Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎರಡು ದಿನಗಳ ಇಂಡಿಯನ್ ಮುಸ್ಲಿಮ್...

ಎರಡು ದಿನಗಳ ಇಂಡಿಯನ್ ಮುಸ್ಲಿಮ್ ಲೀಡರ್‍ಶಿಪ್ ಕಾನ್ಫರೆನ್ಸ್ ಯಶಸ್ವಿ: ಅಬ್ದುಲ್ ಸುಭಾನ್

ವಾರ್ತಾಭಾರತಿವಾರ್ತಾಭಾರತಿ28 Jun 2021 11:05 PM IST
share

ಬೆಂಗಳೂರು, ಜೂ.28: ಹೊಸದಿಲ್ಲಿಯ ಇನ್ಸ್‍ಟಿಟ್ಯೂಟ್ ಆಫ್ ಆಬ್ಜೆಕ್ಟೀವ್ ಸ್ಟಡೀಸ್ ಹಾಗೂ ಫಾಲ್ಕನ್ ಗ್ರೂಪ್ ಆಫ್ ಇನ್ಸ್‍ಟಿಟ್ಯೂಷನ್ಸ್ ಸಹಯೋಗದೊಂದಿಗೆ ಆನ್‍ಲೈನ್ ಮೂಲಕ ಜೂ.26 ಹಾಗೂ 27ರಂದು ಆಯೋಜಿಸಲಾಗಿದ್ದ ಎರಡು ದಿನಗಳ ‘ಇಂಡಿಯನ್ ಮುಸ್ಲಿಮ್ ಲೀಡರ್‍ಶಿಪ್ ಕಾನ್ಫರೆನ್ಸ್’ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದು ಫಾಲ್ಕನ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ ನ ವ್ಯವಸ್ಥಾಪಕ ನಿರ್ದೇಶಕ ಅಬ್ದುಲ್ ಸುಭಾನ್ ತಿಳಿಸಿದರು.

ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ದಾರುಸ್ಸಲಾಮ್ ಕಟ್ಟಡದಲ್ಲಿರುವ ಫಾಲ್ಕನ್ ಪಿಯು ಕಾಲೇಜಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತೀಯ ರಾಜಕೀಯ, ಶಿಕ್ಷಣ, ಯುವ ಸಬಲೀಕರಣ, ಪತ್ರಿಕೋದ್ಯಮ, ಕಾನೂನು, ನ್ಯಾಯಾಂಗ ವ್ಯವಸ್ಥೆ, ಅಧಿಕಾರಶಾಹಿ, ಸಾಮಾಜಿಕ ಹೋರಾಟಗಳು, ಮಹಿಳಾ ನಾಯಕತ್ವ, ಪ್ರಾದೇಶಿಕ ನಾಯಕತ್ವದ ವಿಚಾರಗಳ ಬಗ್ಗೆ ದೇಶದ ವಿವಿಧ ಕ್ಷೇತ್ರಗಳ ಗಣ್ಯರು ಚರ್ಚೆ ನಡೆಸಿದರು ಎಂದರು.

ನಾಯಕತ್ವ ಎಂದರೆ ಇವತ್ತು ಕೇವಲ ರಾಜಕೀಯ ನಾಯಕತ್ವಕ್ಕೆ ಅಷ್ಟೇ ನಾವು ಸೀಮಿತವಾಗಿದ್ದೇವೆ. ರಾಜಕೀಯ ಹೊರತಾದ ಕ್ಷೇತ್ರಗಳಲ್ಲಿಯೂ ಸಮುದಾಯದ ನಾಯಕತ್ವ ಬೆಳವಣಿಗೆಯಾಗಬೇಕಿದೆ. ಆದುದರಿಂದ, ಪ್ರಮುಖವಾಗಿ ಶಿಕ್ಷಣ, ಯುವ ಸಬಲೀಕರಣ, ಮಹಿಳಾ ಸಬಲೀಕರಣ, ಸಾಮಾಜಿಕ ಸುಧಾರಣೆಗಳ ಅಗತ್ಯವಿದೆ ಎಂಬುದನ್ನು ಗಣ್ಯರು ಪ್ರತಿಪಾದಿಸಿದ್ದಾರೆ ಎಂದು ಅವರು ಹೇಳಿದರು.

