ಜೂನ್ 25ರಿಂದ ಮಂಗಳೂರು-ಹೈದ್ರಾಬಾದ್, ಮಂಗಳೂರು-ಮಂತ್ರಾಲಯ ಬಸ್ ಸೇವೆ
ಉಡುಪಿ, ಜೂ.24:ಪ್ರಸ್ತುತ ಕೋವಿಡ್ ಲಾಕ್ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸ. ನಿಗಮದ ವತಿಯಿಂದ ಮಂಗಳೂರು-ಹೈದ್ರಾಬಾದ್, ಮಂಗಳೂರು-ಮಂತ್ರಾಲಯ ಮಾರ್ಗದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 25ರಿಂದ ಮತ್ತೆ ಬಸ್ ಸಾರಿಗೆಗಳ ಸಂಚಾರವನ್ನು ಪ್ರಾರಂಭಿಸಲಾಗುವುದು.
ಅಂಬಾರಿ ಡ್ರೀಮ್ ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆ ಅಪರಾಹ್ನ 3 ಕ್ಕೆ ಮಂಗಳೂರಿನಿಂದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಹುಬ್ಬಳ್ಳಿ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಬೆಳಗ್ಗೆ 9 ಗಂಟೆಗೆ ಹೈದ್ರಾಬಾದ್ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 5:00ಕ್ಕೆ ಹೈದ್ರಾಬಾದ್ನಿಂದ ಹೊರಟು ಮರುದಿನ ಬೆಳಗ್ಗೆ 10 ಕ್ಕೆ ಮಂಗಳೂರು ತಲುಪಲಿದೆ.
ನಾನ್ ಎಸಿ ಸ್ಲೀಪರ್ ಸಾರಿಗೆಯು ಅಪರಾಹ್ನ 3:30ಕ್ಕೆ ಮಂಗಳೂರಿನಿಂದ ಹೊರಟು ಉಡುಪಿ, ಕುಂದಾಪುರ, ಸಿದ್ಧಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಚಿತ್ರದುರ್ಗ, ಬಳ್ಳಾರಿ ಮಾರ್ಗವಾಗಿ ಮರುದಿನ ಬೆಳಗ್ಗೆ 6:30ಕ್ಕೆ ಮಂತ್ರಾಲಯ ತಲುಪಲಿದ್ದು, ಮರು ಪ್ರಯಾಣದಲ್ಲಿ ಸಂಜೆ 5:00ಕ್ಕೆ ಮಂತ್ರಾಲಯದಿಂದ ಹೊರಟು ಮರುದಿನ ಬೆಳಗ್ಗೆ 7:30ಕ್ಕೆ ಮಂಗಳೂರು ತಲುಪಲಿದೆ.
ಈ ಸಾರಿಗೆಗಳಲ್ಲಿ ಆನ್ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ www.ksrtc.in - ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.







