ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಲಹೆ

ಬೆಂಗಳೂರು, ಜು. 1: `ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದೆಂಬ ಎಚ್ಚರವೂ ಇಂದು ಅಗತ್ಯ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಗುರುವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ಸುಮಾರು ಎರಡು ಶತಮಾನಗಳ ಹಿಂದೆ ಹರ್ಮನ್ ಮೊಗ್ಲಿಂಗ್ ಪ್ರಾರಂಭ ಮಾಡಿದ `ಮಂಗಳೂರು ಸಮಾಚಾರ' ಕನ್ನಡದ ಮೊತ್ತ ಮೊದಲ ಪತ್ರಿಕೆ. ಹೀಗೆ ಕರ್ನಾಟಕದಲ್ಲಿ ಆರಂಭಗೊಂಡ ಪತ್ರಿಕೋದ್ಯಮ ಇಂದು ಹಲವು ಸ್ಥಿತ್ಯಂತರಗಳನ್ನು ಕಂಡಿದೆ. ಅಂತರ್ಜಾಲ ಹಾಗೂ ತಂತ್ರಜ್ಞಾನದಿಂದಾಗಿ ಪತ್ರಿಕೋದ್ಯಮದ ಸ್ವರೂಪವೆ ಇಂದು ಬದಲಾಗಿದೆ. ಅದಾಗ್ಯೂ ಸತ್ಯ, ಪ್ರಾಮಾಣಿಕತೆ, ವಸ್ತುನಿಷ್ಠತೆಯ ನೆಲೆಗಟ್ಟಿನಲ್ಲಿ ವರದಿಗಳು ಮೂಡಿಬಂದಾಗ ಮಾತ್ರ ಮಾಧ್ಯಮದ ನಿಜ ಧ್ಯೇಯವನ್ನು ಸಾಧಿಸಿದಂತಾಗುತ್ತದೆ' ಎಂದು ನುಡಿದರು.
`ಮಾಧ್ಯಮ ಕ್ಷೇತ್ರ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಸರಕಾರ ಬದ್ಧವಾಗಿದೆ. ಕೋವಿಡ್ 2ನೆ ಅಲೆಯ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಕ್ರಿಯಾಶೀಲರಾಗಿ ದುಡಿದಿದ್ದಾರೆ. ಅನೇಕರು ಅಸುನೀಗಿದ್ದಾರೆ. ಕೋವಿಡ್ನಿಂದ ಮೃತಪಟ್ಟ 31 ಪತ್ರಕರ್ತರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5ಲಕ್ಷ ರೂ.ಗಳ ನೆರವು ನೀಡಲಾಗಿದೆ' ಎಂದ ಅವರು, `ರಾಜ್ಯ ಸರಕಾರ ಪತ್ರಕರ್ತರ ಕಾರ್ಯವನ್ನು ಮನಗಂಡು ಕೋವಿಡ್ ವಾರಿಯರ್ಸ್ ಎಂದು ಘೋಷಿಸಿ ಪತ್ರಿಕಾ ವಿತರಕರೂ ಸೇರಿದಂತೆ ಸುಮಾರು 25 ಸಾವಿರಕ್ಕೂ ಹೆಚ್ಚು ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಉಚಿತವಾಗಿ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ಹಾಕಿಸಲಾಗಿದೆ. ಪತ್ರಕರ್ತರ ಕ್ಷೇಮ ನಿಧಿಗೆ 5ಕೋಟಿ ರೂ.ಗಳ ನೆರವನ್ನು ಆಯವ್ಯಯದಲ್ಲಿ ಘೋಷಿಸಲಾಗಿದೆ' ಎಂದು ತಿಳಿಸಿದರು.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಜಿಲ್ಲೆಗಳ ಪತ್ರಕರ್ತರು ಈ ವರ್ಚುವಲ್ ಸಮಾರಂಭದಲ್ಲಿ ಭಾಗವಹಿಸಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸಿಎಂ ಸಲಹೆಗಾರ ಎಂ.ಲಕ್ಷ್ಮೀನಾರಾಯಣ, ಮಾಧ್ಯಮ ಸಲಹೆಗಾರ ಎನ್.ಭೃಂಗೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಲಹೆ
