Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ನಿರ್ಬಂಧದ ಹಿನ್ನೆಲೆ ಖಾಸಗಿ ಬಸ್...

ಕೊರೋನ ನಿರ್ಬಂಧದ ಹಿನ್ನೆಲೆ ಖಾಸಗಿ ಬಸ್ ದರ ಹೆಚ್ಚಳ: ಡಿವೈಎಫ್‌ಐ ವಿರೋಧ

ವಾರ್ತಾಭಾರತಿವಾರ್ತಾಭಾರತಿ28 Jun 2021 7:33 PM IST
share

ಮಂಗಳೂರು, ಜೂ.28: ಲಾಕ್‌ಡೌನ್ ನಿಯಮಗಳು ಸಡಿಲಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಆರಂಭಿಸಲಿರುವ ಅವಿಭಜಿತ ದ.ಕ. ಜಿಲ್ಲೆಯ ಖಾಸಗಿ ಬಸ್‌ಗಳ ಮಾಲಕರ ಒಕ್ಕೂಟಗಳು ಕೊರೋನ ನಿರ್ಬಂಧಗಳ ಪಾಲನೆಯ ನೆಪದಲ್ಲಿ ಸೆಸ್ ಹಾಕಲು ತಮಗೆ ಸರಕಾರ ಅವಕಾಶ ನೀಡಿದೆ ಎಂದು ಶೇ.25ರಷ್ಟು ಪ್ರಯಾಣ ದರ ಏಕಪಕ್ಷೀಯವಾಗಿ ಏರಿಸಲು ತೀರ್ಮಾನಿಸಿದ್ದಾರೆಂದು ಡಿವೈಎಫ್‌ಐ ಜಿಲ್ಲಾ ಸಮಿತಿ ಆರೋಪಿಸಿದೆ.

ಲಾಕ್‌ಡೌನ್ ನಿರ್ಬಂಧಗಳನ್ನು ವಿಧಿಸಿರುವ ಸರಕಾರದೊಂದಿಗೆ ತೆರಿಗೆ ವಿನಾಯಿತಿ ಸಹಿತ ವಿವಿಧ ರಿಯಾಯಿತಿಗಳಿಗಾಗಿ ಒತ್ತಡ ಹಾಕುವ ಬದಲಿಗೆ ಈಗಾಗಲೇ ದುಡಿಮೆಯಿಲ್ಲದೆ ಬಳಲಿರುವ ಪ್ರಯಾಣಿಕರ ಮೇಲೆ ಹೊರೆ ಹಾಕುವ ಪ್ರಯತ್ನ ಸಲ್ಲದು. ಇದಕ್ಕೆ ಅವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅವಕಾಶ ನೀಡಬಾರದು ಎಂದು ಡಿವೈಎಫ್‌ಐ ಆಗ್ರಹಿಸಿದೆ.

ಕೊರೋನ ನಿರ್ಬಂಧ, ಸತತ ಲಾಕ್‌ಡೌನ್‌ಗಳಿಂದ ಖಾಸಗಿ ಬಸ್ ಮಾಲಕರು ಮಾತ್ರವಲ್ಲದೆ ಜನಸಾಮಾನ್ಯರೂ ತೀವ್ರ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದ್ದಾರೆ. ಅದರಲ್ಲೂ ಖಾಸಗಿ ಬಸ್‌ಗಳನ್ನು ಪ್ರಯಾಣಕ್ಕಾಗಿ ಬಳಸುವವರು ಬಹುತೇಕರು ಬಡ ವಿಭಾಗಕ್ಕೆ ಸೇರಿದ ಕೂಲಿಕಾರರು, ಸಣ್ಣ ಪುಟ್ಟ ವರ್ಕ್ ಶಾಪ್, ಅಂಗಡಿ, ಕಚೇರಿಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುವಂತವರು. ಅಲ್ಪ ಸ್ವಲ್ಪ ಆದಾಯ ಇರುವವರೂ ಸ್ವಂತ ವಾಹನ ಹೊಂದುವ ಈ ಕಾಲಘಟ್ಟದಲ್ಲಿ ಬಸ್ ಪ್ರಯಾಣ ದರ ತೀರಾ ಕಡಿಮೆ ಸಂಬಳ ಪಡೆಯುವ ಬಡವರ್ಗಕ್ಕೆ ದೊಡ್ಡ ಪೆಟ್ಟು ನೀಡುತ್ತದೆ. ಒಂದೊಂದು ಪೈಸೆಗೂ ಲೆಕ್ಕ ಇಟ್ಟು ಬದುಕು ನಡೆಸಬೇಕಾದ ಈ ಧ್ವನಿರಹಿತ ವಿಭಾಗವನ್ನು ಶೇ.25ರಷ್ಟು ಬಸ್ ಪ್ರಯಾಣ ದರ ಏರಿಕೆ ದೊಡ್ಡದಾಗಿ ಭಾದಿಸಲಿದೆ ಎಂದರು.

