Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಲ್ಲಿ...

ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ: ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ25 Jun 2021 9:44 PM IST
share
ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ: ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆರೋಪ

ಶಿವಮೊಗ್ಗ, ಜೂ.25: ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರಂತರ ಯೋಜನೆ 2019 ರ ಮಾರ್ಚ್ ಗೆ ಮುಗಿಯಬೇಕಿತ್ತು. ಆದರೆ, ಸರ್ಕಾರದ ವಿಳಂಬ ನೀತಿಯಿಂದ ಅದು ಇನ್ನೂ ಮುಗಿದಿಲ್ಲ. ಇದರ ಜೊತೆಗೆ ಈ ಯೋಜನೆಯನ್ನು ಭಾರೀ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೂಡ ಬಹಿರಂಗವಾಗಿಯೇ ಕೇಳಿ ಬರುತ್ತಿವೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಒಂದೆರಡು ತಿಂಗಳ ಹಿಂದೆ ನಡೆದ ಸಭೆಯಲ್ಲಿಯೇ ಸುಮಾರು 5 ಕೋಟಿ ರೂ. ಭಾರೀ ಭ್ರಷ್ಟಾಚಾರವಾಗಿದೆ, ಮೆಸ್ಕಾಂ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಈ ಅವ್ಯವಹಾರ ನಡೆಸಿದ್ದಾರೆ, ಇದನ್ನು ನಾನು ಸಹಿಸುವುದಿಲ್ಲ, ಸರಿಯಾದ ಕ್ರಮ ತೆಗೆದುಕೊಳ್ಳುವೆ ಎಂದು ಹೇಳಿಕೆ ನೀಡಿದ್ದರು. ವಿರೋಧ ಪಕ್ಷವೊಂದು ಆರೋಪ ಮಾಡಬೇಕಾದ ವಿಷಯವನ್ನು ಶಾಸಕರೇ ಹೇಳಿದ್ದರಿಂದ ನಾವು ಕೂಡ ಅದನ್ನು ಸ್ವಾಗತಿಸಿದ್ದೆವು. ಆದರೆ, ಇದುವರೆಗೂ ಜಿಲ್ಲಾ ಉಸ್ತುವಾರಿ ಸಚಿವರು ಯಾವ ಕ್ರಮವನ್ನೂ ಕೈಗೊಳ್ಳದೇ ತಟಸ್ಥರಾಗಿದ್ದಾರೆ ಎಂದರು.

ಈಶ್ವರಪ್ಪನವರ ಈ ತಟಸ್ಥ ನೀತಿಯನ್ನು ನೋಡಿದರೆ, ಕೇವಲ ಗುತ್ತಿಗೆದಾರರನ್ನು ಹೆದರಿಸಲು ಈ ರೀತಿ ಮಾತನಾಡಿದ್ದಾರೆಯೇ ಎಂಬ ಅನುಮಾನಗಳ ಜೊತೆಗೆ ಈ ಅವ್ಯವಹಾರದಲ್ಲೂ ಕೂಡ ಒಳ ಒಪ್ಪಂದವಾಗಿದೆ ಎಂಬ ಗುಮಾನಿಗಳು ಬರುತ್ತವೆ. ಆದ್ದರಿಂದ ಸಚಿವರು ಕೂಡಲೇ ಈ ಯೋಜನೆಯಲ್ಲಿ ಆಗಿರುವ ಅವ್ಯವಹಾರವನ್ನು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ಹಾಗೂ ಹೆಚ್ಚುವರಿ ಹಣ ಖರ್ಚು ಮಾಡಿದ್ದರೆ ಅದನ್ನು ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು.

ಈ ಯೋಜನೆ ಹಳ್ಳಿಗರನ್ನು ತಲುಪಿಲ್ಲ. ಮೆಸ್ಕಾಂನ ಸುಮಾರು 10 ಕ್ಕೂ ಹೆಚ್ಚು ಇಂಜಿನಿಯರ್ ಗಳು ಈ ಬಗ್ಗೆ ಮಾಹಿತಿ ಕೂಡ ನೀಡಿದ್ದಾರೆ. ಫೀಡರ್ ಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದು ನಿಜ. ಕೂಡಲೇ ಇದರ ಸಂಪೂರ್ಣ ತನಿಖೆಯಾಗಲಿ ಎಂದರು.

ರಾಜ್ಯ ಸರ್ಕಾರ ಲಸಿಕೆ ಅಭಿಯಾನ ಹಮ್ಮಿಕೊಂಡಿದೆ. ಆದರೆ, ಇದು ಕಾಟಾಚಾರಕ್ಕೆ ಮಾತ್ರ ಎನ್ನುವಂತಾಗಿದೆ. ಕಳೆದೆರಡು ದಿನಗಳಿಂದ ಸರ್ಕಾರಿ ಆಸ್ಪತ್ರೆ ಮತ್ತು ಲಸಿಕೆ ಕೇಂದ್ರಗಳಲ್ಲಿ ಯಾರಿಗೂ ಲಸಿಕೆ ಸಿಗುತ್ತಿಲ್ಲ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ತಕ್ಷಣವೇ ಸಿಗುತ್ತಿದೆ. ಇಲ್ಲೂ ಕೂಡ ಖಾಸಗಿ ಆಸ್ಪತ್ರೆಗಳಿಗೆ ಸಹಕಾರ ನೀಡಲು ಒಳ ಒಪ್ಪಂದ ಮಾಡಿಕೊಂಡು ಲಸಿಕೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶ್ಯಾಮ್ ಸುಂದರ್, ರಘು, ಶಾಮೀರ್ ಖಾನ್ ಮಂಜುನಾಥ್ ಬೊಮ್ಮನಕಟ್ಟೆ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X