Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರನೇ ಮದುವೆಗೆ ಸಜ್ಜಾಗುತ್ತಿದ್ದ ಸ್ವಯಂ...

ಆರನೇ ಮದುವೆಗೆ ಸಜ್ಜಾಗುತ್ತಿದ್ದ ಸ್ವಯಂ ಘೋಷಿತ ಬಾಬಾ ಕಾನ್ಪುರದಲ್ಲಿ ಬಂಧನ

ವಾರ್ತಾಭಾರತಿವಾರ್ತಾಭಾರತಿ19 Jun 2021 11:25 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆರನೇ ಮದುವೆಗೆ ಸಜ್ಜಾಗುತ್ತಿದ್ದ ಸ್ವಯಂ ಘೋಷಿತ ಬಾಬಾ ಕಾನ್ಪುರದಲ್ಲಿ ಬಂಧನ

ಲಕ್ನೊ: ತನ್ನ ಹಿಂದಿನ ಹೆಂಡತಿಯರಿಂದ ಕಾನೂನುಬದ್ಧವಾಗಿ ಬೇರ್ಪಡದೆ ಐವರು  ಮಹಿಳೆಯರನ್ನು ಮದುವೆಯಾಗಿ ಆರನೇ ಮದುವೆಗೆ ಸಜ್ಜಾಗುತ್ತಿದ್ದ, ಹಲವರನ್ನು ಹನಿ ಟ್ರ್ಯಾಪ್ ಗೆ  ಸಿಲುಕಿಸಿದ್ದ  ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಾನ್ಪುರದಲ್ಲಿ ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು India Today ವರದಿ ಮಾಡಿದೆ.

ಆರೋಪಿಯನ್ನು ಶಹಜಹಾನ್ಪುರದ ಅನುಜ್ ಚೇತನ್ ಕಥೇರಿಯಾ ಎಂದು ಗುರುತಿಸಲಾಗಿದ್ದು, ಆರನೇ ಬಾರಿಗೆ ಮದುವೆಯಾಗಲು ಯೋಜಿಸುತ್ತಿದ್ದಾಗ ಕಿದ್ವಾಯ್ ನಗರ ಪೊಲೀಸರು ಬಂಧಿಸಿದ್ದಾರೆ.

ಪತ್ನಿಯ ದೂರಿನ ಮೇರೆಗೆ ಸ್ವಯಂ ಘೋಷಿತ ‘ಬಾಬಾ’ ಅನುಜ್ ಕಥೇರಿಯಾನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕಾನ್ಪುರ ಪೊಲೀಸ್ ಡಿಸಿಪಿ ರವೀನಾ ತ್ಯಾಗಿ ತಿಳಿಸಿದ್ದಾರೆ.

