Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಂಭ ಕೋವಿಡ್ ಪರೀಕ್ಷಾ ಹಗರಣದ...

ಕುಂಭ ಕೋವಿಡ್ ಪರೀಕ್ಷಾ ಹಗರಣದ ಕೇಂದ್ರಬಿಂದುವಾದ ಸಂಸ್ಥೆಗೆ ಬಿಜೆಪಿಯೊಂದಿಗೆ ನಂಟು

thewire.in ತನಿಖಾ ವರದಿ

ವಾರ್ತಾಭಾರತಿವಾರ್ತಾಭಾರತಿ24 Jun 2021 10:05 PM IST
share
ಕುಂಭ ಕೋವಿಡ್ ಪರೀಕ್ಷಾ ಹಗರಣದ ಕೇಂದ್ರಬಿಂದುವಾದ ಸಂಸ್ಥೆಗೆ ಬಿಜೆಪಿಯೊಂದಿಗೆ ನಂಟು

ಮುಂಬೈ, ಜೂ.24: ಹರಿದ್ವಾರದಲ್ಲಿ ನಡೆದ ಕುಂಭಮೇಳದ ಸಂದರ್ಭ ಸುಮಾರು ಒಂದು ಲಕ್ಷ ನಕಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದ ಆರೋಪಿಯಾಗಿರುವ ಮ್ಯಾಕ್ಸ್ ಕಾರ್ಪೊರೇಟ್ ಸರ್ವಿಸಿಸ್ ಆಡಳಿತ ಬಿಜೆಪಿಯೊಂದಿಗೆ ನಂಟು ಹೊಂದಿದೆ ಮತ್ತು ಮೊದಲು ಅನರ್ಹವಾಗಿದ್ದರೂ ನಂತರ ಅದನ್ನು ಉತ್ತರಾಖಂಡ ಅಧಿಕಾರಿಗಳು ಆಯ್ಕೆ ಮಾಡಿದ್ದರಲ್ಲಿ ಈ ನಂಟು ಪ್ರಮುಖ ಪಾತ್ರ ವಹಿಸಿರಬಹುದು ಎಂದು ಸುದ್ದಿ ಜಾಲತಾಣ The Wire ತನ್ನ ತನಿಖಾ ವರದಿಯಲ್ಲಿ ಬಹಿರಂಗಗೊಳಿಸಿದೆ.

The Wire  ಬಳಿಯಲ್ಲಿರುವ ಸಾಕ್ಷಾಧಾರಗಳು ಕಂಪನಿಯ ಸ್ಥಾಪಕ-ಪಾಲುದಾರ ಶರತ್ ಪಂತ್ ಅವರು ಪರೀಕ್ಷೆಯ ಗುತ್ತಿಗೆ ಪಡೆಯುವ ಮುನ್ನ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪಕ್ಷದ ಹಿರಿಯ ನಾಯಕರು ಮತ್ತು ಮೋದಿ ಸರಕಾರದ ಸಚಿವರೊಂದಿಗೆ ಒಡನಾಟದಲ್ಲಿದ್ದರು ಎನ್ನುವುದನ್ನು ಬೆಟ್ಟು ಮಾಡುತ್ತಿವೆ. ಮಲ್ಲಿಕಾ ಪಂತ್ ಕಂಪನಿಯ ಇನ್ನೋರ್ವ ಸ್ಥಾಪಕ-ಪಾಲುದಾರರಾಗಿದ್ದಾರೆ.

