Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೀವ ವೈವಿಧ್ಯ ಸಂರಕ್ಷಣೆಗೆ ಸ್ಥಳಿಯರೇ...

ಜೀವ ವೈವಿಧ್ಯ ಸಂರಕ್ಷಣೆಗೆ ಸ್ಥಳಿಯರೇ ಮುಂದಾಗಬೇಕು: ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ2 July 2021 9:54 PM IST
share
ಜೀವ ವೈವಿಧ್ಯ ಸಂರಕ್ಷಣೆಗೆ ಸ್ಥಳಿಯರೇ ಮುಂದಾಗಬೇಕು: ಯಡಿಯೂರಪ್ಪ

ಬೆಂಗಳೂರು, ಜು.2: ಕನ್ನಡನಾಡಿನ ಕೆರೆ, ನದಿ, ಕಣಿವೆಗಳು, ನಿಸರ್ಗ ಸಂಪತ್ತು ಸಂರಕ್ಷಣೆಗೆ ಸ್ಥಳೀಯ ಜನರೇ ಮುಂದಾಗಬೇಕು. ಈ ಬಗ್ಗೆ ಜಾಗೃತಿ ಉಂಟು ಮಾಡಲು ಜೀವ ವೈವಿಧ್ಯ ಮಂಡಳಿ ರಚನಾತ್ಮಕ ಆಂದೋಲನ ಕೈಗೆತ್ತಿಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಜೀವ ವೈವಿಧ್ಯ ಮಂಡಳಿ ಆಯೋಜಿಸಿರುವ ರಾಜ್ಯವ್ಯಾಪಿ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಸರಕಾರ ಬಜೆಟ್‍ನಲ್ಲಿ ನವೀನ ಪರಿಸರ-ಅರಣ್ಯ ಅಭಿವೃದ್ಧಿ ಯೋಜನೆಗಳನ್ನು ಪ್ರಕಟಿಸಿದೆ. ತುಮಕೂರು ಹಾಗೂ ಉಡುಪಿಯಲ್ಲಿ ಜೀವವೈವಿಧ್ಯ ಮಂಡಳಿ ಕೋರಿಕೆಯಂತೆ ಸ್ಮøತಿ ವನ ನಿರ್ಮಾಣ ಮಾಡಲಿದೆ. ನಾಡಿನ ಜಲ-ಜಂಗಲ್ ಸಂರಕ್ಷಣೆಗೆ ಜೀವ ವೈವಿಧ್ಯ ಅಭಿಯಾನ ಕೊಡುಗೆ ನೀಡಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಜೀವ ವೈವಿಧ್ಯ ಜಾಗೃತಿ ಅಭಿಯಾನವನ್ನು ಜು.1ರಿಂದ ಆ.15ರವರೆಗೆ ರಾಜ್ಯದೆಲ್ಲೆಡೆ ನಡೆಸಲು ಉದ್ದೇಶಿಸಲಾಗಿದೆ. ರಾಜ್ಯದಲ್ಲಿ ತಳ ಮಟ್ಟದಲ್ಲಿ ಪಂಚಾಯತ್‍ಗಳ, ನಗರ ಸಂಸ್ಥೆಗಳಲ್ಲಿ ರಚಿಸಲಾಗಿರುವ ಜೀವ ವೈವಿಧ್ಯ ಸಮಿತಿಗಳನ್ನು ಸಕ್ರಿಯಗೊಳಿಸಬೇಕು. ಸ್ಥಾನಿಕವಾಗಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿನ ನಿಸರ್ಗ ಸಂಪತ್ತಿನ ಪರಿಸ್ಥಿತಿಯ ಅವಲೋಕನವಾಗಬೇಕು. ಕೆರೆಗಳ ಪುನಶ್ಚೇತನ, ವನಗಳ ಪುನಶ್ಚೇತನ ಕಾರ್ಯಗಳಲ್ಲಿ ಜನತೆ ಪಾಲ್ಗೊಳ್ಳಬೇಕು ಎಂಬ ಉದ್ದೇಶದಿಂದ ಜೀವ ವೈವಿಧ್ಯ ಜಾಗೃತಿ ಅಭಿಯಾನವನ್ನು ರೂಪಿಸಲಾಗಿದೆ ಎಂದರು.

ಸಂಘ-ಸಂಸ್ಥೆ, ಶಿಕ್ಷಣ ಸಂಸ್ಥೆಗಳು ನಗರ ಸಭೆಗಳು, ಪಂಚಾಯತ್‍ರಾಜ್ ಸಂಸ್ಥೆಗಳ ಮೂಲಕ ವಿಧಾಯಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ವೃಕ್ಷಾರೋಪಣ, ಕೆರೆಗಳ ಸಮೀಕ್ಷೆ, ಸಾಧಕರಿಗೆ ಸಂಮಾನ, ಸ್ಪರ್ಧೆ, ಸಸಿಸಂತೆ, ಜೀವ ವೈವಿಧ್ಯ ದಾಖಲಾತಿ ವರಿದಿಗಳ ಬಿಡುಗಡೆ ಇತ್ಯಾದಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ. ಅರಣ್ಯ ಇಲಾಖೆ, ಪಂಚಾಯತ್‍ರಾಜ್ ಇಲಾಖೆ, ನಗರ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಅಭಿಯಾನ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕರಾವಳಿಯ ಪರಿಸರ ಪರಿಸ್ಥಿತಿಯ ಮಂಥನ ಸಭೆಯನ್ನು ಜುಲೈನಲ್ಲಿ ಹೊನ್ನಾವರದಲ್ಲಿ ಆಯೋಜಿಸಲಾಗಿದೆ. ಹಾಸನ ಗೆಂಡೆಕಟ್ಟೆಯಲ್ಲಿ ಜೀವವೈವಿಧ್ಯ ವನ ನಿರ್ಮಾಣಕ್ಕೆ ಮುಂದಾಗಿದ್ದೇವೆ. 5 ಜಿಲ್ಲೆಗಳಲ್ಲಿ ರಕ್ತಚಂದನ, ಶ್ರೀಗಂಧ, ಸೀತಾ ಅಶೋಕ ಸೇರಿದಂತೆ ವಿನಾಶದ ಅಂಚಿನ ಸಸ್ಯಗಳ ವನ ನಿರ್ಮಾಣ, ಪುನಶ್ಚೇತನ ಯೋಜನೆಗೆ ಚಾಲನೆ ನೀಡಲಿದ್ದೇವೆ.

-ಅನಂತ ಹೆಗಡೆ ಅಶೀಸರ,
ಅಧ್ಯಕ್ಷ, ಕರ್ನಾಟಕ ಜೀವ ವೈವಿಧ್ಯ ಮಂಡಳಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X