Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆದೇಶ ಪಾಲಿಸದ ಮಂಗಳೂರು ಮಹಾನಗರ ಪಾಲಿಕೆ:...

ಆದೇಶ ಪಾಲಿಸದ ಮಂಗಳೂರು ಮಹಾನಗರ ಪಾಲಿಕೆ: ಸೂಕ್ತ ಕ್ರಮಕ್ಕೆ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ21 Jun 2021 11:37 PM IST
share
ಆದೇಶ ಪಾಲಿಸದ ಮಂಗಳೂರು ಮಹಾನಗರ ಪಾಲಿಕೆ: ಸೂಕ್ತ ಕ್ರಮಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು, ಜೂ.21: ಘನತ್ಯಾಜ್ಯ ನಿರ್ವಹಣೆ ಸಂಬಂಧ ನ್ಯಾಯಾಲಯದ ಆದೇಶಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಮಂಗಳೂರಿನಲ್ಲಿ ಘನತ್ಯಾಜ್ಯ ಘಟಕ ಕುಸಿತ ದುರ್ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು.

ಈ ವೇಳೆ ಪಾಲಿಕೆಯ ವೈಫಲ್ಯದ ಕುರಿತು ಪ್ರಸ್ತಾಪಿಸಿದ ಪೀಠ, ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ತಜ್ಞರ ಸಂಸ್ಥೆ ಎನ್‍ಐಟಿಕೆ ಸೂರತ್ಕಲ್ ಸಲ್ಲಿಸಿರುವ 3 ವರದಿಗಳಲ್ಲೂ ಪಾಲಿಕೆಯ ವೈಫಲ್ಯ ಎತ್ತಿ ಹಿಡಿಯಲಾಗಿದೆ. ಆದರೆ, ಅವುಗಳನ್ನು ತಿದ್ದಿಕೊಳ್ಳಲು ಪಾಲಿಕೆ ಗಂಭೀರ ಕ್ರಮಗಳನ್ನೇ ಕೈಗೊಂಡಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿತು.

ಹಾಗೆಯೇ, ಪಾಲಿಕೆ ನ್ಯಾಯಾಲಯದ ಆದೇಶಗಳಿಗೂ ಬೆಲೆ ನೀಡಿಲ್ಲ. ಪೀಠದ ನಿರ್ದೇಶನಗಳನ್ನು ಪಾಲಿಸುವಲ್ಲಿ ಹಾಗೂ ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಅನುಸರಿಸುವಲ್ಲಿ ನಿರ್ಲಕ್ಷ್ಯವಹಿಸುತ್ತಿರುವ ಪಾಲಿಕೆಯ ನಡವಳಿಕೆಯನ್ನು ಸರಕಾರ ಮೂಕ ಪ್ರೇಕ್ಷಕನಂತೆ ನೋಡುತ್ತಾ ಕುಳಿತು ಕೊಳ್ಳಬಾರದು. ತನ್ನ ಅಧಿಕಾರ ಬಳಸಿ ಕ್ರಮಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರಮಕೈಗೊಂಡು ಜುಲೈ 8ರೊಳಗೆ ಪ್ರಮಾಣಪತ್ರ ಸಲ್ಲಿಸಬೇಕು ಎಂದು ನಿರ್ದೇಶಿಸಿತು.

ಅಲ್ಲದೇ, ಜಿಲ್ಲಾಧಿಕಾರಿ ಮಂಗಳೂರಿನಲ್ಲಿ ಘನ ತ್ಯಾಜ್ಯ ವಿಲೇವಾರಿ ಸಮಸ್ಯೆ ಸಂಬಂಧ ಸಭೆ ನಡೆಸಿದ್ದಾರೆ. ಆದರೆ, ಆ ಸಭೆಗೆ ಮುಖ್ಯವಾಗಿ ಕೇಂದ್ರ ಅಥವಾ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳನ್ನೇ ಕರೆದಿಲ್ಲ. ಹಾಗಿದ್ದರೆ, ಏಕೆ ಸಭೆ ನಡೆಸಬೇಕಿತ್ತು. ಘನತ್ಯಾಜ್ಯ ಭೂಭರ್ತಿ ಘಟಕಗಳು ಕುಸಿದು ಅನಾಹುತ ಉಂಟಾಗಿ 2 ವರ್ಷ ಕಳೆದರೂ ಪರಿಸ್ಥಿತಿ ಸುಧಾರಿಸಿಲ್ಲ. ಎಪ್ರಿಲ್‍ನಲ್ಲಿ ಅಗ್ನಿ ಅನಾಹುತ ಸಂಭವಿಸಿದರೂ ಮತ್ತೆ ಅಂತಹ ಘಟನೆಗಳು ಮರುಕಳಿಸದಂತೆ ಕ್ರಮಕೈಗೊಂಡಿಲ್ಲ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.

ಈ ವೇಳೆ, ಸರಕಾರದ ಪರ ಎಎಜಿ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿ, ಮೂರು ವರದಿಗಳನ್ನು ಆಧರಿಸಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಮಜಾಯಿಷಿ ನೀಡಲು ಯತ್ನಿಸಿದರೂ ಪೀಠ ಒಪ್ಪಲಿಲ್ಲ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X