Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಾಝಾ ಪಟ್ಟಿಯಲ್ಲಿನ ಸ್ಥಿತಿ ಕುರಿತ...

ಗಾಝಾ ಪಟ್ಟಿಯಲ್ಲಿನ ಸ್ಥಿತಿ ಕುರಿತ ಹಮಾಸ್-ವಿಶ್ವಸಂಸ್ಥೆ ಮಾತುಕತೆ ವಿಫಲ

ವಾರ್ತಾಭಾರತಿವಾರ್ತಾಭಾರತಿ22 Jun 2021 11:33 PM IST
share
ಗಾಝಾ ಪಟ್ಟಿಯಲ್ಲಿನ ಸ್ಥಿತಿ ಕುರಿತ ಹಮಾಸ್-ವಿಶ್ವಸಂಸ್ಥೆ ಮಾತುಕತೆ ವಿಫಲ

ಗಾಝಾ, ಜೂ.22: ಗಾಝಾ ಪಟ್ಟಿಯಲ್ಲಿನ ಮಾನವೀಯ ಪರಿಸ್ಥಿತಿ ಕುರಿತು ವಿಶ್ವಸಂಸ್ಥೆ-ಹಮಾಸ್ ಮಧ್ಯೆ ನಡೆದ ಮಾತುಕತೆ ವಿಫಲವಾಗಿದೆ ಎಂದು ಹಮಾಸ್ ಮುಖಂಡ ಹೇಳಿರುವುದಾಗಿ ವರದಿಯಾಗಿದೆ. 

ಇದೊಂದು ಅತ್ಯಂತ ಕೆಟ್ಟ ಸಭೆಯಾಗಿತ್ತು ಮತ್ತು ಸಂಪೂರ್ಣ ನಕಾರಾತ್ಮಕವಾಗಿತ್ತು ಎಂದು ಮಾತುಕತೆಯಲ್ಲಿ ಪಾಲ್ಗೊಂಡಿದ್ದ ಹಮಾಸ್ ಮುಖಂಡ ಯಾಹ್ಯಾ ಸಿನ್ವರ್ ಸೋಮವಾರ ಪ್ರತಿಕ್ರಿಯಿಸಿದ್ದಾರೆ. ಸಭೆ ಸಮಗ್ರವಾಗಿತ್ತು ಮತ್ತು ನಮ್ಮ ಮಾತನ್ನು ಅವರು ಆಲಿಸಿದರು. ಆದರೆ ದುರದೃಷ್ಟವಶಾತ್, ಗಾಝಾ ಪಟ್ಟಿಯಲ್ಲಿನ ಮಾನವೀಯ ಬಿಕ್ಕಟ್ಟಿಗೆ ಪರಿಹಾರ ಹುಡುಕುವ ಯಾವ ಲಕ್ಷಣವೂ ಸಭೆಯಲ್ಲಿ ವ್ಯಕ್ತವಾಗಿಲ್ಲ ಎಂದವರು ಸುದ್ಧಿಗೋಷ್ಟಿಯಲ್ಲಿ ಹೇಳಿದ್ದಾರೆ. 

ಗಾಝಾ ಪಟ್ಟಿಯಲ್ಲಿನ ಮಾನವೀಯ ಬಿಕ್ಕಟ್ಟು ಪರಿಹಾರಕ್ಕೆ ಸಂಬಂಧಿಸಿ ಇಸ್ರೇಲ್ ಆಡಳಿತ ಹಮಾಸ್ ಸಹಿತ ಪೆಲೆಸ್ತೀನ್ ಗುಂಪನ್ನು ಬ್ಲ್ಯಾಕ್ಮೇಲ್ ಮಾಡುತ್ತಿದೆ ಎಂದು ಸಿನ್ವರ್ ಆರೋಪಿಸಿದ್ದಾರೆ. ಸಭೆಯಲ್ಲಿ ಪಾಲ್ಗೊಂಡಿದ್ದ ವಿಶ್ವಸಂಸ್ಥೆಯ ಹಿರಿಯ ಸದಸ್ಯರ ನಿಯೋಗದಲ್ಲಿ ಮಧ್ಯಪ್ರಾಚ್ಯ ಶಾಂತಿ ಪ್ರಕ್ರಿಯೆಯ ವಿಶ್ವಸಂಸ್ಥೆಯ ವಿಶೇಷ ಸಂಯೋಜಕ ಟಾರ್ ವೆನೆಸ್ಲ್ಯಾಂಡ್ ಅವರೂ ಇದ್ದರು. ಇಸ್ರೇಲ್-ಹಮಾಸ್ ಮಧ್ಯೆ 11 ದಿನ ನಡೆದ ಸಂಘರ್ಷದ ಬಳಿಕ ಮೇ 21ರಂದು ಕದನ ವಿರಾಮಕ್ಕೆ ಉಭಯ ಪಕ್ಷಗಳೂ ಒಪ್ಪಿವೆ. 