ಬೆಂಗಳೂರು, ಜು. 1: `ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದೆಂಬ ಎಚ್ಚರವೂ ಇಂದು ಅಗತ್ಯ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಗುರುವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ಸುಮಾರು ಎರಡು ಶತಮಾನಗಳ ಹಿಂದೆ ಹರ್ಮನ್ ಮೊಗ್ಲಿಂಗ್ ಪ್ರಾರಂಭ ಮಾಡಿದ `ಮಂಗಳೂರು ಸಮಾಚಾರ' ಕನ್ನಡದ ಮೊತ್ತ ಮೊದಲ ಪತ್ರಿಕೆ. ಹೀಗೆ ಕರ್ನಾಟಕದಲ್ಲಿ ಆರಂಭಗೊಂಡ ಪತ್ರಿಕೋದ್ಯಮ ಇಂದು ಹಲವು ಸ್ಥಿತ್ಯಂತರಗಳನ್ನು ಕಂಡಿದೆ. ಅಂತರ್ಜಾಲ ಹಾಗೂ ತಂತ್ರಜ್ಞಾನದಿಂದಾಗಿ ಪತ್ರಿಕೋದ್ಯಮದ ಸ್ವರೂಪವೆ ಇಂದು ಬದಲಾಗಿದೆ. ಅದಾಗ್ಯೂ ಸತ್ಯ, ಪ್ರಾಮಾಣಿಕತೆ, ವಸ್ತುನಿಷ್ಠತೆಯ ನೆಲೆಗಟ್ಟಿನಲ್ಲಿ ವರದಿಗಳು ಮೂಡಿಬಂದಾಗ ಮಾತ್ರ ಮಾಧ್ಯಮದ ನಿಜ ಧ್ಯೇಯವನ್ನು ಸಾಧಿಸಿದಂತಾಗುತ್ತದೆ' ಎಂದು ನುಡಿದರು.
`ಮಾಧ್ಯಮ ಕ್ಷೇತ್ರ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಸರಕಾರ ಬದ್ಧವಾಗಿದೆ. ಕೋವಿಡ್ 2ನೆ ಅಲೆಯ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಕ್ರಿಯಾಶೀಲರಾಗಿ ದುಡಿದಿದ್ದಾರೆ. ಅನೇಕರು ಅಸುನೀಗಿದ್ದಾರೆ. ಕೋವಿಡ್ನಿಂದ ಮೃತಪಟ್ಟ 31 ಪತ್ರಕರ್ತರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5ಲಕ್ಷ ರೂ.ಗಳ ನೆರವು ನೀಡಲಾಗಿದೆ' ಎಂದ ಅವರು, `ರಾಜ್ಯ ಸರಕಾರ ಪತ್ರಕರ್ತರ ಕಾರ್ಯವನ್ನು ಮನಗಂಡು ಕೋವಿಡ್ ವಾರಿಯರ್ಸ್ ಎಂದು ಘೋಷಿಸಿ ಪತ್ರಿಕಾ ವಿತರಕರೂ ಸೇರಿದಂತೆ ಸುಮಾರು 25 ಸಾವಿರಕ್ಕೂ ಹೆಚ್ಚು ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಉಚಿತವಾಗಿ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ಹಾಕಿಸಲಾಗಿದೆ. ಪತ್ರಕರ್ತರ ಕ್ಷೇಮ ನಿಧಿಗೆ 5ಕೋಟಿ ರೂ.ಗಳ ನೆರವನ್ನು ಆಯವ್ಯಯದಲ್ಲಿ ಘೋಷಿಸಲಾಗಿದೆ' ಎಂದು ತಿಳಿಸಿದರು.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಜಿಲ್ಲೆಗಳ ಪತ್ರಕರ್ತರು ಈ ವರ್ಚುವಲ್ ಸಮಾರಂಭದಲ್ಲಿ ಭಾಗವಹಿಸಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸಿಎಂ ಸಲಹೆಗಾರ ಎಂ.ಲಕ್ಷ್ಮೀನಾರಾಯಣ, ಮಾಧ್ಯಮ ಸಲಹೆಗಾರ ಎನ್.ಭೃಂಗೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.







