Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2018ರ ಆಲ್ವಾರ್ ಥಳಿಸಿ ಹತ್ಯೆ ಪ್ರಕರಣ:...

2018ರ ಆಲ್ವಾರ್ ಥಳಿಸಿ ಹತ್ಯೆ ಪ್ರಕರಣ: ವಿಎಚ್‌ಪಿ ನಾಯಕನ ಬಂಧನ

ವಾರ್ತಾಭಾರತಿವಾರ್ತಾಭಾರತಿ20 Jun 2021 10:00 PM IST
share
2018ರ ಆಲ್ವಾರ್ ಥಳಿಸಿ ಹತ್ಯೆ ಪ್ರಕರಣ: ವಿಎಚ್‌ಪಿ ನಾಯಕನ ಬಂಧನ

ಜೈಪುರ, ಜೂ. 20: ರಾಜಸ್ಥಾನದ ಆಲ್ವಾರ್ ಜಿಲ್ಲೆಯಲ್ಲಿ 2018ರಲ್ಲಿ ಜಾನುವಾರ ಸಾಗಾಟದ ಶಂಕೆಯಲ್ಲಿ ಅಕ್ಬರ್ ಖಾನ್ ಅವರನ್ನು ಗುಂಪು ಥಳಿಸಿ ಹತ್ಯೆಗೈದ ಘಟನೆಯಲ್ಲಿ ಭಾಗಿಯಾದ ಆರೋಪದಲ್ಲಿ ವಿಶ್ವಹಿಂದೂ ಪರಿಷತ್ (ವಿಎಚ್ಪಿ)ನ ಸ್ಥಳೀಯ ನಾಯಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.

ಆಲ್ವಾರ್ ಗುಂಪು ಥಳಿಸಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಮಗಢ ಪೊಲೀಸರು ಬಂಧಿಸುತ್ತಿರುವ ಐದನೇ ವ್ಯಕ್ತಿ ಇವರಾಗಿದ್ದಾರೆ.

ಘಟನೆಗೆ ಸಂಬಂಧಿಸಿ ಪೊಲೀಸರು ನಾಲ್ವರು ಆರೋಪಿಗಳಾದ ಪರಮ್ಜೀತ್ ಸಿಂಗ್, ನರೇಶ್ ಶರ್ಮಾ, ವಿಜಯ ಕುಮಾರ್ ಹಾಗೂ ಧರ್ಮೇಂದ್ರ ಯಾದವ್ ಅವರ ವಿರುದ್ಧ 2019ರಲ್ಲಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದ ಅಂತಿಮ ವಾದವನ್ನು ನ್ಯಾಯಾಲಯ ಇನ್ನಷ್ಟೇ ಆಲಿಸಬೇಕಿದೆ.

ರಾಮಗಢದ ಪೊಲೀಸರು ಮೂರ್ನಾಲ್ಕು ದಿನಗಳ ಹಿಂದೆ ವಿಎಚ್ಪಿ ನಾಯಕ ನವಲ್ ಕಿಶೋರ್ ಶರ್ಮಾನನ್ನು ಬಂಧಿಸಿದ್ದಾರೆ. ಪ್ರಕರಣವನ್ನು ಎಎಸ್ಪಿ ಶ್ರೇಣಿಯ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದು ಆಲ್ವಾರ್ ಎಸ್ಪಿ ತೇಜಸ್ವಿನಿ ಗೌತಮ್ ಹೇಳಿದ್ದಾರೆ.

ಜಾನುವಾರು ಸಾಗಾಟದ ಶಂಕೆಯಲ್ಲಿ 2018 ಜುಲೈ 20ರಂದು ರಾಮಗಢದಲ್ಲಿ ಗುಂಪೊಂದು ಅಕ್ಬರ್ ಹಾಗೂ ಆತನ ಗೆಳೆಯ ಅಸ್ಲಾಂಗೆ ಥಳಿಸಿತ್ತು. ಈ ಘಟನೆಯಲ್ಲಿ ಅಸ್ಲಾಂ ತಪ್ಪಿಸಿಕೊಂಡಿದ್ದ. ಆದರೆ, ಥಳಿತದಿಂದ ಗಂಭೀರ ಗಾಯಗೊಂಡಿದ್ದ ಅಕ್ಬರ್ ಸಾವನ್ನಪ್ಪಿದ್ದರು.

ರಾಮಗಢದ ಗೋರಕ್ಷಕ ಘಟಕದ ವರಿಷ್ಠ ನವಲ್ ಕಿಶೋರ್ ಶರ್ಮಾ ನೇತೃತ್ವ ಗುಂಪು ಅಕ್ಬರ್ ಖಾನ್ನನ್ನು ಥಳಿಸಿ ಹತ್ಯೆಗೈದಿದಿದೆ ಎಂದು ಅಕ್ಬರ್ ಖಾನ್ ಕುಟುಂಬ ಆರೋಪಿಸಿತ್ತು.

ವಿಎಚ್ಪಿ ನಾಯಕನನ್ನು ಗುರುವಾರ ಬಂಧಿಸಲಾಗಿದೆ ಎಂದು ಪ್ರಕರಣದ ತನಿಖಾಧಿಕಾರಿ ಎಎಸ್ಪಿ (ಗ್ರಾಮೀಣ) ಶ್ರೀರಾಮ್ ಮೀನಾ ಹೇಳಿದ್ದಾರೆ. ನವಲ್ ಕಿಶೋರ್ ಶರ್ಮಾನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X