ಪಂತ್ ಅವರ ಕುಟುಂಬವೂ ಬಿಜೆಪಿಯೊಂದಿಗೆ ನಂಟು ಹೊಂದಿದೆ. ಪಂತ್ ಸೋದರಮಾವ ಭೂಪೇಶ ಜೋಶಿ ಅವರು ಮಾಜಿ ಕೇಂದ್ರ ಸಚಿವ ದಿ.ಅನಂತ ಕುಮಾರ ಅವರ ನಿಕಟ ಸಹಾಯಕರಾಗಿದ್ದರು. ಅನಂತ ಕುಮಾರ ಜೊತೆಗೆ ಕೆಲಸ ಮಾಡಿದ್ದನ್ನು ದೃಢಪಡಿಸಿರುವ ಅವರು ಈಗಲೂ ತಾನು ಕೇಂದ್ರ ಸಂಪುಟದೊಂದಿಗೆ ಮುಂದುವರಿದಿದ್ದೇನೆ ಎಂದು ತಿಳಿಸಿದರಾದರೂ ತನ್ನ ಹುದ್ದೆಯನ್ನು ಬಹಿರಂಗಗೊಳಿಸಲಿಲ್ಲ. ಹಿರಿಯ ನಾಯಕರೊಂದಿಗೆ ತಾನು ನಿಕಟವಾಗಿರುವುದಕ್ಕೂ ಪಂತ್ ಗುತ್ತಿಗೆಯನ್ನು ಪಡೆದಿರುವುದಕ್ಕೂ ಸಂಬಂಧವಿಲ್ಲ ಎಂದು ಅವರು ಒತ್ತಿ ಹೇಳಿದರು.

 ಜನವರಿಯಲ್ಲಿ ಕುಂಭಮೇಳ ಆಡಳಿತವು ಉತ್ತರಾಖಂಡ ಸರಕಾರದ ಮೂಲಕ ಕುಂಭಮೇಳದಲ್ಲಿ ಸಾಮೂಹಿಕ ಕೋವಿಡ್ ಲಸಿಕೆ ನೀಡಿಕೆಯ ಗುತ್ತಿಗೆಗಾಗಿ ಆಸಕ್ತರಿಂದ ಪ್ರಸ್ತಾವಗಳನ್ನು ಆಹ್ವಾನಿಸಿತ್ತು. ಈ ಪ್ರಕ್ರಿಯೆ ಜಾರಿಯಲ್ಲಿರುವಾಗ ಪಂತ್ ನಡ್ಡಾ,ಕೇಂದ್ರ ಸಚಿವರಾದ ರಮೇಶ ಪೋಖ್ರಿಯಾಲ್ ನಿಷಾಂಕ್ ಮತ್ತು ಸ್ಮತಿ ಇರಾನಿ ಸೇರಿದಂತೆ ಹಲವಾರು ಹಿರಿಯ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದರು. ಈ ನಾಯಕರೊಂದಿಗೆ ಭೇಟಿಯ ಚಿತ್ರಗಳನ್ನು ಪಂತ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು.

ತನ್ಮಧ್ಯೆ ಲಸಿಕೆ ನೀಡಿಕೆಯ ಗುತ್ತಿಗೆಯನ್ನು ಪಡೆಯಲು ನಿಗದಿತ ಮಾನದಂಡಗಳನ್ನು ಹೊಂದಿಲ್ಲ ಎಂಬ ಕಾರಣಕ್ಕೆ ಪಂತ್ ಅವರ ಕಂಪನಿಯು ಸಲ್ಲಿಸಿದ್ದ ಪ್ರಸ್ತಾವವನ್ನು ಜಿಲ್ಲಾಡಳಿತವು ತಿರಸ್ಕರಿಸಿತ್ತು.
  
