Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಿಶೀಲನೆಗೆ ಬಂದ ಸಚಿವ ಅಂಗಾರ, ಶಾಸಕ...

ಪರಿಶೀಲನೆಗೆ ಬಂದ ಸಚಿವ ಅಂಗಾರ, ಶಾಸಕ ಉಮಾನಾಥ ಕೋಟ್ಯಾನ್‌ಗೆ ಗ್ರಾಮಸ್ಥರಿಂದ ಘೇರಾವ್

ನಿಡ್ಡೋಡಿಯಲ್ಲಿ ಸೀಫುಡ್ ಕಾರ್ಖಾನೆ ಸ್ಥಾಪನೆ?

ವಾರ್ತಾಭಾರತಿವಾರ್ತಾಭಾರತಿ28 Jun 2021 11:19 PM IST
share
ಪರಿಶೀಲನೆಗೆ ಬಂದ ಸಚಿವ ಅಂಗಾರ, ಶಾಸಕ ಉಮಾನಾಥ ಕೋಟ್ಯಾನ್‌ಗೆ ಗ್ರಾಮಸ್ಥರಿಂದ ಘೇರಾವ್

ಮೂಡುಬಿದಿರೆ, ಜೂ.28: ಕಲ್ಲಮುಂಡ್ಕೂರು ಗ್ರಾಪಂ ವ್ಯಾಪ್ತಿಯ ನಿಡ್ಡೋಡಿ ಗ್ರಾಮದ ಕೊಳತ್ತಾರು ಪದವು ಸರಕಾರಿ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸರಕಾರದ ಬೃಹತ್ ಸೀಫುಡ್ ಕಾರ್ಖಾನೆಯ ಸ್ಥಳ ಪರಿಶೀಲನೆಗೆ ಆಗಮಿಸಿದ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್.ಅಂಗಾರ ಹಾಗೂ ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ವಿರುದ್ಧ ಸ್ಥಳೀಯರು ಘೇರಾವ್ ಹಾಕಿ ಪ್ರತಿಭಟಿಸಿದ ಘಟನೆ ಸೋಮವಾರ ನಡೆದಿದೆ.

ಈ ಕೈಗಾರಿಕೆ ಸ್ಥಾಪನೆಯ ಸಾಧಕ ಬಾಧಕಗಳ ಕುರಿತು ನಮಗೆ ಸ್ಪಷ್ಟ ಮಾಹಿತಿ ನೀಡದೆ, ನಮ್ಮ ಅಭಿಪ್ರಾಯವನ್ನು ಪಡೆಯದೆ, ಸ್ಥಳ ಪರಿಶಿಲನೆಗೆ ಹೇಗೆ ಬಂದಿದ್ದೀರಿ ಎಂದು ಸ್ಥಳೀಯರು ಸಚಿವ ಮತ್ತು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಉಮಾನಾಥ ಕೋಟ್ಯಾನ್, ಇದು ರಾಜ್ಯ ಸರಕಾರದ ಬೃಹತ್ ಕೈಗಾರಿಕೆಯಾಗಿದ್ದು, ಇದನ್ನು ತನ್ನ ಕ್ಷೇತ್ರದಲ್ಲಿ ಸ್ಥಾಪಿಸಲು ಸರಕಾರ ಅನುಮತಿ ನೀಡಿದೆ. ಇದು ಸುಮಾರು 50 ಎಕರೆ ಸರಕಾರಿ ಜಾಗದಲ್ಲಿ ನಿರ್ಮಾಣವಾಗಲಿದೆ. ಇದಕ್ಕೆ ಖಾಸಗಿ ಜಾಗ ಅತಿಕ್ರಮಣವಾಗುವುದಿಲ್ಲ ಹಾಗೂ ಸ್ಥಳೀಯರಿಗೆ ತೊಂದರೆ ಆಗುವುದಿಲ್ಲ. ಯೋಜನೆಯಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ಕೂಡ ಲಭಿಸಲಿದೆ ಎಂದು ಸಮಜಾಯಿಷಿ ನೀಡಿದರು.

ಇದರಿಂದ ಸಮಾಧಾನಗೊಳ್ಳದ ಗ್ರಾಮಸ್ಥರು, ಲಿಖಿತ ಭರವಸೆ ನೀಡಬೇಕೆಂದು ಪಟ್ಟು ಹಿಡಿದಾಗ ಶಾಸಕರು ನಿರಾಕರಿಸಿದರು. ಯೋಜನೆಯ ಬಗ್ಗೆ ತಮಗೆ ಲಿಖಿತ ಮಾಹಿತಿ ನೀಡುವಂತೆ ಗ್ರಾಮಸ್ಥರು ನೀಡಿದ ಮನವಿಯನ್ನು ಸ್ವೀಕರಿಸಿ ಬಳಿಕ ಶಾಸಕರು ಮತ್ತು ಸಚಿವರು ಅಲ್ಲಿಂದ ತೆರಳಿದರು.

ಕೊಳತ್ತಾರು ಪದವು ಪರಿಸರದ ಸುಮಾರು 250ಕ್ಕೂ ಮಿಕ್ಕಿ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ಹಿಂದೆ ಇದೇ ಪ್ರದೇಶದಲ್ಲಿ ಬೃಹತ್ ಉಷ್ಣ ವಿದ್ಯುತ್ ಸ್ಥಾವರ ಮತ್ತು ಬಾಕ್ಸೈಟ್ ಗಣಿಗಾರಿಕೆಯನ್ನು ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ ಸ್ಥಳೀಯರು ಈ ಸಂದರ್ಭದಲ್ಲೂ ವಿರೋಧ ವ್ಯಕ್ತಪಡಿಸಿದ್ದರಿಂದ ಈ ಎರಡೂ ಯೋಜನೆಗಳು ಸ್ಥಗಿತಗೊಂಡಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X