Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬರಗಾಲದ ಅಪಾಯಲ್ಲಿ 43 ದೇಶದ 41 ಮಿಲಿಯನ್...

ಬರಗಾಲದ ಅಪಾಯಲ್ಲಿ 43 ದೇಶದ 41 ಮಿಲಿಯನ್ ಜನತೆ: ವಿಶ್ವಸಂಸ್ಥೆ ವರದಿ

ವಾರ್ತಾಭಾರತಿವಾರ್ತಾಭಾರತಿ23 Jun 2021 10:03 PM IST
share
ಬರಗಾಲದ ಅಪಾಯಲ್ಲಿ 43 ದೇಶದ 41 ಮಿಲಿಯನ್ ಜನತೆ: ವಿಶ್ವಸಂಸ್ಥೆ ವರದಿ

ವಿಶ್ವಸಂಸ್ಥೆ, ಜೂ.23: 43 ದೇಶದ ಸುಮಾರು 41 ಮಿಲಿಯನ್ ಜನತೆ ಬರಗಾಲದ ಅಪಾಯದಲ್ಲಿದ್ದು, ಇತರ 4 ದೇಶಗಳ ಸುಮಾರು 60 ಲಕ್ಷ ಜನತೆ ಈಗಾಗಲೇ ಬರಗಾಲದಂತಹ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ವಿಶ್ವ ಆಹಾರ ಯೋಜನೆಯ ಹೇಳಿಕೆ ಎಚ್ಚರಿಸಿದೆ.

ಹವಾಮಾನ ಬದಲಾವಣೆ ಮತ್ತು ಆರ್ಥಿಕ ಆಘಾತಗಳು ಹಸಿವಿನಿಂದ ಬಳಲುವವರ ಪ್ರಮಾಣ ಹೆಚ್ಚಲು ಕಾರಣವಾಗಿದ್ದರೆ, ಅಗತ್ಯ ವಸ್ತುಗಳ ಬೆಲೆಯೇರಿಕೆ ಆಹಾರ ಭದ್ರತೆಯ ಮೇಲಿನ ಒತ್ತಡ ಹೆಚ್ಚಲು ಕಾರಣವಾಗಿದೆ ಎಂದು ಮಂಗಳವಾರ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
  
2021ರಲ್ಲಿ ನಮಗೆ ಎದುರಾಗಲಿರುವ ಪರಿಸ್ಥಿತಿಯ ಬಗ್ಗೆ ಆತಂಕಿತನಾಗಿದ್ದೇನೆ. ಈಗ ಕ್ಷಾಮದ ರೀತಿಯ ಪರಿಸ್ಥಿತಿ 4 ದೇಶಗಳಲ್ಲಿದೆ. ಈ ಮಧ್ಯೆ 41 ಮಿಲಿಯನ್ ಜನತೆ ಬರಗಾಲದ ಬಾಗಿಲು ಬಡಿಯುತ್ತಿದ್ದಾರೆ ಎಂದು ವಿಶ್ವ ಆಹಾರ ಯೋಜನೆ(ಡಬ್ಲ್ಯೂಇಎಫ್)ಯ ಕಾರ್ಯನಿರ್ವಾಹಕ ನಿರ್ದೇಶಕ ಡೇವಿಡ್ ಬೆಸ್ಲೆ ಹೇಳಿದ್ದಾರೆ. ಇಥಿಯೋಪಿಯಾ, ದಕ್ಷಿಣ ಸುಡಾನ್, ಮಡಗಾಸ್ಕರ್ ಮತ್ತು ಯೆಮೆನ್ನಲ್ಲಿ ಈ ವರ್ಷ ಬರಗಾಲದಂತಹ ಪರಿಸ್ಥಿತಿಯಿದೆ. 

ನೈಜೀರಿಯಾ ಮತ್ತು ಬುರ್ಕಿನಾ ಫಾಸೊದಲ್ಲೂ ಬರಗಾಲದ ಛಾಯೆ ಆವರಿಸಿದೆ. ಆದರೆ ಸಾವಿನ ಪ್ರಮಾಣದ ಬಗ್ಗೆ ಚರ್ಚೆ ನಡೆಸುವುದು ಸರಿಯಲ್ಲ. ಯಾಕೆಂದರೆ ಸೊಮಾಲಿಯಾದಲ್ಲಿ 2011ರಲ್ಲಿ ಕಂಡುಬಂದ ಭೀಕರ ಕ್ಷಾಮದ ಸಂದರ್ಭ, ಬರಗಾಲದ ಘೋಷಣೆಗೂ ಮುನ್ನ ದೇಶದಲ್ಲಿ ಸುಮಾರು 13 ಲಕ್ಷ ಜನತೆ ಸಾವಿಗೀಡಾಗಿದ್ದರು, ಇವರಲ್ಲಿ ಅರ್ಧಾಂಶದಷ್ಟು ಜನ ಹಸಿವಿನಿಂದ ಪ್ರಾಣ ಕಳೆದುಕೊಂಡಿದ್ದರು ಎಂದು ಬೆಸ್ಲೆ ಹೇಳಿದ್ದಾರೆ.
 
