Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳಸ: ಹಾಡಹಗಲೇ ರಾಜಾರೋಷವಾಗಿ...

ಕಳಸ: ಹಾಡಹಗಲೇ ರಾಜಾರೋಷವಾಗಿ ತಿರುಗಾಡುತ್ತಿರುವ ಆನೆಗಳ ಹಿಂಡು

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಮುಂದಾಗದ ಅರಣ್ಯ ಇಲಾಖೆ; ಗ್ರಾಮಸ್ಥರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ1 July 2021 11:03 PM IST
share
ಕಳಸ: ಹಾಡಹಗಲೇ ರಾಜಾರೋಷವಾಗಿ ತಿರುಗಾಡುತ್ತಿರುವ ಆನೆಗಳ ಹಿಂಡು

ಕಳಸ, ಜು.1: ತಾಲೂಕು ವ್ಯಾಪ್ತಿಯ ಇಡಕಣಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಗುರುವಾರವೂ ಮುಂದುವರಿದ್ದು, ಗ್ರಾಮದ ಮುಖ್ಯ ರಸ್ತೆಯಲ್ಲೇ ಕಾಡಾನೆಗಳು ರಾಜಾರೋಷವಾಗಿ ತಿರುಗಾಡುವ ಮೂಲಕ ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಮೂಡಿಸಿವೆ.

ಇತ್ತೀಚೆಗೆ ಕಾಡಾನೆಗಳು ಗ್ರಾಮಸ್ಥರ ತೋಟಗಳಿಗೆ ದಾಳಿ ಮಾಡಿ ಬೆಳೆ ಹಾನಿ ಮಾಡಿದ್ದು, ಕೆಲ ದಿನಗಳವರೆಗೆ ನಾಪತ್ತೆಯಾಗಿದ್ದ ಕಾಡಾನೆಗಳು ಕಳೆದ ಮಂಗಳವಾರ ರಾತ್ರಿಯಿಂದ ಗ್ರಾಮದ ತೋಟಗಳಿಗೆ ಮತ್ತೆ ದಾಳಿ ಇಟ್ಟಿದ್ದು, ಕಾಫಿ, ಅಡಿಕೆ ತೋಟಗಳನ್ನು ತುಳಿದು ಹಾಳುಗೆಡವುತ್ತಿವೆ.

ಕಳಸ ತಾಲೂಕು ವ್ಯಾಪ್ತಿಯ ಇಡಕಣಿ ಗ್ರಾಪಂ ವ್ಯಾಪ್ತಿಯಲ್ಲಿರುವ ಮುಂಡಾನೆ, ಹೆಮ್ಮಕ್ಕಿ, ಮಲ್ಲೇಶನಗುಡ್ಡ, ಬಿಳುಗೂರು, ಕಂಕೋಡು ಮತ್ತಿತರ ಗ್ರಾಮಗಳ ವ್ಯಾಪ್ತಿಯಲ್ಲಿನ ಕಾಫಿ, ಅಡಿಕೆ ತೋಟಗಳಲ್ಲಿ ಕೆಲ ದಿನಗಳಿಂದ ಬೀಡು ಬಿಟ್ಟಿರುವ ಕಾಡಾನೆಗಳು ಗ್ರಾಮಸ್ಥರ ನಿದ್ದೆಗೆಡಿಸಿದ್ದವು. ರಾತ್ರಿ ವೇಳೆ ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಗುರುವಾರ ಹಗಲಿನಲ್ಲಿ ಕಂಡು ಬಂದಿದ್ದು, ಗ್ರಾಮಸ್ಥರು ಜೀವಭಯದಲ್ಲಿ ದಿನ ಕಳೆಯುವಂತಾಗಿದೆ.

