Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಂ.1 ಕೈಗಾರಿಕಾ ಸ್ನೇಹಿ ರಾಜ್ಯವಾಗುವತ್ತ...

ನಂ.1 ಕೈಗಾರಿಕಾ ಸ್ನೇಹಿ ರಾಜ್ಯವಾಗುವತ್ತ ಕರ್ನಾಟಕ ದಾಪುಗಾಲು: ಸಚಿವ ಜಗದೀಶ್ ಶೆಟ್ಟರ್

`ಎಂಎಸ್ಎಂಇಗಳಿಗೆ ಅಗತ್ಯ ಪ್ರೋತ್ಸಾಹ'

ವಾರ್ತಾಭಾರತಿವಾರ್ತಾಭಾರತಿ2 July 2021 8:02 PM IST
share
ನಂ.1 ಕೈಗಾರಿಕಾ ಸ್ನೇಹಿ ರಾಜ್ಯವಾಗುವತ್ತ ಕರ್ನಾಟಕ ದಾಪುಗಾಲು: ಸಚಿವ ಜಗದೀಶ್ ಶೆಟ್ಟರ್

ಬೆಂಗಳೂರು, ಜು. 2: `ಕೊರೋನ ಸಂಕಷ್ಟ ಕಾಲದಲ್ಲೂ ಕರ್ನಾಟಕ ರಾಜ್ಯ ಅತಿಹೆಚ್ಚು ಬಂಡವಾಳ ಹೂಡಿಕೆಯ ಪ್ರಸ್ತಾಪಗಳನ್ನು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸರಕಾರ ಹೊರತಂದಿರುವ ಕ್ರಾಂತಿಕಾರಿ ಕಾನೂನುಗಳು ಹಾಗೂ ನೀತಿಗಳಿಂದ ಕರ್ನಾಟಕ ರಾಜ್ಯ ದೇಶದಲ್ಲಿ ನಂ.1 ಕೈಗಾರಿಕಾ ಸ್ನೇಹಿ ರಾಜ್ಯವಾಗುವತ್ತ ದಾಪುಗಾಲು ಇಡುತ್ತಿದೆ' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಶುಕ್ರವಾರ ಬೆಂಗಳೂರು ನಗರದಲ್ಲಿ ಲಘು ಉದ್ಯೋಗ ಭಾರತಿ ಕರ್ನಾಟಕ, ಬೆಂಗಳೂರು ಉತ್ತರ ಪೀಣ್ಯ ಘಟಕದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಅವರು, `ಕರ್ನಾಟಕ ರಾಜ್ಯವನ್ನು ಇನ್ನೂ ಹೆಚ್ಚು ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೈಗೊಂಡಿರುವ ಕ್ರಾಂತಿಕಾರಿ ಕಾನೂನು ಹಾಗೂ ನೀತಿಗಳು ಫಲ ನೀಡುತ್ತಿವೆ' ಎಂದರು.

`ಕೊರೋನ ಸಂಕಷ್ಟ ಕಾಲದಲ್ಲೂ ಬಂಡವಾಳ ಹೂಡಿಕೆಯ ಪ್ರಸ್ತಾವನೆಯಲ್ಲಿ ರಾಜ್ಯ ಮೊದಲ ಸ್ಥಾನ ಪಡೆದುಕೊಂಡಿದ್ದರೆ, ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಮೂರನೆ ಸ್ಥಾನ ಪಡೆದುಕೊಂಡಿದೆ. ಇದೇ ರೀತಿಯ ಟ್ರೆಂಡ್ ಮುಂದುವರೆದಲ್ಲಿ ನಂ. 1 ಸ್ಥಾನ ಪಡೆದುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ರಾಜ್ಯ ಹಾಗೂ ಕೇಂದ್ರ ಸರಕಾರಗಳು ಸಣ್ಣ ಕೈಗಾರಿಕೆಗಳಿಗೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿವೆ. ಕೊರೋನ ಸಂಕಷ್ಟ ಕಾಲದಲ್ಲಿ ಎಲ್ಲ ಕ್ಷೇತ್ರಗಳು ತೀವ್ರ ತೊಂದರೆಗೀಡಾಗಿವೆ. ಇದಕ್ಕೆ ಸಣ್ಣ ಕೈಗಾರಿಕೆಗಳು ಹೊರತಾಗಿಲ್ಲ. ದೇಶದ ಜಿಡಿಪಿ ಹಾಗೂ ಉದ್ಯೋಗಾವಕಾಶ ಹೆಚ್ಚಳಕ್ಕೆ ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರ. ಇವುಗಳ ಪುನಶ್ಚೇತನಕ್ಕೆ ರಾಜ್ಯ ಸರಕಾರ ಹೆಚ್ಚಿನ ಒಲುವು ನೀಡುತ್ತಿದೆ' ಎಂದು ತಿಳಿಸಿದರು. 