ಬರಗಾಲದ ಅಪಾಯದಲ್ಲಿರುವ 43 ದೇಶಗಳಿಗೆ ನೆರವಾಗಲು ತಕ್ಷಣವೇ 6 ಬಿಲಿಯನ್ ಡಾಲರ್ ಮೊತ್ತದ ಅಗತ್ಯವಿದೆ ಎಂದು ಸ್ವಯಂಪ್ರೇರಿತ ದೇಣಿಗೆಯಿಂದ ಕಾರ್ಯನಿರ್ವಹಿಸುವ ಡಬ್ಯೂಇಎಫ್ ಹೇಳಿದೆ. ಸಂಘರ್ಷ ಹಾಗೂ ಹವಾಮಾನ ಬದಲಾವಣೆಯಿಂದಾಗಿ 2016ರಿಂದ ವಿಶ್ವದಲ್ಲಿ ಹಸಿವಿನಿಂದ ಬಳಲುತ್ತಿರುವವರ ಪ್ರಮಾಣ ಹೆಚ್ಚುತ್ತಿದೆ. 2019ರಲ್ಲಿ 27 ಮಿಲಿಯನ್ ಜನತೆ ಬರಗಾಲದ ಅಪಾಯದಲ್ಲಿದ್ದರೆ, 2020ರಲ್ಲಿ ಕೊರೋನ ಸೋಂಕಿನ ಸಮಸ್ಯೆ ಈ ಬಿಕ್ಕಟ್ಟಿಗೆ ತನ್ನ ಪಾಲನ್ನು ನೀಡಿದೆ . ವಿಶ್ವದ ಜನಸಂಖ್ಯೆಯ ಸುಮಾರು 9% ಜನತೆ, ಅಂದರೆ ಸುಮಾರು 690 ಮಿಲಿಯನ್ ಜನ ಪ್ರತೀ ದಿನ ರಾತ್ರಿ ಉಪವಾಸ ಮಲಗುವ ಸ್ಥಿತಿಯಿದೆ ಎಂದು ಡಬ್ಲ್ಯೂಇಎಫ್ ಹೇಳಿದೆ. ಡಬ್ಲ್ಯೂಇಎಫ್ಗೆ ಕಳೆದ ವರ್ಷ ನೋಬೆಲ್ ಶಾಂತಿ ಪುರಸ್ಕಾರ ನೀಡಲಾಗಿದೆ.

ಆಹಾರ ಬೆಲೆಯೇರಿಕೆ
   
ಜಾಗತಿಕ ಮಟ್ಟದಲ್ಲಿ ಕಳೆದ ಮೇ ತಿಂಗಳಿನಲ್ಲಿ ಆಹಾರದ ಬೆಲೆಗಳು ಕಳೆದೊಂದು ದಶಕದಲ್ಲೇ ಅತ್ಯಧಿಕ ಮಟ್ಟಕ್ಕೇರಿದೆ. ಧಾನ್ಯಗಳು, ಎಣ್ಣೆಕಾಳುಗಳು, ಡೈರಿ ಉತ್ಪನ್ನಗಳು, ಮಾಂಸ ಮತ್ತು ಸಕ್ಕರೆಯ ಒಟ್ಟು ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ 40% ಏರಿಕೆಯಾಗಿದೆ. ಮೆಕ್ಕೆಜೋಳದ ದರ ಕಳೆದ ವರ್ಷಕ್ಕಿಂತ ಸುಮಾರು 90% ಹೆಚ್ಚಿದ್ದರೆ ಗೋಧಿಯ ಬೆಲೆ ಕಳೆದ ವರ್ಷಕ್ಕಿಂತ ಸುಮಾರು 30% ಹೆಚ್ಚಿದೆ. ಲೆಬನಾನ್, ನೈಜೀರಿಯಾ, ಸುಡಾನ್, ವೆನೆಝುವೆಲಾ ಮತ್ತು ಝಿಂಬಾಬ್ವೆಯಲ್ಲಿ ಕರೆನ್ಸಿ ಅಪಮೌಲ್ಯವು ಆಹಾರದ ಬೆಲೆಯನ್ನು ಮತ್ತಷ್ಟು ಹೆಚ್ಚಿಸಿದ್ದು ಆಹಾರ ಭದ್ರತೆಗೆ ಅಪಾಯ ತಂದಿದೆ ಎಂದು ಡಬ್ಲ್ಯೂಇಎಫ್ ಹೇಳಿದೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X