Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಸಿಕೆಗಳನ್ನು ಮಿಶ್ರಣಗೊಳಿಸುವುದರಿಂದ...

ಲಸಿಕೆಗಳನ್ನು ಮಿಶ್ರಣಗೊಳಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಬಹುದು: ಏಮ್ಸ್ ವರಿಷ್ಠ

ವಾರ್ತಾಭಾರತಿವಾರ್ತಾಭಾರತಿ26 Jun 2021 11:04 PM IST
share
ಲಸಿಕೆಗಳನ್ನು ಮಿಶ್ರಣಗೊಳಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಬಹುದು: ಏಮ್ಸ್ ವರಿಷ್ಠ

ಹೊಸದಿಲ್ಲಿ, ಜೂ. 26: ಕೋವಿಡ್ ಲಸಿಕೆಗಳನ್ನು ಸಂಯೋಜಿಸುವುದರಿಂದ ಉತ್ತಮ ರೋಗ ನಿರೋಧಕ ಶಕ್ತಿ ಅಥವಾ ಪ್ರತಿಕಾಯಗಳು ಉತ್ಪತ್ತಿಯಾಗುವ ಖಚಿತ ಸಾಧ್ಯತೆ ಇದೆ ಎಂದು ಕೆಲವು ದತ್ತಾಂಶಗಳು ತಿಳಿಸಿವೆ. ಆದರೆ, ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಹೆಚ್ಚಿನ ಮಾಹಿತಿಯ ಅಗತ್ಯತೆ ಇದೆ ಎಂದು ಏಮ್ಸ್ ನ ವರಿಷ್ಠ ಡಾ. ರಣದೀಪ್ ಗುಲೇರಿಯಾ ಶನಿವಾರ ತಿಳಿಸಿದ್ದಾರೆ. 

ಮೊದಲು ಒಂದು ಲಸಿಕೆ, ಬಳಿಕ ಇನ್ನೊಂದು ಲಸಿಕೆ ನೀಡಿರುವುದು ನಾವು ಈ ಹಿಂದೆ ಗಮನಿಸಿದ ವಿಷಯ. ಲಸಿಕೆಗಳನ್ನು ಸಂಯೋಜಿಸುವುದರಿಂದ ಸ್ಪಲ್ಪ ಹೆಚ್ಚೇ ಅಡ್ಡ ಪರಿಣಾಮಗಳು ಉಂಟಾಗಬಹುದು ಎಂದು ಕೆಲವು ದತ್ತಾಂಶಗಳು ಸೂಚಿಸಿವೆ. ಆದರೆ, ಉತ್ತಮ ರೋಗ ನಿರೋಧಕ ಶಕ್ತಿಗೆ ಹಾಗೂ ಪ್ರತಿಕಾಯಗಳ ಉತ್ಪತ್ತಿಗೆ ಕಾರಣವಾಗಬಹುದು ಇತರ ದತ್ತಾಂಶಗಳು ಹೇಳಿವೆ ಎಂದು ಡಾ. ಗುಲೆರಿಯಾ ತಿಳಿಸಿದ್ದಾರೆ. 

‘‘ಒಬ್ಬರಿಗೆ ಲಸಿಕೆಯ ಸಂಯೋಜನೆ ನೀಡುವುದನ್ನು ನಿರ್ಧರಿಸಲು ಹೆಚ್ಚು ದತ್ತಾಂಶಗಳು ಬೇಕಾಗಬಹುದು. ಯಾಕೆಂದರೆ ಭವಿಷ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಲಸಿಕೆಗಳು ಲಭ್ಯವಿರಲಿದೆ. ಪೈಝರ್, ಮೊಡೆರ್ನಾ, ಸ್ಪುಟ್ನಿಕ್ ವಿ ಹಾಗೂ ಝೈಡಸ್ ಕ್ಯಾಡಿಲ್ಲಾ ಲಸಿಕೆಗಳು ಲಭ್ಯವಿರಲಿದೆ. ಆದುದರಿಂದ ಯಾವ ಸಂಯೋಜನೆ ಉತ್ತಮ ಎಂಬುದು ನಮಗೆ ಈಗ ತಿಳಿದಿಲ್ಲ. ಆದರೆ, ಇದು ಒಂದು ಆಯ್ಕೆ ಎಂಬುದನ್ನು ಪ್ರಾಥಮಿಕ ಅಧ್ಯಯನ ತಿಳಿಸಿದೆ.’’ ಎಂದು ಅವರು ವಿವರಿಸಿದ್ದಾರೆ. 

