಾಗಿಯೇ ಹೊರತು ನಿಮ್ಮ ನೀತಿಯಲ್ಲ, ನೀವು ಈ ನೆಲದ ಕಾನೂನುಗಳಿಗೆ ವಿಧೇಯರಾಗಿರಬೇಕು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ ನೇತೃತ್ವದ ಮಾಹಿತಿ ತಂತ್ರಜ್ಞಾನ ಕುರಿತ ಸಂಸದೀಯ ಸಮಿತಿಯು ಶುಕ್ರವಾರ ತನ್ನೆದುರು ವಿಚಾರಣೆಗೆ ಹಾಜರಾಗಿದ್ದ ಮೈಕ್ರೊಬ್ಲಾಗಿಂಗ್ ಪ್ಲಾಟ್ಫಾರ್ಮ್ ಟ್ವಿಟರ್ನ ಪ್ರತಿನಿಧಿಗಳಿಗೆ ಸ್ಪಷ್ಟಪಡಿಸಿದೆ. ಸಮಿತಿಯ ಸದಸ್ಯರು ಪಕ್ಷಭೇದವನ್ನು ಮರೆತು ಟ್ವಿಟರ್ ನೀತಿಯನ್ನು ಖಂಡಿಸಿದರು ಎಂದು ಸಮಿತಿಯಲ್ಲಿನ ಮೂಲಗಳು ತಿಳಿಸಿವೆ.

ಸುಮಾರು 95 ನಿಮಿಷಗಳ ನಡೆದ ಸಮಿತಿ ಸಭೆಗೆ ಹಾಜರಾಗಿದ್ದ ಟ್ವಿಟರ್ ಇಂಡಿಯಾದ ಪಬ್ಲಿಕ್ ಪಾಲಿಸಿ ಮ್ಯಾನೇಜರ್ ಶಗುಫ್ತಾ ಕಮ್ರಾನ್ ಮತ್ತು ಕಾನೂನು ಸಲಹೆಗಾರರಾದ ಆಯುಷಿ ಕಪೂರ್ ಅವರು ಕಂಪನಿಯೇಕೆ ಭಾರತದಲ್ಲಿ ಮುಖ್ಯ ಪಾಲನಾ ಅಧಿಕಾರಿಯನ್ನು ನೇಮಕಗೊಳಿಸಿಲ್ಲ ಮತ್ತು ತೊಂದರೆಗಳನ್ನು ಸೃಷ್ಟಿಸುವ,ವಿಶೇಷವಾಗಿ ಕೋಮು ದ್ವೇಷವನ್ನು ಪ್ರಚೋದಿಸುವ ವಿಷಯಗಳ ಕುರಿತು ಕಂಪನಿಯ ನೀತಿಯೇನು ಎಂಬಿತ್ಯಾದಿ ಕಠಿಣ ಪ್ರಶ್ನೆಗಳನ್ನು ಎದುರಿಸಬೇಕಾಯಿತು.

ತಮ್ಮ ನೀತಿಗಳು ತಮಗೆ ಅತ್ಯಂತ ಮುಖ್ಯವಾಗಿವೆ ಮತ್ತು ತಾವು ಅವುಗಳನ್ನು ಅನುಸರಿಸುತ್ತಿದ್ದೇವೆ ಎಂದು ಸಮಿತಿಗೆ ಹೇಳಿದ ಈ ಅಧಿಕಾರಿಗಳು,ಟ್ವಿಟರ್ ಭಾರತೀಯ ಕಾನೂನುಗಳನ್ನು ಗೌರವಿಸುತ್ತದೆ ಎಂದೂ ತಿಳಿಸಿದರು.

ಕಂಪನಿಯಲ್ಲಿ ತಮ್ಮ ಸ್ಥಾನಮಾನ ಮತ್ತು ಪ್ರಮುಖ ನೀತಿ ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ತಾವು ಹೊಂದಿರುವ ಅಧಿಕಾರವನ್ನು ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಸಮಿತಿಯು ಕಮ್ರಾನ್ ಮತ್ತು ಕಪೂರ್ ಅವರಿಗೆ ಸೂಚಿಸಿತು ಎಂದು ಮೂಲಗಳು ತಿಳಿಸಿದವು.
ಫೇಸ್ಬುಕ್,ಯು ಟ್ಯೂಬ್ ಮತ್ತು ಗೂಗಲ್ ನೀತಿಗಳನ್ನು ಪರಿಶೀಲಿಸಲು ಈ ಕಂಪನಿಗಳ ಅಧಿಕಾರಿಗಳನ್ನು ತನ್ನೆದುರು ಕರೆಸಲು ಸಮಿತಿಯು ಈಗ ನಿರ್ಧರಿಸಿದೆ.

‘ಪಾರದರ್ಶಕತೆ, ಅಭಿವ್ಯಕ್ತಿ ಸ್ವಾತಂತ್ರ ಮತ್ತು ಖಾಸಗಿತನ ಕುರಿತು ನಮ್ಮ ನೀತಿಗಳಿಗೆ ಅನುಗುಣವಾಗಿ ಆನ್ ಲೈನ್ ನಲ್ಲಿ ನಾಗರಿಕರ ಹಕ್ಕುಗಳ ಸುರಕ್ಷತೆಗಾಗಿ ಸಮಿತಿಯೊಂದಿಗೆ ಮತ್ತು ಸರಕಾರದೊಂದಿಗೆ ಕಾರ್ಯ ನಿರ್ವಹಿಸಲು ನಮ್ಮ ಕಂಪನಿ ಸಿದ್ಧವಿದೆ ’ಎಂದು ಸಭೆಯ ಬಳಿಕ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಟ್ವಿಟರ್ ವಕ್ತಾರರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X