Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮದ್ರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ...

ಮದ್ರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ನೆರವು: ಟಿ.ಎಸ್.ನಾಗಾಭರಣ

ವಾರ್ತಾಭಾರತಿವಾರ್ತಾಭಾರತಿ29 Jun 2021 8:48 PM IST
share
ಮದ್ರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ನೆರವು: ಟಿ.ಎಸ್.ನಾಗಾಭರಣ

ಬೆಂಗಳೂರು, ಜೂ.28: ಮದ್ರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸುವ ಸದುದ್ದೇಶ ಹೊಂದಿರುವ ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆಯ ಪ್ರಯತ್ನಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಕಲ ನೆರವನ್ನು ನೀಡಲು ಸಿದ್ಧವಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ತಿಳಿಸಿದರು.

ಮಸೀದಿ, ಮದ್ರಸಾಗಳಲ್ಲಿ ಕನ್ನಡ ಕಲಿಕಾ ಕೇಂದ್ರ ಮತ್ತು ಕನ್ನಡ ಸಂಸ್ಕೃತಿ ಶಿಬಿರ ನಡೆಸುವ ಸಂಬಂಧ ವಿಧಾನಸೌಧದಲ್ಲಿ ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆ, ಅಲ್‍ಫೈಝ್ ಟ್ರಸ್ಟ್, ಮತ್ತಿಕೆರೆಯ ಮಸ್ಜಿದೆ ತಾಹ, ಫಲಾಹೆ ದಾರೇನ್ ಎಜುಕೇಷನಲ್ ಸೋಶಿಯಲ್ ಚಾರಿಟೇಬಲ್ ಟ್ರಸ್ಟ್ ನ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಇಂದು ಅಖಿಲ ಕರ್ನಾಟಕ ಮಹಮ್ಮದೀಯರ ವೇದಿಕೆ ಮತ್ತು ಅದರ ಸಹೋದರ ಸಂಸ್ಥೆಗಳು ಎಲ್ಲರೂ ಸೇರಿ ನನ್ನ ಜೊತೆ ಮಸೀದಿ, ಮದ್ರಸಾಗಳಲ್ಲಿ ಕನ್ನಡ ಕಲಿಕಾ ಕೇಂದ್ರ ಮತ್ತು ಕನ್ನಡ ಸಂಸ್ಕೃತಿ ಶಿಬಿರಗಳನ್ನು ಪ್ರಾಯೋಜಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ನಮ್ಮಲ್ಲಿ ಭಾಷೆ ಕೇವಲ ವ್ಯವಹಾರಕ್ಕೆ ಸೀಮಿತವಾಗಿದ್ದರೆ ಅದು ಈಗಾಗಲೆ ತನ್ನನ್ನು ತಾನು ಕಳೆದುಕೊಳ್ಳುತ್ತಿತ್ತು. ಆದರೆ, ಅದು ವ್ಯವಹಾರಕ್ಕೆ ಮೀರಿದ ಆತ್ಮೀಯತೆಯನ್ನು, ಸೌಹಾರ್ದತೆಯನ್ನು ಹಾಗೂ ಬದುಕನ್ನು ಕಟ್ಟಿಕೊಡುವಂತದ್ದಾಗಿದೆ ಎಂದು ನಾಗಾಭರಣ ತಿಳಿಸಿದರು.

