Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ.12ರಷ್ಟು ಭಾರತೀಯರು ಲಸಿಕೆ...

ಶೇ.12ರಷ್ಟು ಭಾರತೀಯರು ಲಸಿಕೆ ಹಾಕಿಸಿಕೊಳ್ಳಲು ನಕಾರ: ಇತರ ಶೇ.12ರಷ್ಟು ಜನರಿಗೆ ಅಡ್ಡಪರಿಣಾಮಗಳ ಭೀತಿ; ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ27 Jun 2021 10:14 PM IST
share
ಶೇ.12ರಷ್ಟು ಭಾರತೀಯರು ಲಸಿಕೆ ಹಾಕಿಸಿಕೊಳ್ಳಲು ನಕಾರ: ಇತರ ಶೇ.12ರಷ್ಟು ಜನರಿಗೆ ಅಡ್ಡಪರಿಣಾಮಗಳ ಭೀತಿ; ಸಮೀಕ್ಷೆ

ಹೊಸದಿಲ್ಲಿ,ಜೂ.27: ದೇಶದಲ್ಲಿ ಕೋವಿಡ್ ಮೂರನೇ ಅಲೆಯು ಅಪ್ಪಳಿಸುವ ಸಾಧ್ಯತೆಯ ನಡುವೆಯೇ ಈವರೆಗೆ ಲಸಿಕೆ ಹಾಕಿಸಿಕೊಂಡಿರದ ಭಾರತೀಯರಲ್ಲಿ ಶೇ.12ರಷ್ಟು ಜನರು ತಮಗೆ ಲಸಿಕೆ ಬೇಡವೇ ಬೇಡ ಎಂದು ಹೇಳಿದ್ದರೆ,ಇನ್ನೊಂದು ಶೇ.12ರಷ್ಟು ಜನರು ಅಡ್ಡಪರಿಣಾಮಗಳ ಭೀತಿಯಿಂದಾಗಿ ಲಸಿಕೆಯನ್ನು ಹಾಕಿಸಿಕೊಳ್ಳಲು ಯೋಜಿಸಿಲ್ಲ ಎಂದು ಜನಾಭಿಪ್ರಾಯ ಸಂಗ್ರಹ ಸಂಸ್ಥೆ ಲೋಕಲ್ಸರ್ಕಲ್ಸ್ ನಡೆಸಿರುವ ಹೊಸ ಸಮೀಕ್ಷೆಯು ತಿಳಿಸಿದೆ.

ಶೇ.29ರಷ್ಟು ಜನರು ಶೀಘ್ರವೇ ಲಸಿಕೆಯ ಮೊದಲ ಡೋಸ್ ಅನ್ನು ಪಡೆದುಕೊಳ್ಳಲು ಉದ್ದೇಶಿಸಿದ್ದರೆ,ಶೇ.24ರಷ್ಟು ಜನರು ಈಗ ಲಭ್ಯವಿರುವ ಲಸಿಕೆಗಳು ಇತ್ತೀಚಿನ ಮತ್ತು ಭವಿಷ್ಯದ ಕೊರೋನವೈರಸ್ ಪ್ರಭೇದಗಳ ವಿರುದ್ಧ ಸಾಕಷ್ಟು ರಕ್ಷಣೆಯನ್ನು ಒದಗಿಸುತ್ತವೆಯೇ ಎನ್ನುವ ಬಗ್ಗೆ ಇನ್ನೂ ಮನದಟ್ಟಾಗದಿರುವುದರಿಂದ ಈಗಲೇ ಲಸಿಕೆಯನ್ನು ಪಡೆಯುವ ಬಗ್ಗೆ ಆಲೋಚಿಸಿಲ್ಲ. ಹೆಚ್ಚಿನ ಮಾಹಿತಿಗಳು ಅಥವಾ ಬೇರೆ ಲಸಿಕೆಗಳು ಲಭ್ಯವಾದರೆ ಅವರು ಲಸಿಕೆ ಹಾಕಿಸಿಕೊಳ್ಳಲು ಮನಸ್ಸು ಮಾಡಬಹುದು ಎಂದು ಸಮೀಕ್ಷಾ ವರದಿಯು ತಿಳಿಸಿದೆ.

 ತಮಗಿರುವ ರೋಗಗಳು ತಾವು ಲಸಿಕೆ ಪಡೆಯುವುದಕ್ಕೆ ಅಡ್ಡಿಯಾಗಿವೆ ಎಂದು ಸಮೀಕ್ಷೆಗೊಳಗಾದವರ ಪೈಕಿ ಶೆ.23ರಷ್ಟು ಜನರು ಹೇಳಿದ್ದಾರೆ. ದೇಶದ 279 ಜಿಲ್ಲೆಗಳ 8,949 ಜನರನ್ನು ಸಮೀಕ್ಷೆಗೊಳಪಡಿಸಲಾಗಿದ್ದು,ಈ ಪೈಕಿ ಶೇ.65ರಷ್ಟು ಪುರುಷರಿದ್ದರೆ ಶೇ.35ರಷ್ಟು ಮಹಿಳೆಯರಾಗಿದ್ದರು. ಶೇ.48ರಷ್ಟು ಜನರು ಮೊದಲ,ಶೇ.24ರಷ್ಟು ಜನರು ಎರಡನೇ ದರ್ಜೆಯ ನಗರಗಳಿಗೆ ಸೇರಿದ್ದರೆ ಶೇ.28ರಷ್ಟು ಜನರು 3 ಮತ್ತು 4ನೇ ದರ್ಜೆಯ ನಗರಗಳು ಮತ್ತು ಗ್ರಾಮೀಣ ಜಿಲ್ಲೆಗಳಿಗೆ ಸೇರಿದವರಾಗಿದ್ದರು.

33 ಕೋಟಿ ಜನರು ಲಸಿಕೆಯನ್ನು ಪಡೆಯದಿರಬಹುದು ಎಂದು ತಿಳಿಸಿರುವ ವರದಿಯು,ಭಾರತದಲ್ಲಿ 94 ಕೋಟಿ ವಯಸ್ಕ ಜನಸಂಖ್ಯೆಯಿದೆ ಮತ್ತು 24 ಕೋಟಿ ಜನರು ತಮ್ಮ ಮೊದಲ ಡೋಸ್ ಪಡೆದಿದ್ದಾರೆ ಎಂದು ಪರಿಗಣಿಸಿದರೆ,70 ಕೋಟಿ ವಯಸ್ಕರು ಇನ್ನೂ ಲಸಿಕೆಯನ್ನು ಹಾಕಿಸಿಕೊಂಡಿಲ್ಲ ಎಂದು ಬೆಟ್ಟುಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X