Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ಈ ಐದು ಪ್ರಾಥಮಿಕ ಮುನ್ನೆಚ್ಚರಿಕೆಗಳು...

ಈ ಐದು ಪ್ರಾಥಮಿಕ ಮುನ್ನೆಚ್ಚರಿಕೆಗಳು ನಿಮ್ಮನ್ನು ನಕಲಿ ಲಸಿಕೆ ವಂಚಕರಿಂದ ರಕ್ಷಿಸಬಲ್ಲವು

ವಾರ್ತಾಭಾರತಿವಾರ್ತಾಭಾರತಿ27 Jun 2021 4:42 PM IST
share
ಈ ಐದು ಪ್ರಾಥಮಿಕ ಮುನ್ನೆಚ್ಚರಿಕೆಗಳು ನಿಮ್ಮನ್ನು ನಕಲಿ ಲಸಿಕೆ ವಂಚಕರಿಂದ ರಕ್ಷಿಸಬಲ್ಲವು

ಮುಂಬೈ ಮತ್ತು ಕೋಲ್ಕತಾಗಳಲ್ಲಿ ತನಿಖಾ ಸಂಸ್ಥೆಗಳು ಹಲವಾರು ನಕಲಿ ಕೋವಿಡ್ ಲಸಿಕೆ ಶಿಬಿರಗಳನ್ನು ಬಯಲಿಗೆಳೆದಿವೆ. ಇಂತಹ ನಕಲಿ ಶಿಬಿರಗಳು ದೇಶದ ಇತರ ಭಾಗಗಳಲ್ಲಿಯೂ ಅಮಾಯಕರನ್ನು ವಂಚಿಸುವ ಹೆಚ್ಚಿನ ಸಾಧ್ಯತೆಗಳಿವೆ. ಮುಂಬೈ ಮತ್ತು ಕೋಲ್ಕತಾಗಳಲ್ಲಿ ಹಲವಾರು ಹೌಸಿಂಗ್ ಸೊಸೈಟಿಗಳನ್ನು ಗುರಿಯಾಗಿಸಿಕೊಂಡು ಈ ವಂಚನೆ ನಡೆದಿದೆ. ಹೌಸಿಂಗ್ ಸೊಸೈಟಿಗಳು ತಮ್ಮ ನಿವಾಸಿಗಳ ಅನುಕೂಲಕ್ಕಾಗಿ ಲಸಿಕೆ ಶಿಬಿರಗಳನ್ನು ನಡೆಸಲು ಅವಕಾಶ ನೀಡುತ್ತವೆ.

ಇಂದು ಅಪಾರ್ಟ್ ಮೆಂಟ್ ಗಳು ಸಣ್ಣಪುಟ್ಟ ನಗರಗಳಲ್ಲಿಯೂ ತಲೆಯೆತ್ತುತ್ತಿವೆ ಮತ್ತು ವಂಚಕರ ಕಣ್ಣು ಇವುಗಳ ಮೇಲೂ ಬೀಳಬಹುದು. ಬಹಳಷ್ಟು ಜನರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಲು ಕಾತುರರಾಗಿದ್ದು, ಇಂತಹ ನಕಲಿ ಲಸಿಕೆ ಘಟನೆಗಳನ್ನು ತಡೆಯಲು ಅವರು ಕೆಲವು ಪ್ರಾಥಮಿಕ ಮುನ್ನೆಚ್ಚರಿಕೆಗಳನ್ನು ವಹಿಸುವುದು ಅಗತ್ಯವಾಗಿದೆ. ನಕಲಿ ಲಸಿಕೆ ವಂಚಕರಿಂದ ಜನರನ್ನು ರಕ್ಷಿಸಬಲ್ಲ ಅಂತಹ ಕೆಲವು ಮುನ್ನೆಚ್ಚರಿಕೆಗಳ ಬಗ್ಗೆ ಮಾಹಿತಿಯಿಲ್ಲಿದೆ.....

 *► ಖಾಸಗಿ ಲಸಿಕೆ ಶಿಬಿರದಲ್ಲಿ ಲಸಿಕೆಯನ್ನು ಹಾಕಿಸಿಕೊಳ್ಳುವ ತಮ್ಮ ಯೋಜನೆಯ ಬಗ್ಗೆ ಹೌಸಿಂಗ್ ಸೊಸೈಟಿ ಸದಸ್ಯರು ಮತ್ತು ಅಪಾರ್ಟ್ಮೆಂಟ್ಗಳಲ್ಲಿ ವಾಸವಿರುವ ಜವಾಬ್ದಾರಿಯುತ ವ್ಯಕ್ತಿಗಳು ಸ್ಥಳೀಯ ಮುನ್ಸಿಪಲ್ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮುನ್ಸಿಪಲ್ ಅಥವಾ ಸ್ಥಳೀಯ ಆರೋಗ್ಯ ಅಧಿಕಾರಿಗಳು ಅನುಮೋದಿಸದಿದ್ದರೆ ಇಂತಹ ಶಿಬಿರಗಳು ಸೊಸೈಟಿಯ ಆವರಣದಲ್ಲಿ ತಮ್ಮ ಲಸಿಕೆ ನೀಡಿಕೆ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಕೂಡದು.