ಗುರುವಾರ ಬೆಳಗ್ಗೆ ಇಡಕಣಿ ಗ್ರಾಮದ ಅತ್ತಿಕಟ್ಟೆ ಗ್ರಾಮದ ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ತೋಟದಲ್ಲಿದ್ದ ಹಲಸು, ಬಾಳೆ, ಬಿದಿರು, ಬಸರಿಮರ ಸೇರಿದಂತೆ ವಿವಿಧ ಮರಗಳ ಸುಳಿ, ಎಲೆಗಳನ್ನು ತಿನ್ನುತ್ತಾ ಅಲ್ಲೇ ಬೀಡು ಬಿಟ್ಟಿದ್ದು, ಕಾಡಾನೆಗಳು ತೋಟದಿಂದ ಹೋಗದ ಪರಿಣಾಮ ಸ್ಥಳೀಯ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಗುರುವಾರ ಬೆಳಗ್ಗೆ ಹೆಮ್ಮಕ್ಕಿ ಗ್ರಾಮದ ರಸ್ತೆಯಲ್ಲಿ ಕಾಡಾನೆಗಳು ರಾಜಾರೋಷವಾಗಿ ತಿರುಗಾಡಿದ್ದು, ಈ ವೇಳೆ ಸ್ಥಳೀಯರು ನಾಯಿಗಳನ್ನು ಛೂ ಬಿಟ್ಟು ಆನೆಗಳನ್ನು ಕಾಡಿಗೆ ಓಡಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾಡಿನತ್ತ ಹೋಗದ ಆನೆಗಳು ಸಮೀಪದ ಕಾಫಿ, ಅಡಿಕೆ ತೋಟಗಳಿಗೆ ನುಗ್ಗಿ ಕಾಫಿ, ಅಡಿಕೆ ಗಿಡಗಳನ್ನು ಹಾಳು ಮಾಡುತ್ತಿದೆ. ತೋಟಗಳಲ್ಲಿರುವ ಹಲಸು, ಬಾಳೆ, ಬಿದಿರುಗಳನ್ನು ತಿನ್ನುತ್ತಾ ತೋಟಗಳಲ್ಲೇ ಬೀಡು ಬಿಟ್ಟಿರುವ ಆನೆಗಳನ್ನು ಸ್ಥಳೀಯರು ಪಟಾಕಿ ಸಿಡಿಸಿ ಓಡಿಸಲು ಪ್ರಯತ್ನ ನಡೆಸುತ್ತಿದ್ದರೂ ಆನೆಗಳು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ದಾಳಿ ಇಡುತ್ತಾ ಗ್ರಾಮಸ್ಥರೊಂದಿಗೆ ಚೆಲ್ಲಾಟವಾಡುತ್ತಿವೆ. ಇಷ್ಟಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಾರದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಕಾಡಾನೆಗಳಿಂದ ಗ್ರಾಮಸ್ಥರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಆನೆಗಳು ಸಾರ್ವಜನಿಕರು ಓಡಾಡುವ ರಸ್ತೆಗಳಲ್ಲೇ ತಿರುಗಾಡುತ್ತಿದ್ದು, ಗ್ರಾಮಸ್ಥರ ಪ್ರಾಣಕ್ಕೆ ಕುತ್ತಾಗುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳನ್ನು ಓಡಿಸಲು ಕ್ರಮವಹಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೂಡಿಗೆರೆ ಭಾಗದಲ್ಲಿ ಮಾತ್ರವಲ್ಲದೇ ಚಿಕ್ಕಮಗಳೂರು ತಾಲೂಕಿನಲ್ಲೂ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಬುಧವಾರ ರಾತ್ರಿ ತಾಲೂಕಿನ ಹಳಸಬಾಳು ಗ್ರಾಮದ ಪವಿತ್ರ ನಗರದಲ್ಲಿ ಫಯಾಝ್ ಅಹ್ಮದ್ ಎಂಬವರ ಶುಂಠಿ ಗದ್ದೆಗೆ ಆನೆಗಳು ದಾಳಿ ಮಾಡಿದ್ದು, ಸುಮಾರು 2 ಎಕರೆ ಶುಂಠಿ ಬೆಳೆಯನ್ನು ಕಾಡಾನೆಗಳು ತುಳಿದು ಹಾಳು ಮಾಡಿವೆ. ಅಲ್ಲದೇ ತಾಲೂಕಿನ ಮಲ್ಲಂದೂರು ಹೋಬಳಿ ವ್ಯಾಪ್ತಿಯಲ್ಲಿ ಕಾಫಿ ತೋಟಕ್ಕೆ ದಾಳಿ ಇಟ್ಟಿದ್ದ ಕಾಡಾನೆಗಳನ್ನು ಓಡಿಸಲು ಮುಂದಾಗಿದ್ದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಆನೆಯೊಂದು ಅಟ್ಟಿಸಿಕೊಂಡು ಬಂದಿರುವ ಘಟನೆ ಬುಧವಾರ ನಡೆದಿದೆ. ಸಿಬ್ಬಂದಿ ಕಾಫಿ ತೋಟಗಳ ಮಧ್ಯೆ ಓಡಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಿಂಗಳ ಹಿಂದೆ ಆಲ್ದೂರು ಭಾಗದಲ್ಲಿ ತೋಟಕ್ಕೆ ನುಗ್ಗಿದ್ದ ಆನೆಗಳನ್ನು ಓಡಿಸುವ ಸಂದರ್ಭ ಆನೆ ದಾಳಿಗೆ ಸಿಲುಕಿ ಆಲ್ದೂರು ಅರಣ್ಯ ವಲಯದ ಸಿಬ್ಬಂದಿಯೊಬ್ಬರು ಬಲಿಯಾದ ಘಟನೆಯೂ ನಡೆದಿತ್ತು.

ಕಳೆದ ಕೆಲ ದಿನಗಳಿಂದ ಆನೆಗಳು ಇಡಕಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಣಿಸಿಕೊಳ್ಳುತ್ತಿವೆ. ಆದರೆ ಯಾರಿಗೂ ತೊಂದರೆ ನೀಡಿಲ್ಲ. ಆನೆಗಳು ಅಲ್ಲಿನ ಕಾಡಿನಲ್ಲಿ ಬೀಡು ಬಿಟ್ಟಿವೆ. ಆನೆಗಳು ಹಾವಳಿ ಬಗ್ಗೆ ಗ್ರಾಮಸ್ಥರು ಇದುವರೆಗೂ ಲಿಖಿತ ದೂರು ನೀಡಿಲ್ಲ.
- ಸುಂದರೇಶ್, ಕಳಸ ಉಪ ವಲಯಾರಣ್ಯಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X