Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್ ಕುರಿತ ವಿಶ್ವಸಂಸ್ಥೆ...

ಮ್ಯಾನ್ಮಾರ್ ಕುರಿತ ವಿಶ್ವಸಂಸ್ಥೆ ನಿರ್ಣಯದಿಂದ ದೂರವುಳಿದ ಭಾರತ

ವಾರ್ತಾಭಾರತಿವಾರ್ತಾಭಾರತಿ19 Jun 2021 10:52 PM IST
share
ಮ್ಯಾನ್ಮಾರ್ ಕುರಿತ ವಿಶ್ವಸಂಸ್ಥೆ ನಿರ್ಣಯದಿಂದ ದೂರವುಳಿದ ಭಾರತ

ವಿಶ್ವಸಂಸ್ಥೆ, ಜೂ.19: ಮ್ಯಾನ್ಮಾರ್ ನ ಈಗಿನ ಪರಿಸ್ಥಿತಿ ಕುರಿತ ವಿಶ್ವಸಂಸ್ಥೆ ಕರಡು ನಿರ್ಣಯ ಅಂಗೀಕಾರ ಪ್ರಕ್ರಿಯೆಯಿಂದ ಭಾರತ ದೂರವುಳಿದಿದೆ. ವಿಶ್ವಸಂಸ್ಥೆ ಅಂಗೀಕರಿಸಿದ ಕರಡು ನಿರ್ಣಯದಲ್ಲಿ ನಮ್ಮ ಅಭಿಪ್ರಾಯವನ್ನು ಪ್ರತಿಬಿಂಬಿಸುವ ಅಂಶವಿಲ್ಲ. ಅಲ್ಲದೆ ಮ್ಯಾನ್ಮಾರ್ ನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮರುಸ್ಥಾಪಿಸುವ ಪ್ರಕ್ರಿಯೆಯನ್ನು ಸಶಕ್ತಗೊಳಿಸುವ ನಮ್ಮ ಜಂಟಿ ಪ್ರಯತ್ನಗಳಿಗೆ, ವಿಶ್ವಸಂಸ್ಥೆಯಲ್ಲಿ ತರಾತುರಿಯಲ್ಲಿ ಮಂಡಿಸಲಾದ ನಿರ್ಣಯ ಸಹಾಯಕ ಎಂದು ಭಾರತ ಸರಕಾರ ಭಾವಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಭಾರತ ಹೇಳಿದೆ. 

‘ಮ್ಯಾನ್ಮಾರ್ ನಲ್ಲಿನ ಪರಿಸ್ಥಿತಿ’ ಎಂಬ ವಿಷಯದ ಕರಡು ನಿರ್ಣಯವನ್ನು ಶುಕ್ರವಾರ 119 ಸದಸ್ಯರ ಮತಗಳ ಮೂಲಕ ಅಂಗೀಕರಿಸಲಾಗಿದೆ. ಮ್ಯಾನ್ಮಾರ್ ಕೂಡಾ ನಿರ್ಣಯದ ಪರ ಮತ ಚಲಾಯಿಸಿದೆ. ಮ್ಯಾನ್ಮಾರ್ ನ ನೆರೆ ದೇಶಗಳಾದ ಭಾರತ, ಬಾಂಗ್ಲಾದೇಶ, ಭೂತಾನ್, ಚೀನಾ, ಲಾವೊಸ್, ನೇಪಾಳ, ಥೈಲ್ಯಾಂಡ್, ರಶ್ಯ ಸಹಿತ 36 ದೇಶಗಳು ಮತದಾನದಿಂದ ದೂರ ಉಳಿದಿವೆ. ಬೆಲಾರೂಸ್ ನಿರ್ಣಯದ ವಿರುದ್ಧ ಮತಹಾಕಿದ ಏಕೈಕ ದೇಶವಾಗಿದೆ. ‌

ನೆರೆಯ ದೇಶಗಳ ಅಥವಾ ಪ್ರದೇಶದ ದೇಶಗಳ ಜತೆ ಸಮಾಲೋಚಿಸದೆ ಈ ನಿರ್ಣಯವನ್ನು ತರಾತುರಿಯಲ್ಲಿ ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಮಂಡಿಸಲಾಗಿದೆ. ಮ್ಯಾನ್ಮಾರ್ನಲ್ಲಿ ಈಗಿರುವ ಪರಿಸ್ಥಿತಿಗೆ ಪರಿಹಾರ ಹುಡುಕುವ ‘ಆಸಿಯಾನ್’ ದೇಶಗಳ ಪ್ರಯತ್ನಗಳಿಗೆ ಇದು ಪ್ರತಿಕೂಲವಾಗಿದೆಯಷ್ಟೇ ಅಲ್ಲ ಅನಪೇಕ್ಷಿತ ಪರಿಣಾಮಕ್ಕೂ ಕಾರಣವಾಗಲಿದೆ ಎಂದು ವಿಶ್ವಸಂಸ್ಥೆಯ ರಾಯಭಾರಿ ಭಾರತದ ಖಾಯಂ ಪ್ರತಿನಿಧಿ ಟಿಎಸ್ ತ್ರಿಮೂರ್ತಿ ಹೇಳಿದ್ದಾರೆ. 

ಮ್ಯಾನ್ಮಾರ್ ನ ನೆರೆದೇಶ ಹಾಗೂ ಮಿತ್ರದೇಶವಾಗಿರುವ ಭಾರತವು ಆ ದೇಶದ ರಾಜಕೀಯ ಅಸ್ಥಿರತೆಯಿಂದ ಈ ಪ್ರದೇಶದಲ್ಲಿ ಉಂಟಾಗಬಹುದಾದ ಪರಿಣಾಮಗಳನ್ನು ಅರಿತುಕೊಂಡಿದೆ. ಮ್ಯಾನ್ಮಾರ್ನ ಎಲ್ಲಾ ಸಮಸ್ಯೆಗಳಿಗೂ ಶಾಂತರೀತಿಯ ಪರಿಹಾರ ರೂಪಿಸಬೇಕು ಎಂಬುದು ಭಾರತದ ಆಶಯವಾಗಿದೆ ಎಂದವರು ಹೇಳಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X