*► ಸಾಧ್ಯವಿದ್ದರೆ ಹೌಸಿಂಗ್ ಸೊಸೈಟಿಗಳು ಅಥವಾ ಕಾರ್ಪೊರೇಟ್ ಕಂಪನಿಗಳು ತಮ್ಮ ಆವರಣದಲ್ಲಿ ಲಸಿಕೆ ನೀಡಿಕೆ ಕೇಂದ್ರವನ್ನು ತೆರೆಯಲು ಖಾಸಗಿ ಆಸ್ಪತ್ರೆಗಳೊಂದಿಗೆ ನೇರವಾಗಿ ಒಪ್ಪಂದ ಮಾಡಿಕೊಳ್ಳಬೇಕು. ಇದರಿಂದ ಖಾಸಗಿ ಆಸ್ಪತ್ರೆಗಳೊಂದಿಗೆ ಗುರುತಿಸಿಕೊಂಡಿದ್ದೇವೆ ಎಂದು ಪರಿಚಯಿಸಿಕೊಳ್ಳುವ ವಂಚಕರು ಖಾಸಗಿ ಆಸ್ಪತ್ರೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು ವಂಚಿಸಲು ಅವಕಾಶ ದೊರೆಯುವುದಿಲ್ಲ.

*►  ವ್ಯಕ್ತಿಗತವಾಗಿ ಎಲ್ಲ ಫಲಾನುಭವಿಗಳು ತಮ್ಮ ವೈಯಕ್ತಿಕ ವಿವರಗಳು ಕೋವಿನ್ ಪೋರ್ಟಲ್ನಲ್ಲಿ ನೋಂದಾವಣೆಯಾಗಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕೋವಿನ್ ವ್ಯಾಕ್ಸಿನ್ ಪೋರ್ಟಲ್ನಲ್ಲಿ ನೋಂದಣಿಯಾಗಿರದ ಕೇಂದ್ರದಲ್ಲಿ ಲಸಿಕೆಯನ್ನೆಂದೂ ಹಾಕಿಸಿಕೊಳ್ಳಬಾರದು. 

*► ಫಲಾನುಭವಿಗಳು ಲಸಿಕೆ ಹಾಕಿಸಿಕೊಂಡ ಬೆನ್ನಲ್ಲೇ ಆ ಬಗ್ಗೆ ಪ್ರಮಾಣಪತ್ರವನ್ನು ನೀಡುವಂತೆ ಆಯೋಜಕರನ್ನು ಕೇಳಬೇಕು. ಲಸಿಕೆ ಪ್ರಮಾಣಪತ್ರವನ್ನು ನೀಡಲು ಕಾಲಹರಣ ಮಾಡುತ್ತಿದ್ದರೆ ಅಥವಾ ಒಂದೆರಡು ದಿನಗಳಲ್ಲಿ ಪ್ರಮಾಣಪತ್ರವನ್ನು ಒದಗಿಸುವುದಾಗಿ ಹೇಳುತ್ತಿದ್ದರೆ ಅವರ ಬಗ್ಗೆ ಅನುಮಾನ ಪಡಲೇಬೇಕಾಗುತ್ತದೆ.

*► ಕೊರೋನವೈರಸ್ ಲಸಿಕೆಯನ್ನು ಪಡೆದ ಎಲ್ಲರಲ್ಲೂ ಜ್ವರ,ಬಳಲಿಕೆ ಮತ್ತು ಮೈನೋವಿನಂತಹ ಲಸಿಕೆ ಸಂಬಂಧಿತ ಲಕ್ಷಣಗಳು ಕಂಡು ಬರುವುದಿಲ್ಲವಾದರೂ, ಹೆಚ್ಚಿನವರಲ್ಲಿ ಈ ಲಕ್ಷಣಗಳು ಗೋಚರವಾಗುತ್ತವೆ. ಫಲಾನುಭವಿಗಳು ಲಸಿಕೆ ಪಡೆದುಕೊಂಡ ಬಳಿಕ ತಮ್ಮ ಶರೀರದ ಪ್ರತಿವರ್ತನೆಯನ್ನು ಗಮನಿಸಬೇಕು ಮತ್ತು ಅದೇ ವೇಳೆ ಆ ಕೇಂದ್ರದಲ್ಲಿ ಲಸಿಕೆ ಹಾಕಿಸಿಕೊಂಡವರನ್ನೂ ಈ ಬಗ್ಗೆ ವಿಚಾರಿಸಬೇಕು.ಲಸಿಕೆ ಹಾಕಿಸಿಕೊಂಡ ಎಲ್ಲರಲ್ಲಿಯೂ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿರದಿದ್ದರೆ ತಕ್ಷಣ ಸ್ಥಳೀಯ ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸಬೇಕು ಮತ್ತು ಖಾಸಗಿ ಲಸಿಕೆ ಕೇಂದ್ರದ ಪ್ರಾಮಾಣಿಕತೆಯನ್ನು ದೃಢಪಡಿಸಿಕೊಳ್ಳಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X