Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉತ್ತರ ಕೊರಿಯಾದಲ್ಲಿ ತೀವ್ರ ಆಹಾರ...

ಉತ್ತರ ಕೊರಿಯಾದಲ್ಲಿ ತೀವ್ರ ಆಹಾರ ಬಿಕ್ಕಟ್ಟು: ಕಾಫಿಗೆ 7,000 ರೂ., ಬಾಳೆಹಣ್ಣಿಗೆ 3,300 ರೂ. !

ಯೂರಿಯಾ ತಯಾರಿಕೆಗಾಗಿ ಮೂತ್ರಕ್ಕೆ ಬೇಡಿಕೆ

ವಾರ್ತಾಭಾರತಿವಾರ್ತಾಭಾರತಿ20 Jun 2021 11:03 PM IST
share
ಉತ್ತರ ಕೊರಿಯಾದಲ್ಲಿ ತೀವ್ರ ಆಹಾರ ಬಿಕ್ಕಟ್ಟು: ಕಾಫಿಗೆ 7,000 ರೂ., ಬಾಳೆಹಣ್ಣಿಗೆ 3,300 ರೂ. !

ಹೊಸದಿಲ್ಲಿ,ಜೂ.20: ಒಂದು ಕೆಜಿ ಬಾಳೆಹಣ್ಣಿಗೆ 3,336 ರೂ.,ಒಂದು ಪ್ಯಾಕೆಟ್ ಬ್ಲಾಕ್ ಟೀಗೆ 5,617 ರೂ.,ಕಾಫಿಗೆ 7,381 ರೂ.ಮತ್ತು ಒಂದು ಕೆಜಿ ಕಾರ್ನ್ ಗೆ 204.81 ರೂ. ಇವು ತೀವ್ರ ಆಹಾರ ಬಿಕ್ಕಟ್ಟನ್ನು ಎದುರಿಸುತ್ತಿರುವ ಉತ್ತರ ಕೊರಿಯಾದ ಪ್ರಜೆಗಳು ತೆರುತ್ತಿರುವ ಬೆಲೆಗಳು. ಉತ್ತರ ಕೊರಿಯಾದಲ್ಲಿನ ತನ್ನ ಸಂಪರ್ಕಗಳ ಮೂಲಕ ಮಾಹಿತಿಗಳನ್ನು ಸಂಗ್ರಹಿಸುವ ದಕ್ಷಿಣ ಕೊರಿಯಾದ ಎನ್‌ಕೆ ನ್ಯೂಸ್ ಹೀಗೊಂದು ವರದಿಯನ್ನು ಪ್ರಕಟಿಸಿದೆ.

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಗಡಿಗಳ ಮುಚ್ಚುವಿಕೆ, ಅಂತರರಾಷ್ಟ್ರೀಯ ನಿರ್ಬಂಧಗಳು ಮತ್ತು ಅತಿಯಾದ ನೆರೆ ಹಾವಳಿ ಇವು ಉತ್ತರ ಕೊರಿಯಾದಲ್ಲಿ ತೀವ್ರ ಆಹಾರ ಬಿಕ್ಕಟ್ಟಿಗೆ ಪ್ರಮುಖ ಕಾರಣಗಳಾಗಿವೆ.

ಆಹಾರ, ರಸಗೊಬ್ಬರ ಮತ್ತು ಇಂಧನಗಳಿಗಾಗಿ ಉ.ಕೊರಿಯಾ ಚೀನಾವನ್ನು ಅವಲಂಬಿಸಿದೆ. ಆದರೆ ಅದರ ಆಮದುಗಳು 2.5 ಶತಕೋಟಿ ಡಾ.ಗಳಿಂದ 50 ಕೋಟಿ ಡಾ.ಗಳಿಗೆ ಇಳಿದಿದೆ ಎಂದು ಚೀನಾದ ಅಧಿಕೃತ ಕಸ್ಟಮ್ಸ್ ದತ್ತಾಂಶಗಳು ತೋರಿಸಿವೆ.

ಉ.ಕೊರಿಯಾದಲ್ಲಿನ ವಾಸ್ತವ ಸ್ಥಿತಿ ಎಷ್ಟೊಂದು ಗಂಭೀರವಾಗಿದೆ ಎಂದರೆ ರಸಗೊಬ್ಬರಗಳ ತಯಾರಿಕೆಗಾಗಿ ಪ್ರತಿದಿನ ಎರಡು ಲೀ. ಮೂತ್ರವನ್ನು ನೀಡುವಂತೆ ದೇಶದಲ್ಲಿನ ರೈತರಿಗೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ.

ದೇಶದಲ್ಲಿ ಆಹಾರ ಸ್ಥಿತಿಯು ಗಂಭೀರವಾಗಿದೆ ಎಂದು ಒಪ್ಪಿಕೊಳ್ಳುವ ಮೂಲಕ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಎಚ್ಚರಿಕೆಯ ಗಂಟೆಯನ್ನು ಮೊಳಗಿಸಿರುವುದನ್ನು ಸರಕಾರಿ ಮಾಧ್ಯಮಗಳು ವರದಿ ಮಾಡಿವೆ. 1990ರ ದಶಕದಲ್ಲಿ ಉ.ಕೊರಿಯಾ ಭೀಕರ ಕ್ಷಾಮಕ್ಕೆ ಸಾಕ್ಷಿಯಾಗಿದ್ದು,ಆಹಾರ ಸಿಗದೆ ಸಾವಿರಾರು ಜನರು ಸತ್ತಿದ್ದರು.

