Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫೆಲೆಸ್ತೀನ್ ಪ್ರಧಾನಿ ಟೀಕಾಕಾರನ ಸಾವನ್ನು...

ಫೆಲೆಸ್ತೀನ್ ಪ್ರಧಾನಿ ಟೀಕಾಕಾರನ ಸಾವನ್ನು ಖಂಡಿಸಿ ರಮಲ್ಲಾದಲ್ಲಿ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Jun 2021 11:23 PM IST
share

ರಮಲ್ಲಾ,ಜೂ.27: ಫೆಲೆಸ್ತೀನ್ ಅಧ್ಯಕ್ಷ ಮುಹಮ್ಮದ್ ಅಬ್ಬಾಸ್ ಅವರ ಕಟ್ಟಾ ಟೀಕಾಕಾರರಲ್ಲಿ ಒಬ್ಬರಾದ ನಿಝಾರ್ ಬನಾಟಂ ಅವರು ಭದ್ರತಾಪಡೆಗಳ ಕಸ್ಟಡಿಯಲ್ಲಿ ಸಾವನ್ನಪ್ಪಿದ ಘಟನೆಯನ್ನು ವಿರೋಧಿಸಿ ಬೀದಿಗಿಳಿದು ಪ್ರದರ್ಶನ ನಡೆಸಿದ ಪ್ರತಿಭಟನಕಾರರನ್ನು ಚದುರಿಸಲು ಫೆಲೆಸ್ತೀನ್ ಆಡಳಿತವು ಶನಿವಾರ ಪಶ್ಚಿಮ ದಂಡೆಯ ರಮಲ್ಲಾದಲ್ಲಿ ಭಾರೀ ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಿತ್ತು.

ನಿಝಾರ್ ಬನಾಟ್ ಉಳಿದುಕೊಂಡಿದ್ದ ಅವರ ಸಂಬಂಧಿಯೊಬ್ಬರ ಮನೆಗೆ ಗುರುವಾರ ನಸುಕಿನಲ್ಲಿ ದಳಿ ನಡೆಸಿದ್ದ ಫೆಲೆಸ್ತೀನ್ ಭದ್ರತಾಪಡೆಗಳು ಬನಾಟ್ ಅವರನ್ನು ಬಂಧಿಸಿದ್ದವು. ಬನಾಟ್ ಅವರನ್ನು ಬಂಧಿಸುವ ಮುನ್ನ ಭದ್ರತಾ ಸಿಬ್ಬಂದಿ ಅವರ ತಲೆಯ ಮೇಲೆ ಲೋಹದ ರಾಡ್‌ ನಿಂದ ಹಲವು ಬಾರಿ ಹೊಡೆದಿವೆ ಎಂದು ಕುಟುಂಬಿಕರು ಆರೋಪಿಸಿದ್ದಾರೆ.
 
ಬನಾಟ್ ಅವರ ನಿಧನವು ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಪ್ರತಿಭಟನೆಯ ಕಿಡಿಯನ್ನು ಎಬ್ಬಿಸಿತ್ತು ಹಾಗೂ ಘಟನೆಯ ಘಟನೆಯ ಬಗ್ಗೆ ತನಿಖೆಯಾಗಬೇಕೆಂದು ಅಂತಾರಾಷ್ಟ್ರೀಯ ಸಮುದಾಯದಿಂದಲೂ ಬಲವಾದ ಒತ್ತಾಯ ಕೇಳಿಬಂದಿದೆ.
 
ಬನಾಟ್ ಸಾವನ್ನು ಖಂಡಿಸಿ, ಇಂದು ಬೀದಿಗಿಳಿದ ಪ್ರತಿಭಟನಕಾರರನ್ನು ಚದುರಿಸಲು ಭದ್ರತಾ ಸಿಬ್ಬಂದಿ ಅಶ್ರುವಾಯು ಸಿಡಿಸಿದರು ಹಾಗೂ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡವರಲ್ಲಿ ಬಂಧಿತರಾದವರ ಸಂಖ್ಯೆ ಹಾಗೂ ಗಾಯಾಳುಗಳ ಸಂಖ್ಯೆಯ ಬಗ್ಗೆ ಫೆಲೆಸ್ತೀನ್ ಆಡಳಿತವು ಈವರೆಗೆ ಯಾವುದೇ ಅಧಿಕೃತ ದಾಖಲೆಗಳನ್ನು ಬಿಡುಗಡೆಗೊಳಿಸಿಲ್ಲ.
  
43 ವರ್ಷ ವಯಸ್ಸಿನ ಬನಾಟ್ ಸಾಮಾಜಿಕ ಹೋರಾಟಗಾರಾಗಿದ್ದರು. ಕಡಿಮೆ ಬಾಳಿಕೆ ಅವಧಿಯ ಕೋವಿಡ್-19 ಲಸಿಕೆಯನ್ನು ಈ ತಿಂಗಳು ಇಸ್ರೇಲ್ನಿಂದ ಖರೀದಿ ಸಿರುವುದು ಸೇರಿದಂTE ಫೆಲೆಸ್ತೀನ್ ಅಧ್ಯಕ್ಷ ಮೊಹಮ್ಮದ್ ಅಬ್ಬಾಸ್ ಅವರು ಭ್ರಷ್ಟಾಚಾರಗಳನ್ನು ಎಸಗಿದ್ದಾರೆ ಎಂದು ಬನಾಟ್ ಆಪಾದಿಸಿದ್ದರು. ಮೇನಲ್ಲಿ ನಡೆಯಬೇಕಿದ್ದ ಚುನಾವಣೆಯನ್ನು ಅಬ್ಬಾಸ್ ಮುಂದೂಡಿರುವುದನ್ನು ಕೂಡಾ ಬನಾಟ್ ಟೀಕಿಸಿದ್ದರು‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X