ಕಿಂಡಿ ಅಣೆಕಟ್ಟು ಯೋಜನೆಗೆ 500 ಕೋಟಿ ರೂ. ನಿಗದಿ ಪಡಿಸಲಾಗಿದೆ : ಸಚಿವ ಜೆ.ಸಿ.ಮಾಧುಸ್ವಾಮಿ
![ಕಿಂಡಿ ಅಣೆಕಟ್ಟು ಯೋಜನೆಗೆ 500 ಕೋಟಿ ರೂ. ನಿಗದಿ ಪಡಿಸಲಾಗಿದೆ : ಸಚಿವ ಜೆ.ಸಿ.ಮಾಧುಸ್ವಾಮಿ ಕಿಂಡಿ ಅಣೆಕಟ್ಟು ಯೋಜನೆಗೆ 500 ಕೋಟಿ ರೂ. ನಿಗದಿ ಪಡಿಸಲಾಗಿದೆ : ಸಚಿವ ಜೆ.ಸಿ.ಮಾಧುಸ್ವಾಮಿ](https://www.varthabharati.in/sites/default/files/images/articles/2021/07/3/297360-1625330654.jpg)
ಮಂಗಳೂರು, ಜು.3: ರಾಜ್ಯದಲ್ಲಿ ಪಶ್ಚಿಮ ವಾಹಿನಿ ಯೋಜನೆಯ ಪ್ರಕಾರ ಹರಿಯುವ ನದಿ ಗಳಿಗೆ ಸುಮಾರು 3-4. ಕಿ.ಮೀ ಅಂತರ ದಲ್ಲಿ ಅಲ್ಲಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲು ರಾಜ್ಯ ಬಜೆಟ್ ನಲ್ಲಿ 500 ಕೋಟಿ ರೂ. ನಿಗದಿ ಪಡಿಸಲಾಗಿದೆ ಎಂದು ಸಣ್ಣ ನೀರಾವರಿ ಖಾತೆ ಯ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅವರು ಇಂದು ದ.ಕ ಜಿಲ್ಲೆಯ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ದ.ಕ ಜಿಲ್ಲೆಯ ವಿವಿಧ ವಿಧಾನ ಸಭಾ ಕ್ಷೇತ್ರದ ಶಾಸಕರ ಜೊತೆ ಪಶ್ಚಿಮ ವಾಹಿನಿ ಯೋಜನೆಯ ಅನುಷ್ಠಾನ ದ ಬಗ್ಗೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸಮಾ ಲೋಚನಾ ಸಭೆ ನಡೆಸಿದರು.
ಈ ಯೋಜನೆಯ ಮುಖ್ಯ ಉದ್ದೇಶ ಕೃಷಿ ಜಮೀನುಗಳಿಗೆ ನೀರು ಒದಗಿಸುವುದು ಮತ್ತು ಕುಡಿಯುವ ನೀರು ಪೂರೈಕೆ ಮಾಡುವುದಾಗಿದೆ. ಅಂತರ್ಜಲದ ಅಭಿವೃದ್ಧಿಗೂ ಇದರಿಂದ ಸಹಾಯಕವಾಗಲಿದೆ. ಪಶ್ಚಿಮಾ ಮುಖವಾಗಿ ಹರಿದು ಸಮುದ್ರ ಸೇರುವ ನದಿಗಳಿಗೆ ಕಿಂಡಿ ಅಣೆಕಟ್ಟು ನಿರ್ಮಿ ಸುವ ಈ ಯೋಜನೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೀರಿನ ಅಭಾವದ ಸಮಸ್ಯೆ ನಿವಾರಿಸಲು ಮತ್ತು ಅಂತರ್ಜಲ ದ ಅಭಿವೃದ್ಧಿ ಗೆ ಸಹಕಾರಿಯಾಗಲಿದೆ ಎಂದು ಮಾಧು ಸ್ವಾಮಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್, ಯು.ಟಿ. ಖಾದರ್, ಸಂಜೀವ ಮಠಂದೂರು, ಭರತ್ ಶೆಟ್ಟಿ ಮೊದಲಾದ ವರು ಉಪಸ್ಥಿತರಿದ್ದರು.