Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಬ್ಲೀಗಿ ಜಮಾಅತ್ ವಿರುದ್ಧ...

ತಬ್ಲೀಗಿ ಜಮಾಅತ್ ವಿರುದ್ಧ ಕೋಮುದ್ವೇಷಕ್ಕೆ ಪ್ರಚೋದನೆ: NBSA ಸೂಚನೆಯಂತೆ ವಿಷಾದ ವ್ಯಕ್ತಪಡಿಸಿದ ನ್ಯೂಸ್18 ಕನ್ನಡ

ವಾರ್ತಾಭಾರತಿವಾರ್ತಾಭಾರತಿ23 Jun 2021 9:27 PM IST
share
ತಬ್ಲೀಗಿ ಜಮಾಅತ್ ವಿರುದ್ಧ ಕೋಮುದ್ವೇಷಕ್ಕೆ ಪ್ರಚೋದನೆ: NBSA ಸೂಚನೆಯಂತೆ ವಿಷಾದ ವ್ಯಕ್ತಪಡಿಸಿದ ನ್ಯೂಸ್18 ಕನ್ನಡ

ಕಳೆದ ವರ್ಷ ತಬ್ಲೀಗಿ ಜಮಾಅತ್ ಸದಸ್ಯರನ್ನು ಗುರಿ ಮಾಡಿ ವರದಿ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯೂಸ್18 ಕನ್ನಡ ಇಂದು ನೇರಪ್ರಸಾರದಲ್ಲಿ ವಿಷಾದ ವ್ಯಕ್ತಪಡಿಸಿದೆ.

ದಿಲ್ಲಿಯ ನಿಜಾಮುದ್ದೀನ್ ಮರ್ಕಝ್‍ನಲ್ಲಿ ನಡೆದ ತಬ್ಲೀಗಿ ಜಮಾಅತ್ ಕೋವಿಡ್ ಹರಡಲು ಕಾರಣವಾಗಿದೆ ಎಂದು ವರದಿ ಮಾಡಿದ್ದ ನ್ಯೂಸ್18 ಕನ್ನಡ, ಸುವರ್ಣ ನ್ಯೂಸ್ ಕನ್ನಡ ವಾಹಿನಿ ಹಾಗೂ ಆಂಗ್ಲ ಸುದ್ದಿ ವಾಹಿನಿ ಟೈಮ್ಸ್ ನೌ ಗೆ ಎನ್‍ಬಿಎಸ್‍ಎ ದಂಡ ವಿಧಿಸಿ, ನ್ಯೂಸ್18 ಕನ್ನಡ ವಾಹಿನಿಗೆ ಕ್ಷಮೆಯಾಚಿಸಲು ಸೂಚನೆ ನೀಡಿತ್ತು.

ಅದರಂತೆ ಇಂದು ವಿಷಾದ ವ್ಯಕ್ತಪಡಿಸಿದ ನ್ಯೂಸ್18 ಕನ್ನಡ ವಾಹಿನಿಯು, ''ನ್ಯೂಸ್18 ಕನ್ನಡವು 01-04-2020ರಂದು ದೇಶಕ್ಕೆ ಕೊರೋನ ವೈರಸ್ ಹಬ್ಬಿಸಿದ ದೆಹಲಿ ನಿಜಾಮುದ್ದೀನ್ ಮರ್ಕಜ್ ಹೇಗಿದೆ ಗೊತ್ತಾ?" ಮತ್ತು 01-04-2020ರಂದು "ಕರ್ನಾಟಕದಿಂದ ದೆಹಲಿಯ ಜಮಾಅತ್ ಸಭೆಗೆ ಹೋದವರ ಸಂಖ್ಯೆ ಎಷ್ಟು?" ಎಂಬ ಎರಡು ವರದಿಗಳನ್ನು ಪ್ರಸಾರ ಮಾಡಿದ್ದು, ನೀತಿ ಸಂಹಿತೆ ಮತ್ತು ಪ್ರಸಾರ ಮತ್ತು ಗುಣಮಟ್ಟದ ಪ್ರಕಾರ ಪ್ರಸಾರ ಮಾಧ್ಯಮ ಪಾಲಿಸಬೇಕಾದ ನಿಷ್ಪಕ್ಷಪಾತತೆ, ವಸ್ತುನಿಷ್ಠತೆ ಹಾಗು ತಟಸ್ಥತೆ ಕಾಪಾಡಿಕೊಳ್ಳುವುದರಲ್ಲಿ ನಾವು ನಿಯಮ ಉಲ್ಲಂಘಿಸಿದ್ದು, ಈ ಕಾರ್ಯಕ್ರಮ ಪ್ರಸಾರವಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದೇವೆ'' ಎಂದು ತಿಳಿಸಿದೆ.

