ಚಾಮರಾಜನಗರ : ಆಕ್ಸಿಜನ್ ಕೊರತೆಯಿಂದ ಮೃತರ ಕುಟುಂಬಗಳಿಗೆ ಕೆಪಿಸಿಸಿ ವತಿಯಿಂದ ಪರಿಹಾರ ವಿತರಣೆ

ಚಾಮರಾಜನಗರ : ಮೇ 2 ರಂದು ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ದುರಂತದಲ್ಲಿ ಮೃತಪಟ್ಟ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ಚಿನ್ನಪ್ಪನಪುರದೊಡ್ಡಿಯ ರಂಗಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಾಂತ್ವಾನ ಹೇಳಿ, ಕಾಂಗ್ರೆಸ್ ವತಿಯಿಂದ 1 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.
ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ಧೃವನಾರಾಯಣ್, ಹನೂರು ಕ್ಷೇತ್ರದ ಶಾಸಕ ಆರ್. ನರೇಂದ್ರ, ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ, ಎಸ್.ಬಾಲರಾಜ್, ಪಿ. ಮರಿಸ್ವಾಮಿ ಉಪಸ್ಥಿತರಿದ್ದರು.
Next Story





