Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೆನ್ನತ್ ಕೌಂಡಾ ಆಫ್ರಿಕಾದ ಸ್ವಾತಂತ್ರ್ಯ...

ಕೆನ್ನತ್ ಕೌಂಡಾ ಆಫ್ರಿಕಾದ ಸ್ವಾತಂತ್ರ್ಯ ಏಕತೆಯ ಪಿತಾಮಹ: ದ.ಆಫ್ರಿಕಾ ಅಧ್ಯಕ್ಷರ ಬಣ್ಣನೆ

ವಾರ್ತಾಭಾರತಿವಾರ್ತಾಭಾರತಿ19 Jun 2021 11:25 PM IST
share

ಲುಸಾಕಾ, ಜೂ.19: ಗುರುವಾರ ನಿಧನರಾದ ಜಾಂಬಿಯಾ ದೇಶದ ಸ್ಥಾಪಕ ಅಧ್ಯಕ್ಷ ಕೆನ್ನತ್ ಕೌಂಡಾ ಆಫ್ರಿಕನ್ ದೇಶಗಳ ಸ್ವಾತಂತ್ರ್ಯ ಮತ್ತು ಏಕತೆಯ ಪಿತಾಮಹ ಎಂದು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಮಫೋಸಾ ಹೇಳಿದ್ದಾರೆ. ಆಫ್ರಿಕಾಖಂಡದ ಹಲವು ದೇಶಗಳಲ್ಲಿನ ಮೂಲನಿವಾಸಿಗಳು ವಸಾಹತುಶಾಹಿಗಳ ದಬ್ಬಾಳಿಕೆಗೆ ಅಂಜಿ ದೇಶತೊರೆದಾಗ ಕೌಂಡಾ ನಾಯಕತ್ವದಡಿ ಝಿಂಬಾಬ್ವೆ ಆಶ್ರಯ ನೀಡಿದೆ. ಅಲ್ಲದೆ ವಿಮೋಚನಾ ಹೋರಾಟಗಾರರಿಗೆ ಬೆಂಬಲ ನೀಡಿದೆ. 

ದಕ್ಷಿಣ ಆಫ್ರಿಕಾಕ್ಕೆ ಅತೀ ಅಗತ್ಯದ ಸಂದರ್ಭದಲ್ಲಿ ಅವರು ದೇಶದ ಜನತೆಯ ಪರ ನಿಂತರು ಮತ್ತು ನಮ್ಮ ಜನರ ಸ್ವಾತಂತ್ರ್ಯ ಹೋರಾಟವನ್ನು ನಿರಂತರ ಬೆಂಬಲಿಸಿದರು. ಅವರ ಋಣ ಸಂದಾಯ ಮಾಡಲು ಸಾಧ್ಯವಿಲ್ಲ ಎಂದು ರಮಫೋಸಾ ಹೇಳಿದ್ದಾರೆ. ಕೌಂಡಾರಿಗೆ ಗೌರವ ಸೂಚಿಸುವ ಸಲುವಾಗಿ ಆಫ್ರಿಕಾ ಖಂಡದ ಹಲವು ದೇಶಗಳು ಆಯಾ ದೇಶದಲ್ಲಿ ಕೆಲವು ದಿನಗಳ ಶೋಕಾಚರಣೆ ಘೋಷಿಸಿವೆ. 

97 ವರ್ಷದ ಕೌಂಡಾ ವಸಾಹತುಶಾಹಿ ವ್ಯವಸ್ಥೆಯ ವಿರುದ್ಧ ಆಫ್ರಿಕಾ ಖಂಡದಾದ್ಯಂತ ನಡೆದ ಹಲವು ಚಳವಳಿಗಳಿಗೆ ಬೆಂಬಲ ನೀಡಿದ್ದರು. ಅಂಗೋಲಾ, ಮೊಝಾಂಬಿಕ್, ನಮೀಬಿಯಾ, ದಕ್ಷಿಣ ಆಫ್ರಿಕಾ, ಝಿಂಬಾಬ್ವೆ ಮುಂತಾದ ಆಫ್ರಿಕಾ ಖಂಡದ ದೇಶಗಳಲ್ಲಿ ಅಲ್ಪಸಂಖ್ಯಾತ ಬಿಳಿಜನರ ಆಡಳಿತದಲ್ಲಿ ಬಹುಸಂಖ್ಯಾತ ಕಪ್ಪುವರ್ಣೀಯರು ಅನುಭವಿಸುತ್ತಿದ್ದ ತಾರತಮ್ಯ, ಅಸಮಾನತೆಯ ವಿರುದ್ಧ ನಡೆದಿದ್ದ ಚಳವಳಿಗಳು ಹಾಗೂ ಈ ದೇಶಗಳ ಸ್ವಾತಂತ್ರ್ಯ ಹೋರಾಟಕ್ಕೆ ಪೂರಕವಾಗಿ ಹಲವು ಅಭಿಯಾನಗಳನ್ನು ಆರಂಭಿಸಿದ್ದರು. 

ನಮ್ಮ ಪ್ರದೇಶವನ್ನು ವಸಾಹತುಶಾಹಿಗಳಿಂದ ಮುಕ್ತವಾಗಿಸಿದ ಉದಾರ ಮನಸ್ಸಿನ, ಸುಶೀಲ ದೃಢಸಂಕಲ್ಪದ ಮಹಾನ್ ವ್ಯಕ್ತಿಯೊಬ್ಬರನ್ನು ಆಫ್ರಿಕಾ ಕಳೆದುಕೊಂಡಿದೆ ಎಂದು ನಮೀಬಿಯಾದ ಅಧ್ಯಕ್ಷ ಹೇಗ್ ಗೆಯ್ನಿಗೋಬ್ ಟ್ವೀಟ್ ಮಾಡಿದ್ದಾರೆ. ಕೌಂಡಾ ನಿಧನಕ್ಕೆ ಸಂತಾಪ ಸೂಚಿಸುವ ಸಲುವಾಗಿ ದಕ್ಷಿಣ ಆಫ್ರಿಕಾ 10 ದಿನಗಳ ಶೋಕಾಚರಣೆ ಘೋಷಿಸಿದ್ದರೆ, ಬೊಟ್ಸ್ವಾನಾ, ನಮೀಬಿಯಾ ಮತ್ತು ತಾಂಝಾನಿಯಾದಲ್ಲಿ 7 ದಿನ, ಝಿಂಬಾಬ್ವೆಯಲ್ಲಿ 3 ದಿನ ಶೋಕಾಚರಣೆ ಘೋಷಿಸಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X