ಅಪರ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ಜು.2: ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಅಪರ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯ ಕಾನೂನು ಶಾಖೆಯಲ್ಲಿ ಅರ್ಜಿ ಪಡೆಯಬಹುದು. ಅರ್ಜಿಯೊಂದಿಗೆ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ ವರ್ಗ ಮತ್ತು 7 ವರ್ಷ ವಕೀಲಿ ವೃತ್ತಿಯನ್ನು ಪೂರೈಸಿರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ, ವಿವಿಧ ರೀತಿಯ ಕ್ಲಿಷ್ಟಕರ ಮತ್ತು ಸಂಕೀರ್ಣ ವಿಚಾರಗಳನ್ನು ಒಳಗೊಂಡ ವಿವರ, ಅವಧಿ ಮತ್ತು ಅನುಭವಗಳ ಪುರಾವೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅದರೊಂದಿಗೆ ವಿಶೇಷ ಅರ್ಹತೆಗಳು ಇದ್ದಲ್ಲಿ ದಾಖಲೆಗಳನ್ನು ಲಗತ್ತಿಸಿರಬೇಕು. ಅರ್ಜಿ ಸಲ್ಲಿಸಲು ಜು.14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.
Next Story