''ಜನಾಂಗೀಯ ಮತ್ತು ಧಾರ್ಮಿಕ ಸಾಮರಸ್ಯದ ಕುರಿತಾದ ವರದಿಗಾರಿಕೆಯಲ್ಲಿ ಪ್ರಸಾರ ಮಾಧ್ಯಮ ಪಾಲಿಸಬೇಕಾದ ನಿರ್ದಿಷ್ಟ ಮಾರ್ಗಸೂಚಿ ಅನುಸರಿಸುವುದರಲ್ಲೂ ನಿಯಮ ಉಲ್ಲಂಘನೆಯಾಗಿದೆ. ಯಾವುದೇ ಸಮುದಾಯವನ್ನು ಕೀಳುಮಟ್ಟದಲ್ಲಿ ಅಥವಾ ಸಮುದಾಯದಲ್ಲಿ ದ್ವೇಷ ಭಾವನೆಗಳನ್ನು ಹೆಚ್ಚಿಸುವ ಉದ್ದೇಶ ನಮ್ಮದಾಗಿರಲಿಲ್ಲ ಎಂದು ಸ್ಪಷ್ಟಪಡಿಸುತ್ತೇವೆ. ಈ ವಿಷಯವನ್ನು ಭಾವೋದ್ರೇಕಗೊಳಿಸುವುದು ನಮ್ಮ ಉದ್ದೇಶವಾಗಿರಲಿಲ್ಲ. ಬ್ರಾಡ್‌ಕಾಸ್ಟಿಂಗ್ ಮಾನದಂಡಗಳನ್ನು ಸುಧಾರಿಸುವ ಪ್ರಯತ್ನದಲ್ಲಿ NBSA ಜಾರಿಗೊಳಿಸಿದ ಕೋಡ್ ಆಫ್ ಎಥಿಕ್ಸ್ ಮತ್ತು ಬ್ರಾಡ್ ಕಾಸ್ಟಿಂಗ್ ಸ್ಟಾಂಡರ್ಡ್ಸ್ ಮತ್ತು ಗೈಡ್‌ಲೈನ್ಸ್‌ಗಳಿಗೆ ನಾವು ಬದ್ಧರಾಗಿರುತ್ತೇವೆ'' ಎಂದು ನ್ಯೂಸ್18 ಕನ್ನಡ ತಿಳಿಸಿದೆ.

ದಿಲ್ಲಿಯಲ್ಲಿ ನಡೆದ ನಿಜಾಮುದ್ದೀನ್ ಮರ್ಕಝ್‍ನಲ್ಲಿ ನಡೆದ ತಬ್ಲೀಗಿ ಜಮಾಅತ್ ಕೋವಿಡ್ ಹರಡಲು ಕಾರಣವಾಗಿದೆ ಎಂದು ವರದಿ ಮಾಡಿದ್ದ ಚಾನೆಲ್ ಗಳ ವಿರುದ್ಧ ಕ್ಯಾಂಪೇನ್ ಅಗೇನ್ಸ್ಟ್ ಹೇಟ್ ಸ್ಪೀಚ್ ಎಂಬ ಸಂಘಟನೆ ಕಳೆದ ವರ್ಷ ಸಲ್ಲಿಸಿದ್ದ ದೂರಿನ ಆಧಾರದಲ್ಲಿ ಚಾನೆಲ್ ಗಳಿಗೆ ಎನ್‍ಬಿಎಸ್‍ಎ ದಂಡ ವಿಧಿಸಿ, ಕ್ಷಮೆಯಾಚಿಸಲು ಆದೇಶಿಸಿತ್ತು.

ನ್ಯೂಸ್18 ಕನ್ನಡ ವಾಹಿನಿಗೆ ರೂ. 1 ಲಕ್ಷ ದಂಡ ಹಾಗೂ ಸುವರ್ಣ ನ್ಯೂಸ್‍ಗೆ ರೂ 50,000 ದಂಡ ವಿಧಿಸಲಾಗಿದ್ದು ಈ ಮೊತ್ತವನ್ನು ಅವುಗಳು ಏಳು ದಿನಗಳೊಳಗಾಗಿ ಪಾವತಿಸಬೇಕಿದೆ ಎಂದು ತಿಳಿಸಿತ್ತು. ವಿವಿಧ ಕೋಮುಗಳ ನಡುವೆ ವೈಷಮ್ಯ ಉಂಟು ಮಾಡಬಹುದಾದ ಸೂಕ್ಷ್ಮ ವಿಚಾರವೊಂದರ ಕುರಿತು ಕಾರ್ಯಕ್ರಮ ಪ್ರಸಾರ ಮಾಡಿದ್ದಕ್ಕೆ ಟೈಮ್ಸ್ ನೌ ವಾಹಿನಿಗೂ ಎನ್‍ಬಿಎಸ್‍ಎ ಎಚ್ಚರಿಕೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X