Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಬೇಡ್ಕರ್ ತತ್ವಗಳನ್ನು ಅರಿತಾಗ...

ಅಂಬೇಡ್ಕರ್ ತತ್ವಗಳನ್ನು ಅರಿತಾಗ ಸಂವಿಧಾನದ ಆಶಯಗಳ ಅನುಷ್ಠಾನ ಸಾಧ್ಯ: ನಿಜಗುಣಾನಂದ ಶ್ರೀ

ವಾರ್ತಾಭಾರತಿವಾರ್ತಾಭಾರತಿ1 July 2021 11:14 PM IST
share
ಅಂಬೇಡ್ಕರ್ ತತ್ವಗಳನ್ನು ಅರಿತಾಗ ಸಂವಿಧಾನದ ಆಶಯಗಳ ಅನುಷ್ಠಾನ ಸಾಧ್ಯ: ನಿಜಗುಣಾನಂದ ಶ್ರೀ

ಬೆಳಗಾವಿ, ಜು.1: ಅಂಬೇಡ್ಕರ್ ಅವರ ತತ್ವಗಳನ್ನು ಕೇವಲ ಕಾನೂನು ನ್ಯಾಯಾಂಗದ ಚೌಕಟ್ಟಿನಲ್ಲಿ ಮಾತ್ರ ಜನರು ಒಪ್ಪಿಕೊಳ್ಳುತ್ತಾರೆ. ಆದರೆ  ಹೃದಯಾಳದಲ್ಲಿ ಅವರ ತತ್ವಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಂವಿಧಾನವನ್ನು ಅರಿಯಬಹುದು ಎಂದು ಬೈಲೂರಿನ ನಿಷ್ಕಲ ಮಂಟಪ ಹಾಗೂ ಮುಂಡರಗಿಯ ತೋಂಟದಾರ್ಯ ಮಠದ ನಿಜಗುಣಾನಂದ ಶ್ರೀಗಳು ಅಭಿಪ್ರಾಯಪಟ್ಟರು.

ಬೆಳಗಾವಿ ಜಿಲ್ಲೆಯ ಮುಗುಟಖಾನ್ ಹುಬ್ಬಳ್ಳಿಯ ಹೊಳೆಹೊಸೂರು ರಸ್ತೆಯಲ್ಲಿರುವ ಅನುಭವ ಮಂಟಪದಲ್ಲಿ ಇಂದು 'ಆಜಾದಿ ಕಾ ಅಮೃತ ಮಹೋತ್ಸವ' ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಧಾರವಾಡ ರಂಗಾಯಣ ನಿರ್ಮಿಸುತ್ತಿರುವ 'ಸರ್ವರಿಗೂ ಸಂವಿಧಾನ' ನಾಟಕ ತರಬೇತಿ ಹಾಗೂ ಸಿದ್ಧತಾ ಶಿಬಿರದ ಸಾನಿಧ್ಯ ವಹಿಸಿ ಮಾತನಾಡಿದರು. 

ಕಲಾವಿದರು ಯಾವುದೇ ಒಂದು ನಾಟಕವನ್ನು ಆರಂಭಿಸುವ ಮೊದಲು ಅದರ ಇತಿಹಾಸವನ್ನು ಅರಿತಾಗ ಮಾತ್ರ ಪಾತ್ರಗಳಿಗೆ ಜೀವ ತುಂಬಲು ಸಾಧ್ಯ. ನಾಟಕಗಳ ಮೂಲಕ ಜನರಲ್ಲಿ ತಿಳುವಳಿಕೆ, ಜ್ಞಾನವನ್ನು ನೀಡಿ, ಅವರ ಮನಸ್ಸನ್ನು ಪರಿವರ್ತನೆಗೊಳಿಸುವುದು ಮುಖ್ಯವಾಗಿರುತ್ತದೆ ಎಂದು ಹೇಳಿದರು.

ಒಂದು ತಿಂಗಳ ಶಿಬಿರಕ್ಕೆ ಚಾಲನೆ ನೀಡಿದ ಸಾಮಾಜಿಕ ಹೋರಾಟಗಾರರಾದ ಲಕ್ಷ್ಮಣ ಬಕ್ಕಾಯಿ ಮಾತನಾಡಿ, ದೇಶದಲ್ಲಿರುವ ಅನಕ್ಷರಸ್ಥ ಜನರಿಗೆ ಜಾನಪದ ಕಲೆಗಳಾದ ಹಾಡು, ನಾಟಕಗಳ ಮೂಲಕ ಸಂವಿಧಾನದ ಕುರಿತು ಅರಿವು ಮೂಡಿಸಲು ಸಾಧ್ಯ. ವಿದ್ಯಾವಂತ ಜನರು ಸಂವಿಧಾನವನ್ನು ಓದಿ ತಿಳಿದುಕೊಂಡಿರುತ್ತಾರೆ. ಆದರೆ ಅನಕ್ಷರಸ್ಥ ಹಾಗೂ ಗ್ರಾಮೀಣ ಪ್ರದೇಶದ ಜನರಿಗೂ ಸಂವಿಧಾನದ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಸರಕಾರ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಮ್ಮ ಸಂವಿಧಾನ ಆಶಯ ವಿವರಿಸಲು ಪ್ರಯತ್ನಿಸುತ್ತಿದೆ. ಅಂಬೇಡ್ಕರ್ ಅವರು ದಲಿತ ಸಮಾಜಕ್ಕೆ ಮಾತ್ರವಲ್ಲದೆ ಇಡೀ ದೇಶದ ಸಮಸ್ತ ಜೀವ ಸಂಕುಲದ ವ್ಯವಸ್ಥಿತವಾದ ಜೀವನಕ್ಕೆ ಒಂದು ಚೌಕಟ್ಟನ್ನು ಒದಗಿಸಿಕೊಟ್ಟ ಸಂವಿಧಾನವನ್ನು ಬರೆದಿದ್ದಾರೆ ಎಂದು ತಿಳಿಸಿದರು. 