ಸಂಘರ್ಷದ ಸಂದರ್ಭ ಗಾಝಾಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 66 ಮಕ್ಕಳ ಸಹಿತ ಕನಿಷ್ಟ 257 ಪೆಲೆಸ್ತೀನ್ ಪ್ರಜೆಗಳು ಮೃತರಾಗಿದ್ದರೆ, ಹಮಾಸ್ ದಾಳಿಯಲ್ಲಿ ಇಸ್ರೇಲ್ನಲ್ಲಿ 2 ಮಕ್ಕಳ ಸಹಿತ 13 ಪ್ರಜೆಗಳು ಮೃತರಾಗಿದ್ದಾರೆ. ಗಾಝಾಪಟ್ಟಿಯಲ್ಲಿನ 1,148 ಮನೆಗಳು ಹಾಗೂ ವಾಣಿಜ್ಯ ಸಂಕೀರ್ಣ ಸಂಪೂರ್ಣ ನಾಶವಾಗಿದ್ದರೆ 15,000 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 1 ಲಕ್ಷಕ್ಕೂ ಅಧಿಕ ಜನರು ನಿರಾಶ್ರಿತರಾಗಿ ವಿಶ್ವಸಂಸ್ಥೆ ನಡೆಸುವ ಶಾಲೆ ಹಾಗೂ ಇತರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ವರದಿಯಾಗಿದೆ.

ಗಾಝಾ ಪಟ್ಟಿಯಲ್ಲಿ ವೇತನ ಪಾವತಿಸಲು ಖತರ್ 30 ಮಿಲಿಯನ್ ಡಾಲರ್ ನಿಧಿಯನ್ನು ನೀಡುವುದಾಗಿ ಘೋಷಿಸಿದೆ. ಆದರೆ ಇದನ್ನು ವರ್ಗಾಯಿಸಲು ಇಸ್ರೇಲ್ ತಡೆಯೊಡ್ಡಿದರೆ ಪ್ರಕ್ಷುಬ್ಧತೆ ವೃದ್ಧಿಯಾಗಲಿದೆ ಎಂದು ಸಿನ್ವರ್ ಬೆದರಿಕೆ ಒಡ್ಡಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಗಾಝಾದಲ್ಲಿ ಆಡಳಿತ ನಡೆಸುತ್ತಿರುವ ಹಮಾಸ್ ಗೆ ವಿದ್ಯುತ್ ಸ್ಥಾವರಗಳಿಗೆ ತೈಲ ಖರೀದಿಸಲು, ಸರಕಾರಿ ಉದ್ಯೋಗಿಗಳ ವೇತನ ಪಾವತಿಗೆ ಹಾಗೂ ಸಾವಿರಾರು ಬಡಕುಟುಂಬಗಳಿಗೆ ನೆರವಾಗಲು ಖತರ್ ಇತ್ತೀಚಿನ ವರ್ಷಗಳಲ್ಲಿ ಸಾವಿರಾರು ಮಿಲಿಯನ್ ಡಾಲರ್ ಹಣ ನೀಡಿದೆ. ಗಲ್ಫ್ ದೇಶಗಳು 2012ರಿಂದ ಗಾಝಾದಲ್ಲಿ ಸುಮಾರು 1.4 ಬಿಲಿಯನ್ ಡಾಲರ್ಗಳಷ್ಟು ಹಣವನ್ನು ಹೂಡಿಕೆ ಮಾಡಿವೆ ಎಂದು ಖತರ್ ನ ವಿದೇಶ ವ್ಯವಹಾರ ಸಚಿವರು ಇತ್ತೀಚೆಗೆ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X