Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುರಕ್ಷಿತ ವಾತಾವರಣದಲ್ಲಿ ಎಸೆಸೆಲ್ಸಿ...

ಸುರಕ್ಷಿತ ವಾತಾವರಣದಲ್ಲಿ ಎಸೆಸೆಲ್ಸಿ ಪರೀಕ್ಷೆ; ಎಸ್‍ಒಪಿ ಬಿಡುಗಡೆ: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ23 Jun 2021 5:52 PM IST
share
ಸುರಕ್ಷಿತ ವಾತಾವರಣದಲ್ಲಿ ಎಸೆಸೆಲ್ಸಿ ಪರೀಕ್ಷೆ; ಎಸ್‍ಒಪಿ ಬಿಡುಗಡೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಜೂ.23: ಕೋವಿಡ್-19 ಸಾಂಕ್ರಾಮಿಕ ಇಳಿಮುಖ ಕಾಣುತ್ತಿರುವ ಹಿನ್ನೆಲೆಯಲ್ಲಿ ಜುಲೈನಲ್ಲಿ ನಡೆಯಲಿರುವ 2022-21ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಾಮಾಣಿತ ಕಾರ್ಯಾಚರಣೆ ವಿಧಾನ(ಎಸ್‍ಒಪಿ) ಬಿಡುಗಡೆ ಮಾಡಲಾಗಿದ್ದು, ಇದರ ಆಧಾರದ ಮೇಲೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಪರೀಕ್ಷೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಜುಲೈ 3ನೇ ವಾರದಲ್ಲಿ ನಡೆಸಲುದ್ದೇಶಿಸಿರುವ ಎಸೆಸೆಲ್ಸಿ ಪರೀಕ್ಷೆ ಸಂಬಂಧದಲ್ಲಿ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರೂಪಿಸಿ ನೀಡಿದ ಎಸ್‍ಒಪಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಜಿಲ್ಲಾಡಳಿತದ ಸಹಕಾರದಿಂದ ಕೋವಿಡ್ ಲಸಿಕೆ ಪಡೆಯಬೇಕೆಂದು ಎಸ್‍ಒಪಿಯಲ್ಲಿ ಸೂಚಿಸಲಾಗಿದೆ. ಪರೀಕ್ಷಾ ವೇಳೆಯೊಳಗೆ ಒಂದು ಡೋಸ್ ಲಸಿಕೆಯನ್ನಾದರೂ ಪಡೆಯುವುದನ್ನು ಖಚಿತಪಡಿಸಿಕೊಳ್ಳಬೇಕಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಒಪಿ ಅನುಷ್ಠಾನಗೊಳಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರೀಕ್ಷಾ ಪೂರ್ವದಲ್ಲಿ ಪರಿಶೀಲಿಸುವುದು ಮತ್ತು ಅನುಷ್ಠಾನವನ್ನು ಜಿಲ್ಲಾಧಿಕಾರಿಗಳು, ಸಿಇಒ ಮತ್ತು ಎಸ್‍ಪಿಯವರು ಖಾತರಿಪಡಿಸುವುದರೊಂದಿಗೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರತಿದಿನವೂ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ಪರೀಕ್ಷೆ ನಂತರ ಸೋಂಕು ನಿವಾರಕ ದ್ರಾವಣದಿಂದ ಸ್ಥಳೀಯಾಡಳಿತ ಸಂಸ್ಥೆಗಳ ನೆರವಿನಿಂದ ಪರೀಕ್ಷಾ ಕೇಂದ್ರ, ಪರೀಕ್ಷಾ ಕೊಠಡಿ, ಪೀಠೋಪಕರಣ ಮತ್ತು ಶೌಚಾಲಯಗಳನ್ನು ಸ್ಯಾನಿಟೈಸೇಷನ್ ಮಾಡುವುದು, ಪರೀಕ್ಷಾ ಕೇಂದ್ರಕ್ಕೆ ಆಗಮನ ಮತ್ತು ನಿರ್ಗಮನ ಹಾಗೆಯೇ ಕೊಠಡಿ ಪ್ರವೇಶ ಸಮಯದಲ್ಲಿ ಸುರಕ್ಷಿತ ಅಂತರ ಕಾಪಾಡಿಕೊಳ್ಳುವುದು. ಪರೀಕ್ಷಾ ಕೇಂದ್ರದ ಪ್ರವೇಶದ ಸಂದರ್ಭದಲ್ಲಿ ಮಕ್ಕಳ ಕೈಗೆ ಸ್ಯಾನಿಟೈಸ್ ಮಾಡುವುದು. ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳಿರಬೇಕು. ಒಂದು ಡೆಸ್ಕ್ ಗೆ ಒಬ್ಬ ಪರೀಕ್ಷಾರ್ಥಿ ಮಾತ್ರವೇ ಇರಬೇಕು. ಮಕ್ಕಳು ಯಾವ ಸಮಯದಲ್ಲೂ ಗುಂಪುಗೂಡುವುದನ್ನು ತಡೆಯಬೇಕು ಎಂದು ಅವರು ಹೇಳಿದ್ದಾರೆ.