ಲಾಕ್‌ಡೌನ್ ನಿರ್ಬಂಧಗಳಿಂದಾಗಿ ಶೇ.50 ಪ್ರಯಾಣಿಕರಿಗೆ ಮಾತ್ರ ಅವಕಾಶ, ದಿನದ ಅರ್ಧ ಅವಧಿಗಷ್ಟೇ ಬಸ್ ಓಡಾಟಕ್ಕೆ ನೀಡಿರುವ ಅವಕಾಶ ಕೂಡ ಸರಕಾರವೇ ವಿಧಿಸಿರುವ ನಿಯಮವಾಗಿದೆ. ಬಸ್ ಮಾಲಕರು ಸರಕಾರದಿಂದಲೇ ಇದಕ್ಕೆ ಪರಿಹಾರ ಪಡೆಯಬೇಕು. ಕೇರಳ ಸರಕಾರ ಲಾಕ್‌ಡೌನ್ ಅವಧಿಯಲ್ಲಿ ರಸ್ತೆ ತೆರಿಗೆ ವಿನಾಯಿತಿ ನೀಡಿರುವುದನ್ನು ಬಸ್ ಮಾಲಕರ ಒಕ್ಕೂಟಗಳು ಗಮನಿಸಬೇಕು ಎಂದು ಡಿವೈಎಫ್‌ಐ ಸಲಹೆ ನೀಡಿದೆ.

ಡೀಸೆಲ್ ದರ ಏರಿಕೆ ಮುಂದಿಟ್ಟು ಅಥವಾ ಇನ್ನಿತರ ಯಾವುದೆ ಕಾರಣಗಳಿಗೂ ಜಿಲ್ಲಾ ಸಾರಿಗೆ ಪ್ರಾಧಿಕಾರದ ಸಭೆಯ ಅನುಮತಿ ಇಲ್ಲದೆ ಪ್ರಯಾಣ ದರ ಏರಿಕೆಗೆ ನಿಯಮಗಳು ಅನುಮತಿ ನೀಡುವುದಿಲ್ಲ. ಕೊರೋನ ಪ್ರಥಮ ಅಲೆಯ ಸಂದರ್ಭದಲ್ಲೂ ತಾತ್ಕಾಲಿಕ ನೆಲೆಯಲ್ಲಿ ಏರಿಸಿದ್ದ ಪ್ರಯಾಣ ದರವನ್ನು ಬಸ್ ಮಾಲಕರು ನಂತರ ಇಳಿಸಿರಲಿಲ್ಲ. ಈಗ ಮತ್ತೆ ಏಕಪಕ್ಷೀಯ ದರ ಏರಿಕೆಗೆ ಡಿವೈಎಫ್‌ಐ ಪ್ರಬಲ ಆಕ್ಷೇಪ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದೆ.

ಯಾವುದೇ ಕಾರಣಕ್ಕೆ ದರ ಏರಿಕೆಗೆ ಬಸ್ ಮಾಲಕರು ಮನವಿ ಸಲ್ಲಿಸಿದರೆ ಸಾರಿಗೆ ಪ್ರಾಧಿಕಾರದ ಸಭೆ ಕರೆದು, ಅಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಬೇಕು. ಅದರ ಆಧಾರದಲ್ಲೇ ನಿರ್ಧಾರವನ್ನು ಕೈಗೊಳ್ಳಬೇಕು. ಅದರ ಹೊರತು ಜಿಲ್ಲಾಡಳಿತ ಏಕಪಕ್ಷೀಯ ಏರಿಕೆಗೆ ಬಸ್ ಮಾಲಕರ ಒಕ್ಕೂಟಗಳಿಗೆ ಅವಕಾಶ ನೀಡಬಾರದು ಎಂದು ಡಿವೈಎಫ್‌ಐ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳನ್ನು ಆಗ್ರಹಿಸುತ್ತದೆ ಎಂದು ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X