Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್‍ನಲ್ಲಿ ಕೋವಿಡ್ ಲಸಿಕೆ ಅಭಾವ:...

ಗುಜರಾತ್‍ನಲ್ಲಿ ಕೋವಿಡ್ ಲಸಿಕೆ ಅಭಾವ: ಗಂಟೆಗಟ್ಟಲೆ ಸಾಲು ನಿಂತು ವಾಪಸಾಗುತ್ತಿರುವ ಜನರು

ವಾರ್ತಾಭಾರತಿವಾರ್ತಾಭಾರತಿ1 July 2021 5:24 PM IST
share
ಗುಜರಾತ್‍ನಲ್ಲಿ ಕೋವಿಡ್ ಲಸಿಕೆ ಅಭಾವ: ಗಂಟೆಗಟ್ಟಲೆ ಸಾಲು ನಿಂತು ವಾಪಸಾಗುತ್ತಿರುವ ಜನರು

 ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿಯ ತವರು ರಾಜ್ಯ ಗುಜರಾತ್‍ನಲ್ಲಿ ಕೋವಿಡ್ ಲಸಿಕೆಯ ತೀವ್ರ ಕೊರತೆ ಎದುರಾಗಿದೆಯೆನ್ನಲಾಗಿದೆ. ರಾಜ್ಯದ ಎಲ್ಲಾ ಪ್ರಮುಖ ನಗರಗಳಲ್ಲೂ ಲಸಿಕೆ ಕೊರತೆ ಉಂಟಾಗಿದೆ ಹಾಗೂ 18-44 ವಯೋಮಿತಿಯ ಜನರು ತಮ್ಮ ಮೊದಲ ಡೋಸ್ ಪಡೆಯಲು  12 ಗಂಟೆ ಸರತಿ ನಿಂತರೂ ಪ್ರಯೋಜನವಿಲ್ಲದಂತಾಗಿದೆ ಎಂಬ ದೂರುಗಳು ವ್ಯಾಪಕವಾಗಿದ ಕುರಿತು nationalheral ವರದಿ ಮಾಡಿದೆ.

ಲಸಿಕೆಗಳ ಕೊರತೆಯ ಹಿನ್ನೆಲೆಯಲ್ಲಿ ಉದ್ಯಮಿಗಳಿಗೆ ವ್ಯಾಪಾರಿಗಳಿಗೆ ಕಡ್ಡಾಯ ಲಸಿಕೆಗೆ  ಈ ಹಿಂದೆ ವಿಧಿಸಲಾಗಿದ್ದ ಗಡುವನ್ನು ಜುಲೈ 10ರ ತನಕ ವಿಸ್ತರಿಸಲಾಗಿದೆ.

ವಾಣಿಜ್ಯ ಮಳಿಗೆಗಳು, ಸಂಕೀರ್ಣಗಳು, ಜಿಮ್, ಗ್ರಂಥಾಲಯಗಳು, ರೆಸ್ಟಾರೆಂಟ್‍ಗಳು, ಸಾರ್ವಜನಿಕ ಸಾರಿಗೆ ವ್ಯವಸ್ಥೆ, ಸಿನೆಮಾ ಥಿಯೇಟರ್ ಮಾಲ್ ಇವುಗಳ ಮಾಲಕರು ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ಅನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕೆಂದು ಜೂನ್ 24ರಂದು ಸರಕಾರ ಆದೇಶಿಸಿತ್ತಲ್ಲದೆ ದೊಡ್ಡ ನಗರಗಳಲ್ಲಿ ಜೂನ್ 30 ಹಾಗೂ ಇತರೆಡೆಗಳಿಗೆ ಜುಲೈ 10ರ ಗಡುವು ವಿಧಿಸಿತ್ತು.

ಆದರೆ ಗಡುವು ವಿಸ್ತರಿಸಿದರೂ  ಪ್ರಯೋಜನವಾಗದು, ಈಗ ಅಹ್ಮದಾಬಾದ್‍ನಂತಹ ಪ್ರಮುಖ ನಗರಗಳಲ್ಲಿ ಲಸಿಕೆಗಳು ಲಭ್ಯವಾಗುತ್ತಿಲ್ಲ ಎಂದು ಗುಜರಾತ್ ವರ್ತಕರ ಫೆಡರೇಶನ್ ಅಧ್ಯಕ್ಷ ಜಯೇಂದ್ರ ತನ್ನಾ ಹೇಳುತ್ತಾರೆ.

ಅಹ್ಮದಾಬಾದ್ ಹೊರತಾಗಿ ರಾಜಕೋಟ್, ಸೂರತ್, ವಡೋದರಾ, ಭಾವ್ನಗರ್, ಜುನಾಗಢ್, ವಲ್ಸದ್, ಆನಂದ್ ಮುಂತಾದೆಡೆ ಕೂಡ ನೂರಾರು ಯುವಜನತೆ ಲಸಿಕೆಗಾಗಿ 12 ಗಂಟೆಗಳಿಗೂ ಹೆಚ್ಚು ಸಮಯ ಕಾದು ವಾಪಸಾಗುತ್ತಿದ್ದಾರೆ.

ಕಳೆದ ವಾರ ರಾಜ್ಯಕ್ಕೆ 28 ಲಕ್ಷ ಡೋಸ್ ಲಸಿಕೆಗಳು ಲಭ್ಯವಾಗಿದ್ದರೆ ಈ ವಾರ ಕೇವಲ 18 ಲಕ್ಷ ಡೋಸ್ ಲಸಿಕೆಗಳು ಬಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X