Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾನ ಶಿಕ್ಷಣ, ಆರೋಗ್ಯಕ್ಕಾಗಿ ಜನಾಂದೋಲನ...

ಸಮಾನ ಶಿಕ್ಷಣ, ಆರೋಗ್ಯಕ್ಕಾಗಿ ಜನಾಂದೋಲನ ಅಗತ್ಯ: ಶಿಕ್ಷಣ ತಜ್ಞ ಶ್ರೀಪಾದ್ ಭಟ್

ವಾರ್ತಾಭಾರತಿವಾರ್ತಾಭಾರತಿ27 Jun 2021 8:09 PM IST
share

ಬೆಂಗಳೂರು, ಜೂ.27: `ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧವಾಗಿ ಸಮಾನ ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗಕ್ಕಾಗಿ ಜನಾಂದೋಲನ ರೂಪಿಸದಿದ್ದರೆ ಅಂಬೇಡ್ಕರ್, ಜ್ಯೋತಿಬಾ ಫುಲೆ ಅವರಂತಹ ಆಶಯಗಳು ನಮ್ಮೆದುರಿಗೆ ನಿರ್ಮೂಲನೆ ಆಗಲಿದೆ' ಎಂದು ಶಿಕ್ಷಣ ತಜ್ಞ ಶ್ರೀಪಾದ್‍ ಭಟ್ ಆತಂಕ ವ್ಯಕ್ತಪಡಿಸಿದ್ದಾರೆ.

ರವಿವಾರ ಕರ್ನಾಟಕ ವಿದ್ಯಾರ್ಥಿ ಶಕ್ತಿ ವತಿಯಿಂದ ಆಯೋಜಿಸಿದ್ದ ವೆಬಿನಾರ್ ನಲ್ಲಿ `ಕೋವಿಡ್ ಲಾಕ್‍ಡೌನ್ ಕಾಲದ ಶೈಕ್ಷಣಿಕ ಬಿಕ್ಕಟ್ಟು ಹಾಗೂ ಹೊಸ ಶಿಕ್ಷಣ ನೀತಿ ಮುಂದೇನು' ಎಂಬ ವಿಷಯದ ಕುರಿತು ಮಾತನಾಡಿದ ಅವರು, `ಕೇಂದ್ರ ಸರಕಾರ ಜಾರಿ ಮಾಡುತ್ತಿರುವ ಹೊಸ ಶಿಕ್ಷಣ ನೀತಿಯು ಶಿಕ್ಷಣವನ್ನು ಮೌಲ್ಯಯುತವಾಗಿ ರೂಪಿಸದೆ ಕೇವಲ ಮಾರುಕಟ್ಟೆಯಾಧಾರಿತ ಉದ್ಯೋಗಕ್ಕೆ ಸೀಮಿತಗೊಳಿಸಿ, ದೇಶದ ಮುಂದಿನ ತಲೆಮಾರನ್ನು ವ್ಯಕ್ತಿತ್ವ ಶೂನ್ಯಗೊಳಿಸಿ, ಗುಲಾಮರನ್ನಾಗಿ ರೂಪಿಸಲು ಹೊರಟಿದೆ' ಎಂದು ಟೀಕಿಸಿದರು.

ಹೊಸ ಶಿಕ್ಷಣ ನೀತಿಯು ತರಗತಿವಾರು ಶಿಕ್ಷಣವನ್ನು ಕಡಿತಗೊಳಿಸಿ, ಆನ್‍ಲೈನ್ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ಕೊಡುವುದಾಗಿದೆ. ಹಾಗೂ ಸಾರ್ವಜನಿಕ ಶಿಕ್ಷಣಕ್ಕೆ ಸರಕಾರದಿಂದ ಅನುದಾನವನ್ನು ಕಡಿತಗೊಳಿಸುತ್ತಾ ಸಾಗುವುದಾಗಿದೆ. ಇದರಿಂದ ಈಗಾಗಲೇ ಶಿಕ್ಷಣ ವಂಚಿತ ಸಮುದಾದಯ ವಿದ್ಯಾರ್ಥಿಯನ್ನು ಉನ್ನತ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಹುನ್ನಾರವಾಗಿದೆ ಎಂದು ಅವರು ಎಚ್ಚರಿಸಿದರು.

ಕೇಂದ್ರ ಸರಕಾರದ ಸರ್ವಾಧಿಕರಣ, ಕೋಮುವಾದಿಕರಣ ನೀತಿಗಳಿಗೆ ಪ್ರಬಲವಾಗಿ ವಿರೋಧ ವ್ಯಕ್ತವಾಗುತ್ತಿರುವುದು ವಿದ್ಯಾರ್ಥಿ ಸಮುದಾಯದಿಂದಲೇ ಆಗಿದೆ. ಹೀಗಾಗಿ ವಿದ್ಯಾರ್ಥಿಗಳನ್ನು ಸಾಮಾಜಿಕರಣ ಮಾಡದೆ, ಆನ್‍ಲೈನ್, ಡಿಜಿಟಲ್ ತಂತ್ರಜ್ಞಾನದ ಮೂಲಕ ನಾಲ್ಕು ಗೋಡೆ ಮಧ್ಯೆದಲ್ಲೇ ಬಂಧಿಸಿಟ್ಟರೆ, ಸರಕಾರಗಳ ಜನವಿರೋಧಿ ನೀತಿಗಳನ್ನು ಪ್ರಶ್ನಿಸುವವರೇ ಇಲ್ಲವಾಗುತ್ತಾರೆ. ಹೀಗಾಗಿ ಹೊಸ ಶಿಕ್ಷಣ ನೀತಿಯನ್ನು ಜಾರಿ ಮಾಡಲು ಸರಕಾರ ತುದಿಗಾಲಲ್ಲಿ ನಿಂತಿವೆ' ಎಂದು ಅವರು ದೂರಿದರು.

ದೇಶದ ಜನಪ್ರತಿನಿಧಿಗಳಿಗೆ ದೇಶದ ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಕುರಿತು ಅರಿವು, ಜ್ಞಾನ ಹಾಗೂ ಆಸಕ್ತಿ ಇಲ್ಲವಾಗಿದೆ. ಇಂತಹ ಲೋಪಗಳನ್ನು ದೇಶದ ಪಟ್ಟಭದ್ರ ಹಿತಾಸಕ್ತಿಗಳು, ಕಾರ್ಪೊರೇಟ್ ಶಕ್ತಿಗಳು ಜೊತೆಗೂಡಿ ದೇಶವನ್ನು ಆದೋಗತಿ, ಕುಲ ಕಸುಬು ಆಧಾರಿತ ವೃತ್ತಿಗೆ ಪುನಃ ಬಂಧಿಸಿಡುವಂತಹ ಷಡ್ಯಂತ್ರವನ್ನು ರೂಪಿಸಲಾಗುತ್ತಿದೆ. ಈ ಬಗ್ಗೆ ಜನಪರ ಸಂಘಟನೆಗಳು ಐಕ್ಯತೆಗೊಂಡು ಜನಾಂದೋಲನ ರೂಪಿಸಬೇಕಾದ ತುರ್ತು ಅಗತ್ಯವಿದೆ' ಎಂದು ಅವರು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X