ಮಾ.9ರಂದು ನಿಗೂಢ ಸನ್ನಿವೇಶದಲ್ಲಿ ತ್ರಿವೇಂದ್ರ ಸಿಂಗ್ ರಾವತ್ ಅವರು ಉತ್ತರಾಖಂಡ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು ಮತ್ತು ಮರುದಿನವೇ ತೀರ್ಥ ಸಿಂಗ್ ರಾವತ್ರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಬಿಜೆಪಿ ಘೋಷಿಸಿತ್ತು. ಅದೇ ದಿನ ಪಂತ್ ನೂತನ ಮುಖ್ಯಮಂತ್ರಿಗಳನ್ನು ಅಭಿನಂದಿಸಿ ಅವರ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದರು. ಜಿಲ್ಲಾಡಳಿತದಿಂದ ಪಂತ್ ಅವರ ಕಂಪನಿ ಮ್ಯಾಕ್ಸ್ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡ 15 ದಿನಗಳ ಬಳಿಕ ಅಂತಹುದೇ ಪ್ರಸ್ತಾವವನ್ನು ಕುಂಭಮೇಳ ಆಡಳಿತಕ್ಕೆ ಸಲ್ಲಿಸಿದ್ದರು. ಈ ಪ್ರಸ್ತಾವವನ್ನು ಜಿಲ್ಲಾಡಳಿತವನ್ನು ತಪ್ಪಿಸಿ ನೇರವಾಗಿ ರಾಜ್ಯ ಸರಕಾರದ ಮುಂದಿರಿಸಲಾಗಿತ್ತು ಮತ್ತು ಮಾ.16ರಂದು ಪಂತ್ ಕಂಪನಿ ಮ್ಯಾಕ್ಸ್ಗೆ ಗುತ್ತಿಗೆ ಮಂಜೂರಾಗಿತ್ತು.

ಮ್ಯಾಕ್ಸ್ ಗುತ್ತಿಗೆಯನ್ನು ಪಡೆದುಕೊಂಡ ಬೆನ್ನಿಗೇ ಹೇಗೆ ಅವ್ಯವಹಾರಗಳು ಆರಂಭಗೊಂಡಿದ್ದವು ಎನ್ನುವುದನ್ನು ಹರಿದ್ವ್ವಾರ ಜಿಲ್ಲಾಡಳಿತವು ಆದೇಶಿಸಿರುವ ತನಿಖೆಯು ಬಹಿರಂಗಗೊಳಿಸಿದೆ. ಮ್ಯಾಕ್ಸ್ಗೆ ಗುತ್ತಿಗೆಯನ್ನು ನೀಡುವಾಗ ನಿಯಮಗಳನ್ನು ಉಲ್ಲಂಘಿಸಲಾಗಿತ್ತು ಎಂದು ತನಿಖಾಧಿಕಾರಿ ತಿಳಿಸಿದರು.
 
ಮ್ಯಾಕ್ಸ್ ತಾನು ನಡೆಸಿರುವುದಾಗಿ ಹೇಳಿಕೊಂಡಿರುವ ಎಲ್ಲ ಕೋವಿಡ್ ಪರೀಕ್ಷೆಗಳ ಸಂಪರ್ಕ ವಿವರಗಳನ್ನು ತನಿಖಾ ತಂಡವು ಈಗ ಪರಿಶೀಲಿಸುತ್ತಿದೆ. ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಹೊಂದಿರುವ ಪಂತ್ ಮುಂದಿನ ವರ್ಷದ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹವಣಿಸುತ್ತಿದ್ದಾರೆ ಎಂದು ಅವರ ಸಂಬಂಧಿಯೋರ್ವರು ತಿಳಿಸಿದರು. ಪಂತ್ ಅಲ್ಮೋರಾ ಜಿಲ್ಲೆಯ ದ್ವಾರಹಾಟ್ ನಿವಾಸಿಯಾಗಿದ್ದು,ಈ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಮಹೇಶಸಿಂಗ ನೇಗಿ ಅತ್ಯಾಚಾರದ ಆರೋಪವನ್ನು ಎದುರಿಸುತ್ತಿದ್ದಾರೆ.

ಕೋವಿಡ್ ಪರೀಕ್ಷೆ ಹಗರಣವು ಪಂತ್ಗೆ ಹಾನಿಯನ್ನುಂಟು ಮಾಡುವ ಸಾಧ್ಯತೆಯಿಲ್ಲ,ಅವರ ಹಿಂದೆ ಬಿಜೆಪಿಯ ‘ದೊಡ್ಡ’ನಾಯಕರಿದ್ದಾರೆ. ಅವರಿಗೆ ಖಂಡಿತ ಬಿಜೆಪಿ ಟಿಕೆಟ್ ಸಿಗುತ್ತದೆ ಎಂದು ಅವರನ್ನು ನಿಕಟವಾಗಿ ಬಲ್ಲ ಸ್ಥಳೀಯ ಮೂಲವೊಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X