 "ಅನುಜ್ ಐದು ಮಹಿಳೆಯರನ್ನು ಮದುವೆಯಾಗಿದ್ದಾನೆ ಹಾಗೂ  ಆರನೇ ಬಾರಿ ಮದುವೆಯಾಗಲು ಹೊರಟಿದ್ದಾನೆ ಎಂದು ಆತನ ಪತ್ನಿ ಆರೋಪಿಸಿದ್ದಾರೆ. ಆರೋಪಿಯನ್ನು ಶುಕ್ರವಾರ ಬಂಧಿಸಲಾಗಿದೆ" ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಐವರು ಹೆಂಡತಿಯರ ಕಥೆ:  ಆರಂಭಿಕ ತನಿಖೆಯಲ್ಲಿ ಅನುಜ್ 2005 ರಲ್ಲಿ ಮೊದಲ ಬಾರಿಗೆ ವಿವಾಹವಾಗಿದ್ದ ಎಂದು ತಿಳಿದುಬಂದಿದೆ. ತಮ್ಮ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿದೆ ಎಂದು ಮೈನ್ಪುರ ಜಿಲ್ಲೆಯ ನಿವಾಸಿಯಾಗಿರುವ ಮೊದಲ ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ. 2010 ರಲ್ಲಿ, ಅನುಜ್,  ಬರೇಲಿ ಜಿಲ್ಲೆಯ ಮಹಿಳೆಯನ್ನು ಮದುವೆಯಾದ. ಆಕೆ ಕೂಡ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ನಾಲ್ಕು ವರ್ಷಗಳ ನಂತರ, ಔರೈಯಾ ಜಿಲ್ಲೆಯ ಮಹಿಳೆಯನ್ನು ಮದುವೆಯಾದ. ತದನಂತರ ಅನುಜ್ ತನ್ನ ಮೂರನೆಯ ಹೆಂಡತಿಯ ಸೋದರಸಂಬಂಧಿಯನ್ನು ಮದುವೆಯಾದ. ಆಕೆ ಈತನ  ಹಿಂದಿನ ವಿವಾಹಗಳ ಬಗ್ಗೆ ಸತ್ಯವನ್ನು ತಿಳಿದುಕೊಂಡ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಅನುಜ್ 2019 ರಲ್ಲಿ ಐದನೇ ಬಾರಿಗೆ ವಿವಾಹವಾದ. ವಿವಾಹದ ಸ್ವಲ್ಪ ಸಮಯದ ನಂತರ ಪತ್ನಿಗೆ ಕಿರುಕುಳ ನೀಡಲು ಆರಂಭಿಸಿದ್ದ, ಆ ನಂತರ ಅನುಜ್  ವಿರುದ್ಧ ಪ್ರಕರಣ ದಾಖಲಾಗಿದೆ.

"ಅನುಜ್  ಐದನೇ ಹೆಂಡತಿಗೆ ಆತನ ಇತರ ವಿವಾಹಗಳ ಬಗ್ಗೆ ತಿಳಿಸಿರಲಿಲ್ಲ. ಮದುವೆಯಾದ ಕೆಲವು ದಿನಗಳ ನಂತರ ಅನುಜ್  ತನ್ನ ಪತ್ನಿಗೆ ಕಿರುಕುಳ ನೀಡಲು ಆರಂಭಿಸಿದ್ದ. ಮಹಿಳೆ ಕಳೆದ ವರ್ಷ ಚಾಕೆರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಅನುಜ್ ಕಿದ್ವಾಯ್ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ವಾಸಿಸುತ್ತಿದ್ದ ಕಾರಣ, ಮಹಿಳೆ ಕಳೆದ ತಿಂಗಳು ಇದೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು  ”ಎಂದು ಪೊಲೀಸರು ತಿಳಿಸಿದ್ದಾರೆ.

ಅನುಜ್ ಮದುವೆ ವೆಬ್ ಸೈಟ್ ನಲ್ಲಿ ತಾನೊಬ್ಬ ಸರಕಾರಿ ಶಿಕ್ಷಕ ಅಥವಾ ಉದ್ಯಮಿ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಲಕ್ಕಿ ಪಾಂಡೆ ಎಂಬ ಹೆಸರಿನಲ್ಲಿ ಮಹಿಳೆಯರನ್ನು ಸಂಪರ್ಕಿಸುತ್ತಿದ್ದ.  ಮದುವೆ ಸೈಟ್ ನಲ್ಲಿ ಮಹಿಳೆಯರ ಸಂಪರ್ಕ ಸಾಧಿಸಿದ ನಂತರ ಅವರನ್ನು ಆಶ್ರಮಕ್ಕೆ ಕರೆಸಿಕೊಂಡು ಅಲ್ಲಿ ಮಂತ್ರ-ತಂತ್ರ ನಡೆಸುತ್ತಿದ್ದ. ಸಮಸ್ಯೆಗೆ ಪರಿಹಾರ ಕೇಳಿಕೊಂಡು ಆಶ್ರಮಕ್ಕೆ ಬರುತ್ತಿದ್ದ ಮಹಿಳೆಯರನ್ನು ತನ್ನ ಬಲೆಗೆ ಹಾಕಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X