ಇಂತಹ ಭಾಷೆಯ ಬೆಳವಣಿಗೆಯಲ್ಲಿ ನಮ್ಮನ್ನು ನಾವು ಸಮೀಕರಿಸಿಕೊಳ್ಳುತ್ತಿದ್ದೇವೆ. ಅದರಲ್ಲೂ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಅದನ್ನು ಒಪ್ಪಿಕೊಂಡು ಕನ್ನಡದ ಜೊತೆ ನಾನು ಇದ್ದೇನೆ ಎಂದು ಒಪ್ಪಿಕೊಳ್ಳುವ ಪ್ರತಿಯೊಬ್ಬರಿಗೂ ಕನ್ನಡದ ಕದ ತೆರೆದುಕೊಳ್ಳುತ್ತದೆ. ಮಹಮ್ಮದೀಯರ ಕನ್ನಡ ವೇದಿಕೆ ಹಾಗೂ ಅದರ ಸಹೋದರ ಸಂಸ್ಥೆಗಳು ಕೇವಲ ಕನ್ನಡ ಕಲಿಕಾ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಿಲ್ಲ. ಅದರ ಜೊತೆಗೆ ಕನ್ನಡದ ಬದುಕನ್ನು ನಮಗೆ ಕೊಡಿ, ಎಲ್ಲರೂ ಒಟ್ಟಾಗಿ ಕನ್ನಡ ಕಟ್ಟೋಣ ಎಂಬ ಈ ಧ್ಯೇಯವನ್ನು ಹೊಂದಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆಯ ರಾಜ್ಯಾಧ್ಯಕ್ಷ ಸಮೀಉಲ್ಲಾ ಖಾನ್ ಮಾತನಾಡಿ, ಈ ಹಿಂದೆ ಪ್ರೊ.ಬರಗೂರು ರಾಮಚಂದ್ರಪ್ಪ, ಮುಖ್ಯಮಂತ್ರಿ ಚಂದ್ರು ಅವರು ಅಧ್ಯಕ್ಷರಾಗಿದ್ದ ವೇಳೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರಾಯೋಜಕತ್ವದಲ್ಲಿ ಮದ್ರಸಾ ಮತ್ತು ಮಸೀದಿಗಳಲ್ಲಿ ಕನ್ನಡ ಕಲಿಕಾ ಹಾಗೂ ಕನ್ನಡ ಸಂಸ್ಕೃತಿ ಶಿಬಿರಗಳನ್ನು ಆಯೋಜಿಸಲಾಗುತ್ತಿತ್ತು. ಈ ವಿಚಾರವನ್ನು ಟಿ.ಎಸ್.ನಾಗಾಭರಣ ಅವರ ಗಮನಕ್ಕೆ ತರಲಾಗಿದೆ ಎಂದರು.

ಬೆಂಗಳೂರು ನಗರದ ಮತ್ತಿಕೆರೆಯಲ್ಲಿರುವ ಮಸ್ಜಿದೆ ತಾಹಾ, ಎಚ್.ಬಿ.ಆರ್.ಬಡಾವಣೆಯಲ್ಲಿರುವ ಫಲಾಹೇ ದಾರೇನ್ ಎಜುಕೇಷನಲ್ ಸೋಶಿಯಲ್ ಚಾರಿಟೇಬಲ್ ಟ್ರಸ್ಟ್, ಹೆಗ್ಡೆ ನಗರದ ಅಲ್‍ಫೈಝ್ ಟ್ರಸ್ಟ್ ಗಳಲ್ಲಿ ಕನ್ನಡ ಕಲಿಕಾ ಮತ್ತು ಕನ್ನಡ ಸಂಸ್ಕೃತಿ ಶಿಬಿರಗಳನ್ನು ಆಯೋಜಿಸಲು ಉದ್ದೇಶಿಸಿರುವ ಕುರಿತು ತಿಳಿಸಿದ್ದೇವೆ. ನಮ್ಮ ಮನವಿಗೆ ಅಧ್ಯಕ್ಷರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಜೊತೆಗೆ, ಮತ್ತಿಕೆರೆಯಲ್ಲಿ ಕನ್ನಡ ಕಲಿಕಾ ಕೇಂದ್ರಕ್ಕೆ ಶಾಶ್ವತ ಕಟ್ಟಡ ಸ್ಥಾಪನೆ ಮಾಡಿದ್ದೇವೆ ಎಂದು ಅವರು ಹೇಳಿದರು.

ಕನ್ನಡ ಕಲಿಕೆಯೊಂದಿಗೆ ಸಂಸ್ಕೃತಿ ಶಿಬಿರ ನಡೆಸುವ ಉದ್ದೇಶ, ಸೌಹಾರ್ದಯುತ ನಾಡಿಗೆ ಶಿಶುನಾಳ ಶರೀಫರ ಕೊಡುಗೆ, ಏಕೀಕರಣಕ್ಕೆ ರಂಜಾನ್ ಸಾಬ್ ಅವರ ಕೊಡುಗೆ, ಕನ್ನಡ ನಾಡಿಗಾಗಿ ಹೋರಾಟ ಮಾಡಿರುವವರು ಯಾರು, ಅವರ ಕೊಡುಗೆಗಳು ಏನು ಅನ್ನೋದನ್ನು ನಮ್ಮ ಮಕ್ಕಳಿಗೆ ತಿಳಿಸಬೇಕಿದೆ ಎಂದು ಸಮೀಉಲ್ಲಾ ಖಾನ್ ತಿಳಿಸಿದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆಯ ಕಾರ್ಯದರ್ಶಿ ಸಾಗರ್ ಸಮೀವುಲ್ಲಾ, ಉಪಾಧ್ಯಕ್ಷ ಶಹಜಹಾನ್, ಅಲ್‍ ಫೈಝ್ ಟ್ರಸ್ಟ್ ಅಧ್ಯಕ್ಷ ಸಲಾಹುದ್ದೀನ್ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X