ಈ ದಿಶೆಯಲ್ಲಿ ಸರಕಾರ ಕಾರ್ಯ ನಿರ್ವಹಿಸುತ್ತಿದೆ. ಟ್ರಯಲ್ ನ ಫಲಿತಾಂಶ ಕೆಲವು ತಿಂಗಳುಗಳಲ್ಲಿ ದೊರೆಯಲಿದೆ. ಬ್ರಿಟೀಷ್ ಅಧ್ಯಯನದ ಪ್ರಾಥಮಿಕ ಫಲಿತಾಂಶವನ್ನು ಲಾನ್ಸೆಟ್ನಲ್ಲಿ ಕಳೆದ ತಿಂಗಳು ಪ್ರಕಟಿಸಲಾಗಿತ್ತು. ಎರಡು ಲಸಿಕೆಗಳ ಸಂಯೋಜನೆ ಸುರಕ್ಷಿತ ಹಾಗೂ ಪರಿಣಾಮಕಾರಿ ಎಂಬುದು ಬೆಳಕಿಗೆ ಬಂದಿದೆ ಎಂಬ ಸ್ಪಾನಿಷ್ ಅಧ್ಯಯನದ ಬಗ್ಗೆ ರಾಯ್ಟರ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈಗಿರುವ ಲಸಿಕೆಗಳು ಡೆಲ್ಟಾ ಪ್ಲಸ್ ಪ್ರಬೇಧದ ವಿರುದ್ಧ ಪರಿಣಾಮಕಾರಿಯಾಗದೇ ಇರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿರುವ ಡಾ. ಗುಲೇರಿಯಾ ಅವರು, ಈ ಎಲ್ಲ ಆತಂಕಗಳ ಹೊರತಾಗಿಯೂ ಲಸಿಕೆ ಹಾಕಿಸಿಕೊಳ್ಳುವುದು ಅತಿ ಮುಖ್ಯ ಎಂದು ಒತ್ತಿ ಹೇಳಿದ್ದಾರೆ. 

‘‘ನೀವು ಎರಡು ಡೋಸ್ ಲಸಿಕೆಗಳನ್ನು ಹಾಕಿಸಿಕೊಂಡ ಬಳಿಕ ಕೊರೋನ ಸೋಂಕಿಗೆ ಒಳಗಾಗಬಹುದು. ಆದರೆ, ಸೋಂಕಿನ ತೀವ್ರತೆ ತುಂಬಾ ಕಡಿಮೆ ಇರುತ್ತದೆ’’ ಎಂದು ಗುಲೇರಿಯಾ ಹೇಳಿದ್ದಾರೆ. ಡೆಲ್ಟಾ ಪ್ರಬೇಧಕ್ಕೆ ಒಂದು ಡೋಸ್ ಲಸಿಕೆ ಸಾಕಾಗಲಾರದು ಎಂದು ಅವರು ಹೇಳಿದ್ದಾರೆ. ಪ್ರಕಟಿತ ವೈದ್ಯಕೀಯ ಸಂಶೋಧನೆಗೆಳು ಒಂದು ಡೋಸ್ ಶೇ. 33ರಷ್ಟು ಹಾಗೂ ಎರಡು ಡೋಸ್ ಶೇ. 90ರಷ್ಟು ರಕ್ಷಣೆ ನೀಡುತ್ತದೆ ಎಂದು ಅದು ಹೇಳಿದೆ ಎಂದು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X