ವಿದ್ಯುತ್ ದರ ಇಳಿಕೆ: `ರಾಜ್ಯದಲ್ಲಿ ಕೈಗಾರಿಕೆಗಳ ಬಳಸುವ ವಿದ್ಯುತ್ ಮೇಲೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತಿರುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಅವರು ಕೈಗಾರಿಕೆಗಳಿಗೆ ವಿಧಿಸುವ ಶುಲ್ಕದಲ್ಲಿ ಕಡಿಮೆ ಮಾಡುವ ನಿಟ್ಟಿನಲ್ಲಿ ಒಲವು ತೋರಿಸಿದ್ದಾರೆ. ಈ ಬಗ್ಗೆ ಕೆಲವೇ ದಿನಗಳಲ್ಲಿ ಸ್ಪಷ್ಟ ನಿರ್ಧಾರ ಹೊರಬೀಳಲಿದೆ' ಎಂದು ಜಗದೀಶ್ ಶೆಟ್ಟರ್ ಇದೇ ವೇಳೆ ಭರವಸೆ ನೀಡಿದರು. 

ಪೀಣ್ಯ ಕೈಗಾರಿಕಾ ಟೌನ್ ಶಿಪ್: `ರಾಜ್ಯದಲ್ಲಿ ಕೈಗಾರಿಕಾ ಟೌನ್ ಶಿಪ್ ಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವಾರು ಸುತ್ತಿನ ಚರ್ಚೆಗಳು ನಡೆದಿವೆ. ಆದರೆ, ಇವುಗಳ ಘೋಷಣೆಗಾಗಿ ಹಲವಾರು ಇಲಾಖೆಗಳ ಅನುಮತಿ ಅಗತ್ಯವಿದ್ದು, ಇನ್ನು ಕೆಲವೇ ದಿನಗಳಲ್ಲಿ ಸಂಪುಟದ ಮುಂದೆ ವಿಷಯ ಮಂಡಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಶೆಟ್ಟರ್ ಹೇಳಿದರು. 

ಕೈಗಾರಿಕೆಗಳಿಗೆ ಆಸ್ತಿ ತೆರಿಗೆ: `ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಗಳ ಮಧ್ಯದಲ್ಲಿ ಕೈಗಾರಿಕೆಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ ಸ್ಲ್ಯಾಬನ್ನು ಘೋಷಿಸಬೇಕು ಎನ್ನುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಇದರ ಬಗ್ಗೆಯೂ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದ ಅವರು, ಸಣ್ಣ ಕೈಗಾರಿಕೆಗಳಿಗೆ ಆಕ್ಯೂಪೆನ್ಸಿ ಪ್ರಮಾಣ ಪತ್ರದ ಬಗ್ಗೆ ಆಗುತ್ತಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿದ್ಯುತ್ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಆದರೆ, ಇದುವರೆಗೂ ಅದರ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ. ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಭರವಸೆ ನೀಡಿದರು. 

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ಎನ್.ತಿಪ್ಪೇಸ್ವಾಮಿ, ಲಘು ಉದ್ಯೋಗ ಭಾರತಿ ಕರ್ನಾಟಕದ ಅಧ್ಯಕ್ಷ ಪಿ.ಎಸ್.ಶ್ರೀಕಂಠ ದತ್ತ, ಲಘು ಉದ್ಯೋಗ ಭಾರತಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ಕೆ.ನಾರಾಯಣ ಪ್ರಸನ್ನ, ಲಘು ಉದ್ಯೋಗ ಭಾರತಿ ಕರ್ನಾಟಕ, ಬೆಂಗಳೂರು ಉತ್ತರದ ಅಧ್ಯಕ್ಷ ಅಶ್ವತ್ಥ ನಾರಾಯಣ ಸೇರಿದಂತೆ ನೂರಾರು ಕೈಗಾರಿಕೋದ್ಯಮಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X