ಮನೆಯಿಂದ ನೀರಿನ ಬಾಟಲ್ ಮತ್ತು ಊಟದ ಡಬ್ಬಿ ತರುವುದಕ್ಕೆ ಅವಕಾಶ ಕಲ್ಪಿಸುವುದು. ಪರೀಕ್ಷಾ ಕೊಠಡಿಯಲ್ಲಿ ಮಳೆ ನೀರು ಇರುಚಲು ಸಿಂಪಡಿಸದಂತೆ ಕ್ರಮ ವಹಿಸುವುದು. ಗ್ರಾಮೀಣ ವಿಭಾಗದ ಅಭ್ಯರ್ಥಿಗಳು ಸಾಧ್ಯವಾದಷ್ಟು ತಾಲೂಕು ಕೇಂದ್ರಗಳಿಗೆ ಹೋಗದಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದನ್ನು ಖಾತರಿಪಡಿಸಿಕೊಳ್ಳಬೇಕೆಂದು ಎಸ್‍ಒಪಿಯಲ್ಲಿ ಸೂಚಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿಶೇಷ ಕೊಠಡಿ: ಕೆಮ್ಮು, ನೆಗಡಿ, ಜ್ವರ ಮೊದಲಾದುವುಗಳಿಂದ ಬಳಲುತ್ತಿರುವ ಇಲ್ಲವೇ ಈ ಲಕ್ಷಣಗಳಿರುವ ಅಭ್ಯರ್ಥಿಗಳಿಗಾಗಿ ಕನಿಷ್ಠ 2 ಕೊಠಡಿಗಳನ್ನು ವಿಶೇಷ ಕೊಠಡಿಗಳನ್ನಾಗಿ ಕಾಯ್ದಿರಿಸಬೇಕೆಂದೂ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಪ್ರವೇಶವಾದೊಡನೆ ನೇರವಾಗಿ ಆರೋಗ್ಯ ತಪಾಸಣಾ ಕೌಂಟರ್ ಪ್ರವೇಶಿಸುವಂತೆ ನಿರ್ದೇಶಿಸಬೇಕು ಎಂದು ಅವರು ಹೇಳಿದ್ದಾರೆ.