ಬಡತನದಲ್ಲಿ ಬೇಯುತ್ತಿರುವ ಉ.ಕೊರಿಯಾ ಅಣ್ವಸ್ತ್ರಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹೊಂದುವ ತನ್ನ ಹುಚ್ಚಿನಿಂದಾಗಿ ಅಂತರರಾಷ್ಟ್ರೀಯ ನಿರ್ಬಂಧಗಳನ್ನು ಎದುರಿಸುತ್ತಿದ್ದು ದೀರ್ಘ ಸಮಯದಿಂದ ಆಹಾರದ ಕೊರತೆಯ ಸುಳಿಯಲ್ಲಿ ಸಿಲುಕಿದೆ. ಜನರು ಹೊಟ್ಟೆ ತುಂಬಿಸಿಕೊಳ್ಳಲು ಪರದಾಡುತ್ತಿದ್ದಾರೆ. ಕಳೆದ ವರ್ಷ ಕೊರೋನವೈರಸ್ ಸಾಂಕ್ರಾಮಿಕ ಮತ್ತು ಸರಣಿ ಚಂಡಮಾರುತಗಳು ಹಾಗೂ ಪ್ರವಾಹಗಳು ಮೊದಲೇ ಕುಸಿದಿದ್ದ ದೇಶದ ಆರ್ಥಿಕತೆ ಇನ್ನಷ್ಟು ಕುಸಿಯುವಂತೆ ಮಾಡಿವೆ.

ಆಡಳಿತಾರೂಢ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾದ ಕೇಂದ್ರ ಸಮಿತಿಯ ಪೂರ್ಣಾಧಿವೇಶನದಲ್ಲಿ ಮಾತನಾಡಿದ ಕಿಮ್,ಈ ವರ್ಷ ದೇಶದ ಆರ್ಥಿಕತೆಯು ಸುಧಾರಿಸಿದೆ,ಆದರೆ ಹಲವಾರು ಸವಾಲುಗಳನ್ನು ಎದುರಿಸಬೇಕಿದೆ. ಕಳೆದ ವರ್ಷದ ನೆರೆಯಿಂದಾಗಿ ಕೃಷಿ ಕ್ಷೇತ್ರವು ಉತ್ಪಾದನೆಯಲ್ಲಿ ವಿಫಲಗೊಂಡಿರುವುದರಿಂದ ಆಹಾರ ಸ್ಥಿತಿಯು ಗಂಭೀರವಾಗಿದೆ ಎಂದು ಹೇಳಿದ್ದನ್ನು ಅಧಿಕೃತ ಕೆಸಿಎನ್ಎ ನ್ಯೂಸ್ ಏಜೆನ್ಸಿ ಬುಧವಾರ ವರದಿ ಮಾಡಿತ್ತು.

ಉ.ಕೊರಿಯಾದಲ್ಲಿ ವೈದ್ಯಕೀಯ ಮೂಲಸೌಕರ್ಯಗಳು ಕಳಪೆಯಾಗಿದ್ದು, ಔಷಧಿಗಳ ತೀವ್ರ ಕೊರತೆಯಿದೆ. ಹೀಗಾಗಿ ಕೊರೋನವೈರಸ್ ಸಾಂಕ್ರಾಮಿಕವು ಈ ಪ್ರತ್ಯೇಕಿತ ದೇಶದಲ್ಲಿ ಹಾಹಾಕಾರವನ್ನು ಸೃಷ್ಟಿಸಲಿದೆ ಎಂದು ತಜ್ಞರು ಹೇಳಿದ್ದಾರೆ. ವಿಶ್ವದಲ್ಲಿ ಮೊಟ್ಟಮೊದಲು ಕೊರೋನವೈರಸ್ ಸಾಂಕ್ರಾಮಿಕ ಚೀನಾದಲ್ಲಿ ಭುಗಿಲೆದ್ದ ಬೆನ್ನಲ್ಲೇ ಅದು ತನ್ನ ದೇಶಕ್ಕೆ ಹರಡುವುದನ್ನು ತಡೆಯಲು ಕಿಮ್ ಕಳೆದ ವರ್ಷದ ಜನವರಿಯಲ್ಲೇ ಗಡಿಗಳನ್ನು ಮುಚ್ಚಿದ್ದಾರೆ. ತನ್ನಲ್ಲಿ ಸಾಂಕ್ರಾಮಿಕದ ಪ್ರಕರಣಗಳಿಲ್ಲ ಎಂದು ಉ.ಕೊರಿಯಾ ಹೇಳಿಕೊಳ್ಳುತ್ತಲೇ ಬಂದಿದೆಯಾದರೂ, ಗಡಿ ನಿರ್ಬಂಧಕ್ಕಾಗಿ ಅದು ಭಾರೀ ಆರ್ಥಿಕ ಬೆಲೆಯನ್ನು ತೆತ್ತಿದೆ ಎನ್ನುವುದು ವಿಶ್ಲೇಷಕರ ಅಭಿಪ್ರಾಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X