Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯೂಸ್ ಕ್ಲಿಕ್, ಸಂಪಾದಕರ ವಿರುದ್ಧ...

ನ್ಯೂಸ್ ಕ್ಲಿಕ್, ಸಂಪಾದಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಈ.ಡಿ.ಗೆ ದಿಲ್ಲಿ ಹೈಕೋರ್ಟ್ ನಿರ್ದೇಶ

ವಾರ್ತಾಭಾರತಿವಾರ್ತಾಭಾರತಿ22 Jun 2021 9:01 PM IST
share
ನ್ಯೂಸ್ ಕ್ಲಿಕ್, ಸಂಪಾದಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಈ.ಡಿ.ಗೆ ದಿಲ್ಲಿ ಹೈಕೋರ್ಟ್ ನಿರ್ದೇಶ

ಹೊಸದಿಲ್ಲಿ,ಜೂ.22: ಅಕ್ರಮ ಹಣ ವಹಿವಾಟು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜುಲೈ 5ರವರೆಗೆ ಸ್ವತಂತ್ರ ಸುದ್ದಿ ಜಾಲತಾಣ ನ್ಯೂಸ್‌ ಕ್ಲಿಕ್ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ಕೈಗೊಳ್ಳದಂತೆ ದಿಲ್ಲಿ ಉಚ್ಚ ನ್ಯಾಯಾಲಯವು ಜಾರಿ ನಿರ್ದೇಶನಾಲಯ (ಈ.ಡಿ)ಕ್ಕೆ ನಿರ್ದೇಶ ನೀಡಿದೆ.

 ‌ಕಳೆದ ಫೆಬ್ರವರಿಯಲ್ಲಿ ನ್ಯೂಸ್‌ ಕ್ಲಿಕ್ ಕಚೇರಿ ಮತ್ತು ಅದರ ಪತ್ರಕರ್ತರ ನಿವಾಸಗಳ ಮೇಲೆ ದಾಳಿ ನಡೆಸಿದ್ದ ಈ.ಡಿ.ಯ ಶೋಧ ಕಾರ್ಯಾಚರಣೆ ಸುಮಾರು 114 ಗಂಟೆಗಳಷ್ಟು ಸುದೀರ್ಘ ಸಮಯ ಮುಂದುವರಿದಿದ್ದು,‌ ಈ ಅವಧಿಯಲ್ಲಿ ಪುರಕಾಯಸ್ಥ (73) ಮತ್ತು ಅವರ ಪಾಲುದಾರರಾದ ಲೇಖಕಿ ಗೀತಾ ಹರಿಹರನ್ ಅವರನ್ನು ಮನೆಯಲ್ಲಿಯೇ ನಿರ್ಬಂಧಿಸಲಾಗಿತ್ತು.

ಈ.ಡಿ.ಪ್ರಕರಣದ ಮಾಹಿತಿ ವರದಿ ಮತ್ತು ಮಧ್ಯಂತರದಲ್ಲಿ ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆಯನ್ನು ಕೋರಿ ನ್ಯೂಸ್‌ ಕ್ಲಿಕ್ ಮತ್ತು ಪುರಕಾಯಸ್ಥ ದಿಲ್ಲಿ ಉಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು.

ನ್ಯಾ.ಜಸ್ಮೀತ್ ಸಿಂಗ್ ಅವರ ರಜಾಕಾಲದ ಪೀಠವು ನ್ಯೂಸ್‌ ಕ್ಲಿಕ್ ನ ಒಡೆತನವನ್ನು ಹೊಂದಿರುವ ಪಿಪಿಕೆ ನ್ಯೂಸ್‌ ಕ್ಲಿಕ್ ಸ್ಟುಡಿಯೊ ಪ್ರೈ.ಲಿ. ಮತ್ತು ಕಂಪನಿಯ ನಿರ್ದೇಶಕರೂ ಆಗಿರುವ ಪುರಕಾಯಸ್ಥ ಅವರಿಗೆ ಜು.5ರವರೆಗೆ ಬಲವಂತದ ಕ್ರಮದ ವಿರುದ್ಧ ರಕ್ಷಣೆಯನ್ನು ಒದಗಿಸಿದರು.
  
ಎರಡು ವಾರಗಳಲ್ಲಿ ಅರ್ಜಿಗೆ ಉತ್ತರಿಸುವಂತೆ ಈ.ಡಿ.ಗೆ ಸೂಚಿಸಿದ ನ್ಯಾಯಾಲಯವು ಕಳೆದ ವರ್ಷ ಆರ್ಥಿಕ ಅಪರಾಧಗಳ ಘಟಕವು ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ನ್ಯೂಸ್‌ ಕ್ಲಿಕ್ ನ ಮಾಲಿಕರು ಪ್ರತ್ಯೇಕವಾಗಿ ಸಲ್ಲಿಸಿರುವ ಅರ್ಜಿಗೆ ಉತ್ತರಿಸುವಂತೆ ದಿಲ್ಲಿ ಪೊಲೀಸರಿಗೆ ನಿರ್ದೇಶವನ್ನೂ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X