Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸದೀಯ ಸಮಿತಿ ಸಭೆಯಲ್ಲಿ ಕೋವಿಡ್ ಲಸಿಕೆ,...

ಸಂಸದೀಯ ಸಮಿತಿ ಸಭೆಯಲ್ಲಿ ಕೋವಿಡ್ ಲಸಿಕೆ, ರೂಪಾಂತರಿಗಳ ಕುರಿತು ಚರ್ಚಿಸಲು ನಿರಾಕರಿಸಿ ಹೊರನಡೆದ ಬಿಜೆಪಿ ಸದಸ್ಯರು

ವಾರ್ತಾಭಾರತಿವಾರ್ತಾಭಾರತಿ24 Jun 2021 10:02 AM IST
share
ಸಂಸದೀಯ ಸಮಿತಿ ಸಭೆಯಲ್ಲಿ ಕೋವಿಡ್ ಲಸಿಕೆ, ರೂಪಾಂತರಿಗಳ ಕುರಿತು ಚರ್ಚಿಸಲು ನಿರಾಕರಿಸಿ ಹೊರನಡೆದ ಬಿಜೆಪಿ ಸದಸ್ಯರು

ಹೊಸದಿಲ್ಲಿ: ಕೋವಿಡ್ ಲಸಿಕೆ ಅಭಿವೃದ್ಧಿ ಮತ್ತು ಕೊರೊನವೈರಸ್ ಮತ್ತದರ ರೂಪಾಂತರಿಗಳ ಜೆನೆಟಿಕ್ ಸೀಕ್ವೆನ್ಸಿಂಗ್ ಕುರಿತು ಚರ್ಚಿಸಲು ಬುಧವಾರ ನಡೆದ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತ ಸಂಸದೀಯ ಸ್ಥಾಯಿ ಸಮಿತಿ ಸಭೆಯಲ್ಲಿ ನಿರಾಕರಿಸಿದ ಬಿಜೆಪಿ ಸದಸ್ಯರು, ಇಂತಹ ಚರ್ಚೆಗಳು ವೈಜ್ಞಾನಿಕ ಸಮುದಾಯದ ಆತ್ಮಸ್ಥೈರ್ಯವನ್ನು ಕುಸಿಯುವಂತೆ ಮಾಡಬಹುದು ಎಂದು ಹೇಳಿದ್ದಾರೆ.

ಬಿಜೆಪಿ ಸದಸ್ಯರ ಕೋರಿಕೆಯಂತೆ ಸಭೆಯನ್ನು ಮುಂದೂಡಲು ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ನಿರಾಕರಿಸಿದಾಗ ಬಿಜೆಪಿ ಸದಸ್ಯರು ಸಭೆಯಿಂದ ಹೊರನಡೆದಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ. ದೇಶ ಈಗಲೂ ಸಾಂಕ್ರಾಮಿಕದ ವಿರುದ್ಧ ಹೋರಾಡುತ್ತಿರುವಾಗ ಲಸಿಕೆ ಅಭಿವೃದ್ಧಿ ಕುರಿತು ಚರ್ಚಿಸುವುದು ಇದು ಸಕಾಲವಲ್ಲ ಎಂದು ವಾದಿಸಿದ ಬಿಜೆಪಿ ಸದಸ್ಯರು ಈ ವಿಚಾರದ ಚರ್ಚೆ ಸೂಕ್ತವೇ ಎಂಬ ಪ್ರಶ್ನೆಯನ್ನು ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರ ಮುಂದಿಡಬೇಕೆಂದು ಆಗ್ರಹಿಸಿದರು.

ಕೋವಿಡ್ ನಿಂದ ದೇಶದಲ್ಲಿ 4 ಲಕ್ಷ ಜರನು ಸಾವಿಗೀಡಾಗಿರುವಾಗ ಸಾಂಕ್ರಾಮಿಕದ ಫೊರೆನ್ಸಿಕ್ ವಿಶ್ಲೇಷಣೆ ತುರ್ತಾಗಿ ನಡೆಯಬೇಕಿದೆ ಎಂದು ವಿಪಕ್ಷ ಸದಸ್ಯರು ಆಗ್ರಹಿಸಿದರಲ್ಲದೆ ಎಐಎಂಐಎಂ ನ ಅಸಾದುದ್ದೀನ್ ಓವೈಸಿ, ಐಯುಎಂಎಲ್‍ನ ಇ ಟಿ ಮೊಹಮ್ಮದ್ ಬಶೀರ್ ಹಾಗೂ ಸಿಪಿಐನ ಬಿನೊಯ್ ವಿಶ್ವಂ ಸಹಿತ ಹಲವರು ಸಭೆ ಮುಂದುವರಿಯಬೇಕೆಂದು ಹೇಳಿದರು.

ಆದರೆ ಬಿಜೆಪಿಯ ಉನ್ನಾವೋ ಸಂಸದ ಸಾಕ್ಷಿ ಮಹಾರಾಜ್ ಒಪ್ಪದೆ ಮತದಾನದ ಮೂಲಕ ಚರ್ಚೆ ನಡೆಯಬೇಕೇ ಬೇಡವೇ ಎಂದು ಇತ್ಯರ್ಥಪಡಿಸಬೇಕೆಂದು ಆಗ್ರಹಿಸಿದರು. ಸಭೆ ನಡೆಯುವುದಕ್ಕಿಂತ ಮುಂಚಿತವಾಗಿಯೇ ಸಾಕ್ಷಿ ಮಹಾರಾಜ್ ಸಹಿತ ಕೆಲ ಬಿಜೆಪಿ ಸದಸ್ಯರು ಸಭೆಯ ವಿಷಯದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರನ್ನೆಲಾಗಿದೆ. ಆದರೆ ಮತದಾನ ನಡೆಸಲು ಜೈರಾಂ ರಮೇಶ್ ನಿರಾಕರಿಸಿದರಲ್ಲದೆ ಸಂಸದೀಯ ಸಮಿತಿ ಸಭೆಗಳು ಯಾವತ್ತೂ ಸಹಮತದೊಂದಿಗೆ ನಡೆಯುತ್ತದೆ ಎಂದು ವಾದಿಸಿದರು. ಈ ಸಂದರ್ಭ ಕೆಲ ಬಿಜೆಪಿ ಸಂಸದರು ಸಭೆಯಿಂದ ಹೊರನಡೆದಿದ್ದಾರೆ.

ಸಂಸದೀಯ ಸಮಿತಿಯಲ್ಲಿ 11 ಬಿಜೆಪಿ ಸಂಸದರು ಹಾಗೂ ಏಳು ವಿಪಕ್ಷ ಸಂಸದರು ಸದಸ್ಯರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X