ಬೈಲಹೊಂಗಲ ಡಿವೈಎಸ್ಪಿ ಶಿವಾನಂದ ಕಟಗಿ ಮಾತನಾಡಿ, ಒಬ್ಬ ವ್ಯಕ್ತಿ ದುರ್ಬಲ ಅಥವಾ ಸಬಲನಾಗಿರಲಿ ಅವನು ತನ್ನ ಗುರಿಯನ್ನು ತಲುಪಲು ಸಂವಿಧಾನ ಸಮಾನವಾದ ಅವಕಾಶ ಹಾಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. ಮಾನವನಿಗೆ ಅವಶ್ಯವಿರುವ ಸಮಾನವಾದ ಸಮಾಜ ಸ್ಥಾಪಿಸಲು ಸಂವಿಧಾನ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. 

ರಂಗಾಯಣ ನಿರ್ದೇಶಕ ರಮೇಶ ಪರವಿನಾಯ್ಕರ್ ಮಾತನಾಡಿ, ರಂಗಾಯಣಗಳು ಮೂರು ವರ್ಷಕ್ಕೊಮ್ಮೆ ಕಲಾವಿದರನ್ನು ಆಯ್ಕೆ ಮಾಡಿಕೊಂಡು, ಅವರಿಗೆ ತರಬೇತಿ ನೀಡಿ, ನಶಿಸಿ ಹೋಗುತ್ತಿರುವ ಜಾನಪದ ಕಲೆಗಳನ್ನು ಉಳಿಸಿ ಬೆಳಸಲು ಶ್ರಮಿಸುತ್ತಿವೆ. ಧಾರವಾಡ ರಂಗಾಯಣವು ರಂಗನವಮಿ, ಮಹಿಳೆಯರಿಗಾಗಿ ಮಹಿಳಾ ನಾಟಕೋತ್ಸವ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಮಾಡುವ ಮೂಲಕ ಕಲೆಯನ್ನು ಪ್ರೋತ್ಸಾಹಿಸುತ್ತಿದೆ ಎಂದರು.

ರಂಗಕರ್ಮಿ ಮಹಾದೇವ ದೊಡಮನಿ, ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಡಾ.ಜಗದೀಶ ಹಾರುಗೊಪ್ಪ, ಸಾಹಿತಿ ಶಬಾನಾ ಅಣ್ಣಿಗೇರಿ, ಎಂ.ಕೆ ಹುಬ್ಬಳ್ಳಿಯ ಬ್ಯಾಂಕ್ ಆಫ್ ಇಂಡಿಯಾ ಹಿರಿಯ ಶಾಖಾ ವ್ಯವಸ್ಥಾಪಕ ಮಹರ್ಷಿ ಪುಟ್ಟಾ, ರಂಗಸಮಾಜ ಸದಸ್ಯರಾದ ಹಿಪ್ಪರಗಿ ಸಿದ್ಧರಾಮ ಸೇರಿದಂತೆ ಇತರರು ಇದ್ದರು. 

ನಾಟಕ ನಿರ್ದೇಶಕರಾದ ಬಾಬಾಸಾಹೇಬ ಕಾಂಬ್ಳೆ, ಸಹನಿರ್ದೇಶಕರಾದ ವಿಜಯ ದೊಡಮನಿ ಇವರನ್ನು ಸನ್ಮಾನಿಸಲಾಯಿತು‌. ರಂಗಕರ್ಮಿ ಮಹಾದೇವ ದೊಡಮನಿ ಅವರು ಸಂವಿಧಾನ ಕುರಿತು ಉಪನ್ಯಾಸ ನೀಡಿದರು.

ಎಂ.ಕೆ.ಹುಬ್ಬಳ್ಳಿಯಲ್ಲಿ ಸುಮಾರು 25 ದಿನಗಳ ಕಾಲ ಈ ತರಬೇತಿ ಶಿಬಿರ ನಡೆಯಲಿದೆ. ವಿವಿಧ ವಿಷಯಗಳ ಸಂಪನ್ಮೂಲ ವ್ಯಕ್ತಿಗಳು, ತಜ್ಞರು ತರಬೇತಿ ನೀಡಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X