ಆರೋಗ್ಯ ಕೌಂಟರ್ ಗಳು ಬೆಳಗ್ಗೆ 8.30ಕ್ಕೆ ಅರಂಭವಾಗಿ ಪರೀಕ್ಷಾ ಪ್ರಕ್ರಿಯೆ ಮುಗಿಯುವ ತನಕ ತೆರೆದಿರಲಿವೆ. ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳಿರುವುದನ್ನು ಖಾತರಿಪಡಿಸಬೇಕೆಂದು ಸೂಚಿಸಲಾಗಿದೆ. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್ ಗಳಲ್ಲೇ ಮಾಸ್ಕ್ ನೀಡಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ತುರ್ತು ಚಿಕಿತ್ಸಾ ವಾಹನ: ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನವನ್ನು ಮೀಸಲಿಡುವುದು. ಪರೀಕ್ಷಾ ಸಿಬ್ಬಂದಿಯೂ ಯಾವುದೇ ಸಂದರ್ಭದಲ್ಲೂ ಸುರಕ್ಷಿತ ಅಂತರ ಕಾಪಾಡಿಕೊಳ್ಳುವುದು. ಅಗತ್ಯ ಬಿದ್ದರೆ ಸಿಬ್ಬಂದಿ ಫೇಸ್ ಶೀಲ್ಡ್ ಬಳಸುವುದು. ಗಡಿ ಭಾಗದ ಪರೀಕ್ಷಾ ಕೇಂದ್ರಗಳಿಗೆ ಹೊರ ರಾಜ್ಯದಿಂದ ಬರುವ ಪರೀಕ್ಷಾರ್ಥಿಗಳಿಗೆ ಅನುವಾಗುವಂತೆ ಪರೀಕ್ಷೆಗಳ ದಿವಸದಂದು ರಾಜ್ಯದ ಗಡಿ ಪ್ರವೇಶಕ್ಕೆ ಜಿಲ್ಲಾಡಳಿತದ ಸಮನ್ವಯದೊಂದಿಗೆ ಕ್ರಮ ವಹಿಸಬೇಕು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಕೋವಿಡ್ ಕೇರ್ ಸೆಂಟರ್ ಸ್ಥಾಪನೆ: ಪರೀಕ್ಷಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೆ ಅಂತಹ ಪರೀಕ್ಷಾರ್ಥಿಗೆ ತಾಲೂಕಿಗೊಂದು ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸಿ ಅಲ್ಲಿಯೇ ಅವರಿಗೆ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗುತ್ತದೆ. ಕುಟುಂಬದಲ್ಲಿ ಯಾರಿಗಾದರೂ ಸೋಂಕು ತಗಲಿದ್ದು, ಪರೀಕ್ಷಾರ್ಥಿ ಐಸೋಲೇಷನ್ ನಲ್ಲಿದ್ದರೆ ಅವರನ್ನು ತಪಾಸಣೆ ನಡೆಸಿ ಆರೋಗ್ಯವಾಗಿರುವುದು ಕಂಡುಬಂದರೆ ಸಮೀಪದ ವಿದ್ಯಾರ್ಥಿ ಕೋವಿಡ್ ಕೇರ್ ಸೆಂಟರ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಕೋವಿಡ್ ಆರೈಕೆ ಕೇಂದ್ರದಲ್ಲಿ ಒಂದು ಆಂಬ್ಯುಲೆನ್ಸ್ ವಾಹನ ಕಾಯ್ದಿರಿಸಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ರವಾನೆ, ಪರೀಕ್ಷೆ ನಂತರ ಒಎಂಆರ್ ಶೀಟ್‍ಗಳ ರವಾನೆ ಕುರಿತು ನಿಗದಿತ ಸೂಚನೆಗಳನ್ನು ಒದಗಿಸಲಾಗಿದ್ದು, ಹಾಗೂ ಆರೋಗ್ಯಕರ ವಾತಾವರಣದಲ್ಲಿ ಪರೀಕ್ಷೆ ಯಶಸ್ಸಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು  ಅವರು ತಿಳಿಸಿದ್ದಾರೆ.

ಜೂ.28ರಂದು ವಿಡಿಯೋ ಕಾನ್ಫೆರೆನ್ಸ್: ಪರೀಕ್ಷೆಯನ್ನು ಸುಲಲಿತ ಹಾಗೂ ಆರೋಗ್ಯಕರ ಪರಿಸರದಲ್ಲಿ ನಡೆಸುವ ಸಲುವಾಗಿ ಜೂ.28ರಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್ಪಿಗಳು, ಡಿಎಚ್‍ಒ, ಖಜಾನಾಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ  ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ. ಸಭೆಯಲ್ಲಿ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರು ಭಾಗಿಯಾಗಲಿದ್ದಾರೆ ಎಂದು ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X