Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾಕ್‌ಡೌನ್‌ನಲ್ಲಿ ಕೊರಗರ ನೆರವಿಗೆ ಬಾರದ...

ಲಾಕ್‌ಡೌನ್‌ನಲ್ಲಿ ಕೊರಗರ ನೆರವಿಗೆ ಬಾರದ ಉಡುಪಿ ಜಿಲ್ಲಾಡಳಿತ: ಆರೋಪ

ಪ್ರತಿಭಟನಾರ್ಥವಾಗಿ ಹಲವು ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ27 Jun 2021 8:42 PM IST
share
ಲಾಕ್‌ಡೌನ್‌ನಲ್ಲಿ ಕೊರಗರ ನೆರವಿಗೆ ಬಾರದ ಉಡುಪಿ ಜಿಲ್ಲಾಡಳಿತ: ಆರೋಪ

ಬೈಂದೂರು, ಜೂ.27: ಬೈಂದೂರು ತಾಲೂಕಿನ ನಾಡ, ಕೊಣ್ಕಿ, ಹೆಮ್ಮುಂಜೆ ಕೊರಗ ಸಮುದಾಯ 26 ಕುಟುಂಬಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಜಿಲ್ಲಾ ಸಂಘಟನಾ ಸಮಿತಿ ನೇತೃತ್ವದಲ್ಲಿ ಆಹಾರದ ಕಿಟ್ ವಿತರಣೆ ಮಾಡಲಾಯಿತು.

ಜಿಲ್ಲಾಡಳಿತ ಕೊರಗ ಸಮುದಾಯದ ನೆರವಿಗೆ ಬಾರದೆ ಇರುವುದನ್ನು ಪ್ರತಿಭಟಿಸಿ ಹಲವು ದಾನಿಗಳ ಸಹಾಯದಿಂದ ನೆರವಿನಿಂದ ಸಿಐಟಿಯು ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿ ವತಿಯಿಂದ ಹಮ್ಮಿಕೊಂಡ ಅನ್ನಪೂರ್ಣ ಅಭಿಯಾನ ಯೋಜನೆ ಮೂಲಕ ಆಹಾರದ ಕಿಟ್ ವಿತರಿಸಲಾಯಿತು.

ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಸಹ ಸಂಚಾಲಕ ಶ್ರೀಧರ್ ನಾಡ ಮಾತನಾಡಿ, ಜಿಲ್ಲೆಯಲ್ಲಿ ಲಾಕ್‌ಡೌನ್, ಕೋವಿಡ್ ಸಂದರ್ಭ ದಲ್ಲಿ ಅತ್ಯಂತ ಹೆಚ್ಚು ಕಷ್ಟಕ್ಕೆ ಒಳಗಾದವರು ಕೊರಗ ಸಮುದಾಯದವರು. ಅಪೌಷ್ಟಿಕತೆ, ರಕ್ತಹೀನತೆಯಿಂದ ಬಳಲುತ್ತಿರುವ ಕೊರಗ ಸಮುದಾಯದ ಆರೋಗ್ಯಕ್ಕೆ ಸಂಬಂಧಿಸಿದ ಅಧ್ಯಯನವನ್ನು ಸರಕಾರ ನಡೆಸಿದರೂ ಯಾವುದೇ ಕಾರ್ಯಕ್ರಮಗಳನ್ನು ಕೂಡ ಈವರೆಗೆ ಜಾರಿಗೆ ತಂದಿಲ್ಲ. ಲಾಕ್‌ಡೌನ್‌ನಲ್ಲಿ ಆಹಾರದ ಸಮಸ್ಯೆ ಎದುರಾದರೂ ಇವರಿಗೆ ಉಚಿತ ಪೌಷ್ಟಿಕ ಆಹಾರ ವಿತರಿಸಲು ಜಿಲ್ಲಾಡಳಿತ ಈವರೆಗೆ ಕ್ರಮ ವಹಿಸಿಲ್ಲ ಎಂದು ಆರೋಪಿಸಿದರು.

ಜಿಲ್ಲೆಯ ಕೊರಗ ಸಮುದಾಯದ ನಿರುದ್ಯೋಗಿ ಯುವಜನರಿಗೆ ಕಳೆದ ವರ್ಷ ನೀಡಬೇಕಾದ ನಿರುದ್ಯೋಗ ಭತ್ಯೆ ಈವರೆಗೆ ನೀಡಿಲ್ಲ. ಕರ್ನಾಟಕ ರಾಜ್ಯದಲ್ಲಿ ಕೊರಗರು ಮತ್ತು ಜೇನು ಕುರುಬ ಜನಾಂಗದವರಿಗೆ ನೀಡಬೇಕಾದ ಪಿ.ವಿ.ಟಿ.ಜಿ. ಅನುದಾನ 2014ರಿಂದ ಇಲ್ಲಿಯವರೆಗೆ ಕೇಂದ್ರ ಸರಕಾರದ ಬಿಡುಗಡೆಗೊಳಿಸದೆ ಅನ್ಯಾಯ ಮಾಡಿದೆ ಎಂದು ಅವರು ದೂರಿದರು.

ಇದೇ ಸಂದರ್ಭದಲ್ಲಿ ಕೋವಿಡ್ ಎದುರಿಸುವ ಕುರಿತು ಮತ್ತು ಲಸಿಕೆ ಪಡೆಯಲು ಜಾಗೃತಿ ಮೂಡಿಸಲಾಯಿತು. ಪಡುಕೋಣೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ನಾಡ ಗ್ರಾಪಂ ಸದಸ್ಯ ರಾಜೀವ ಪಡು ಕೋಣೆ, ಡಿವೈಎಫ್‌ಐ ಮುಖಂಡರಾದ ರಾಜೇಶ್ ಪಡುಕೋಣೆ, ಶಿವರಾಜ್ ನಾಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X