ಡಾ.ಝೆಡ್.ಎಂ.ಖಾನ್, ಶೇಕ್ ಝಾಕಿರ್ ಹುಸೇನ್, ಮಾಜಿ ಕೇಂದ್ರ ಸಚಿವ ಡಾ.ಕೆ.ರಹ್ಮಾನ್ ಖಾನ್, ಪಶ್ಚಿಮ ಬಂಗಾಳದ ಮಾಜಿ ಸಂಸದ ಅಹ್ಮದ್ ಹಸನ್ ಇಮ್ರಾನ್, ಅಸ್ಸಾಂನ ಸಂಸದ ಬದ್ರುದ್ದೀನ್ ಅಜ್ಮಲ್, ಯು.ಟಿ.ಖಾದರ್, ಮುನವ್ವರ್ ಅಲಿ ಶಿಹಾಬ್ ತಂಙಳ್ ಸೇರಿದಂತೆ ಇನ್ನಿತರರು ಭಾರತೀಯ ರಾಜಕೀಯ ವಿಷಯದ ಕುರಿತು ವಿಷಯ ಮಂಡಿಸಿದರು ಎಂದು ಅಬ್ದುಲ್ ಸುಭಾನ್ ತಿಳಿಸಿದರು.

ಶಿಕ್ಷಣದ ವಿಷಯದ ಕುರಿತು ಭಾರತೀಯ ಚುನಾವಣಾ ಆಯೋಗದ ನಿವೃತ್ತ ಮುಖ್ಯ ಆಯುಕ್ತ ಎಸ್.ವೈ.ಖುರೇಶಿ, ಪುಣೆಯ ಆಝಮ್ ಕ್ಯಾಂಪಸ್‍ನ ಪಿ.ಎ.ಇನಾಮ್‍ದಾರ್, ಶಾಹೀನ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಅಬ್ದುಲ್ ಖದೀರ್, ರಾಜಸ್ಥಾನ್ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೊ.ಫುರ್ಖಾನ್ ಖಮರ್, ಗ್ಲೋಕಲ್ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಡಾ.ಅಮೀರುಲ್ಲಾ ಖಾನ್ ವಿಷಯ ಮಂಡನೆ ಮಾಡಿದರು ಎಂದು ಅವರು ಹೇಳಿದರು.

ಅಧಿಕಾರಶಾಹಿ ವಿಷಯದ ಕುರಿತು ಐಎಎಸ್ ಅಧಿಕಾರಿ ಪಿ.ಸಿ.ಜಾಫರ್, ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್, ಆರ್‍ಬಿಐನ ಡಾ.ಜೆ.ಸದಾಖತ್ತುಲ್ಲಾ ಸೇರಿದಂತೆ ಇನ್ನಿತರರು ಬೆಳಕು ಚೆಲ್ಲಿಸಿದರು. ಈ ಎರಡು ದಿನಗಳ ಕಾಲ ನಡೆದಿರುವ ಕಾನ್ಫರೆನ್ಸ್ ನಲ್ಲಿ ವ್ಯಕ್ತವಾಗಿರುವ ಎಲ್ಲ ಅಭಿಪ್ರಾಯಗಳನ್ನು ಕ್ರೋಢಿಕರಿಸಿ, ಯಾವ ಯಾವ ವಿಷಯಗಳ ಮೇಲೆ ಕೆಲಸ ಮಾಡಬೇಕು ಎಂಬುದರ ಬಗ್ಗೆ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು ಎಂದು ಅಬ್ದುಲ್ ಸುಭಾನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X